ದೂರು-ದುಮ್ಮಾನಗಳಿಗೆ ಪಾಲಿಕೆ ಕಿವುಡು

•ಸಮಸ್ಯೆಗಳ ಪರಿಹಾರ ಹಾಗಿರಲಿ, ಕನಿಷ್ಟ ಸ್ಪಂದನೆಯೂ ಇಲ್ಲ•ಸಾರ್ವಜನಿಕರ ಆಕ್ರೋಶ

Team Udayavani, Jun 14, 2019, 1:31 PM IST

hubali-tdy-5..

ಹುಬ್ಬಳ್ಳಿ: ಮೂಲಭೂತ ಸೌಲಭ್ಯಗಳ ಕೊರತೆ ಸೇರಿದಂತೆ ಇತರೆ ದೂರು-ದುಮ್ಮಾನಗಳ ಬಗ್ಗೆ ಪಾಲಿಕೆ ಅಧಿಕಾರಿಗಳ ದಿವ್ಯಮೌನ ವಹಿಸಿರುವುದು ಮಹಾನಗರ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ನಾಗರಿಕ ಸಮಸ್ಯೆಗಳಿಗೆ ತಿಂಗಳುಗಟ್ಟಲೆ ಪರಿಹಾರ ಇಲ್ಲದಿರುವುದು ಗಮನಿಸಿದರೆ ಪಾಲಿಕೆ ಜೀವಂತ ಇದೆಯೋ, ಇಲ್ಲವೋ ಎಂಬ ಅನುಮಾನ ಅನೇಕರನ್ನು ಕಾಡತೊಡಗಿದೆ.

ಜನತೆ ಸಮಸ್ಯೆಗಳ ಬಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಂಟ್ರೋಲ್ ರೂಂಗೆ ದೂರು ನೀಡಿದರೂ ಪಾಲಿಕೆ ಸಂಬಂಧಿಸಿದ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಜನರ ಸಮಸ್ಯೆ, ದೂರು-ದುಮ್ಮಾನಗಳನ್ನು ಸ್ವೀಕರಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ರವಾನಿಸುವುದು ಹಾಗೂ ಸಮಸ್ಯೆಗೆ ಪರಿಹಾರ ನಂತರ ದೂರುದಾರರಿಗೆ ಮಾಹಿತಿ ನೀಡುವ ಮಹತ್ವದ ಉದ್ದೇಶದಿಂದ ಪಾಲಿಕೆ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಆದರೆ ಜನರು ಕಂಟ್ರೋಲ್ ರೂಂಗೆ ದೂರು ನೀಡುವುದಷ್ಟೇ ನಡೆಯುತ್ತಿದ್ದು, ಪಾಲಿಕೆಯಿಂದ ಪರಿಹಾರ ಇರಲಿ ಬಹುತೇಕ ಸ್ಪಂದನೆಯೂ ಇಲ್ಲವಾಗುತ್ತಿದೆ ಎಂಬ ಅಳಲು ನಾಗರಿಕರದ್ದಾಗಿದೆ.

ಪರಿಹಾರ ಶೂನ್ಯ: ಬೀದಿ ದೀಪ ಸರಿಯಾಗಿ ಉರಿಯುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ಕಳೆದ ತಿಂಗಳು ದೂರು ನೀಡಿದ್ದಾರೆ. ಇದಕ್ಕೆ ಪಾಲಿಕೆ ಅಧಿಕಾರಿಯೊಬ್ಬರ ದೂರವಾಣಿ ಸಂಖ್ಯೆ ನೀಡಲಾಗಿದೆ. ಅವರಿಗೆ ಫೋನಾಯಿಸಿದರೆ ಅವರು ಮತ್ತೂಬ್ಬರ ದೂರವಾಣಿ ಸಂಖ್ಯೆ ನೀಡುತ್ತಿದ್ದಾರೆಯೇ ವಿನಃ ಸಮಸ್ಯೆಗೆ ಪರಿಹಾರವಂತೂ ಕಾಣುತ್ತಿಲ್ಲ.

ಹಳೇಹುಬ್ಬಳ್ಳಿ ಆನಂದನಗರ ಬಳಿ ಇರುವ ಸಿದ್ಧರಾಮೇಶ್ವರ ನಗರದಲ್ಲಿ ಬೀದಿದೀಪ ಉರಿಯುತ್ತಿಲ್ಲವೆಂದು ಸಾರ್ವಜನಿಕ ಹನುಮಂತ ಈಳಗೇರ ಎಂಬುವರು ಮೇ 4ರಂದು ದೂರು ನೀಡಿದ್ದಾರೆ. ಕಂಪ್ಲೇಟ್ ನಂ(9704) ಇದ್ದು, ದೂರು ನೀಡಿ ಒಂದೂವರೆ ತಿಂಗಳಾದರೂ ಸಮಸ್ಯೆಗೆ ಪರಿಹಾರ ದೊರೆತಿಲ್ಲ.

ಫೇಸ್‌ಬುಕ್‌ನಲ್ಲಿ ಆಕ್ರೋಶ: ಇಲ್ಲಿನ ಭವಾನಿ ನಗರದ ನಿವಾಸಿಯೊಬ್ಬರು ಭವಾನಿ ನಗರದ ಮುಖ್ಯ ರಸ್ತೆಯಲ್ಲಿರುವ ಅರ್ಪಾರ್ಟ್‌ಮೆಂಟ್‌ನ ಚೇಂಬರ್‌ ಬ್ಲಾಕ್‌ ಆಗಿ ರಸ್ತೆಯ ಮೇಲೆಲ್ಲ ಚರಂಡಿ ನೀರು ಹರಿಯುತ್ತಿದೆ ಎಂದು ಪಾಲಿಕೆ ಕಂಟ್ರೋಲ್ ರೂಂಗೆ ಜೂ.7ರಂದು ದೂರು ನೀಡಿದ್ದು, ಕಂಪ್ಲೇಟ್ ನಂಬರ್‌ 19493ಇದ್ದು, ಪಾಲಿಕೆಯಿಂದ ಸರಿಯಾದ ಸ್ಪಂದನೆ ಇಲ್ಲ ಎಂದು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಪಾಲಿಕೆ ಹಿಂಭಾಗ ಕೇಳುವವರೇ ಇಲ್ಲ: ಹು-ಧಾ ಮಹಾನಗರ ಪಾಲಿಕೆ ಹಿಂಭಾಗದಲ್ಲಿರುವ ಚಿಟಗುಪ್ಪಿ ಪಾರ್ಕ್‌ ಕೇಳುವವರೇ ಇಲ್ಲದಂತಾಗಿದೆ. ಹಲವಾರು ತಿಂಗಳಿಂದ ಈ ಭಾಗದಲ್ಲಿ ಬೀದಿ ದೀಪಗಳೇ ಇಲ್ಲ. ಈ ಹಿಂದೆ ಪಾಲಿಕೆಗೆ ದೂರು ನೀಡಲಾಗಿತ್ತು. ಬೀದಿದೀಪದ ಲೈನ್‌ ಅನ್ನು ಹೆಸ್ಕಾಂನವರು ಕಟ್ ಮಾಡಿದ್ದಾರೆಂದು ಹೇಳಿ ಹೊರಟು ಹೋಗಿದ್ದರು. ಹೆಸ್ಕಾಂನವರಿಗೆ ದೂರು ನೀಡಿದರೆ ಪಾಲಿಕೆಯವರು ವಿದ್ಯುತ್‌ ಕಂಬಗಳಿಗೆ ಮೀಟರ್‌ ಅಳವಡಿಸಿಲ್ಲ ಆದ್ದರಿಂದ ಕಟ್ ಮಾಡಲಾಗಿದೆ ಎಂದು ಉತ್ತರ ನೀಡುತ್ತಾರೆ. ಪಾಲಿಕೆ ಹಿಂಭಾಗದಲ್ಲೇ ಇರುವ ಈ ಸ್ಥಿತಿ ಬಗ್ಗೆ ಪಾಲಿಕೆ ಅಧಿಕಾರಿಗಳು ಗಮನ ನೀಡದಿರುವುದು ವಿಪರ್ಯಾಸ ಸಂಗತಿ.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.