ರೈತರಲ್ಲಿ ಸಂತಸ ಅರಳಿಸಿದ ಏತ ನೀರಾವರಿ


Team Udayavani, Dec 18, 2019, 10:43 AM IST

huballi-tdy-4

ನವಲಗುಂದ: ಕಳಸಾ ಬಂಡೂರಿ,ಮಹದಾಯಿ ಹೋರಾಟ ಯಾವಾಗ ತಾರ್ಕಿಕ ಅಂತ್ಯ ಕಾಣುತ್ತದೆಯೋ ಗೊತ್ತಿಲ್ಲ. ಅದಕ್ಕೂ ಮುಂಚೆಯೇ ತಾಲೂಕಿನ ಅಮರಗೋಳ ಹಾಗೂ ಗೊಬ್ಬರಗುಂಪಿ ಗ್ರಾಮಗಳಲ್ಲಿ ಏತ ನೀರಾವರಿ ಯೋಜನೆ ಮೂಲಕ 10 ಸಾವಿರ ಎಕರೆಗೆ ನೀರುಣಿಸುವ ಮಹತ್ತರ ಕಾರ್ಯಕ್ಕೆ ಸ್ಥಳೀಯ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಪಣತೊಟ್ಟು ನಿಂತಿದ್ದಾರೆ. ಈ ಭಾಗದ ರೈತರು ಹೋರಾಟಕ್ಕೆ ಸದಾ ಮುಂಚೂಣಿಯಲ್ಲಿದ್ದವರು.

ನೀರಿನ ಹೋರಾಟವಂತೂ ಸತತ ನಲವತ್ತು ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ.ತಾಲೂಕಿನಲ್ಲಿ ಕಾಲುವೆ ನೀರು ಬಂದರೂ ಕಟ್ಟಕಡೆಯ ಗ್ರಾಮಗಳಿಗೆ ನೀರು ತಲುಪುವುದು ಅಷ್ಟಕ್ಕಷ್ಟೆ. ಹೀಗಾಗಿ ಗಡಿಯಂಚಿನ ರೈತರು ಮಳೆಯಾಶ್ರಿತದಿಂದ ಬೆಳೆ ತೆಗೆದುಕೊಳ್ಳುತ್ತಿದ್ದರು. ಸತತ ಐದು ವರ್ಷಗಳಿಂದ ಬರಗಾಲ-ಅತಿವೃಷ್ಟಿಯಿಂದ ಕಂಗೆಟ್ಟಿದ್ದು, ಮುಂದೊಂದು ದಿನ ಸದವಕಾಶ ಕೂಡಿ ಬರಲಿದೆ ಎಂಬ ಮಹದಾಸೆಗೆ ಈಗ ಕಾಲ ಕೂಡಿಬಂದಿದೆ.

ಶಾಸಕ ಶಂಕರಪಾಟೀಲ ಇಚ್ಛಾಶಕ್ತಿ ಫಲವಾಗಿ ಅಮರಗೋಳ ಹಾಗೂ ಗೊಬ್ಬರಗುಂಪಿ ಏತ ನೀರಾವರಿ ಯೋಜನೆ ಲೋಕಾರ್ಪಣೆಗೊಳ್ಳುತ್ತಿದೆ. 2012 ಜು. 21ರಂದು ಅಳಗವಾಡಿಯಲ್ಲಿ ಅಂದಿನ ಸಿಎಂ ಜಗದೀಶ ಶೆಟ್ಟರ ಭೂಮಿಪೂಜೆ ನೆರವೇರಿಸಿದ್ದ ಯೋಜನೆ ಆರು ವರ್ಷಗಳ ನಂತರ ಕಾರ್ಯಗತವಾಗಿ ಉದ್ಘಾಟನೆಗೊಳ್ಳುತಿದೆ. ದಿ| ಸಿದ್ದು ನ್ಯಾಮೇಗೌಡರು ಚಿಕ್ಕಪಡಸಲಗಿ ಬ್ಯಾರೇಜ್‌ ನಿರ್ಮಾಣ ಮಾಡಿ ಜನಮನದಲ್ಲಿ ಉಳಿದಂತೆ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹಳ್ಳದ ನೀರನ್ನು ಏತ ನೀರಾವರಿಗೆ ಬಳಕೆಮಾಡಿ ರೈತರ ಬಾಳು ಬೆಳಗಿದ್ದಾರೆ. ನೆರೆಯ ರಾಜ್ಯದವರು ಸಹ ಯೋಜನೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹ ಮಾಡಿದ್ದಾರೆ. ಏತ ನೀರಾವರಿಯಿಂದ ನೀರು ಬಂದರಷ್ಟೇ ಸಾಲದು ಎಂಬುದನ್ನು ಅರಿತು ಮಲಪ್ರಭಾ ಅಚ್ಚುಕಟ್ಟು ಪ್ರದೇಶಗಳಲ್ಲಿಯ ಉಪಕಾಲುವೆಗಳ ಆಧುನೀಕರಣಕ್ಕಾಗಿ ಶಾಸಕರು ಮುಂದಾಗಿದ್ದಾರೆ. ಸಾವಿರ ಕೋಟಿಯ ನವೀಕರಣ ಕಾಮಗಾರಿಗೂ ಮಂಜೂರಾತಿ ದೊರೆತಿದ್ದು, ಇದೇ ಸಮಯದಲ್ಲಿ ಕೆಲಸಕ್ಕೆ ಚಾಲನೆ ದೊರಕುತ್ತಿದೆ.

ಅಮರಗೋಳ ಏತ ನೀರಾವರಿ ಯೋಜನೆ:ಬೆಣ್ಣೆಹಳ್ಳ ಬಳಸಿ 22 ಕೋಟಿ ವೆಚ್ಚದ ಯೋಜನೆ ಇದಾಗಿದೆ. ಒಟ್ಟು 4,653 ಎಕರೆ ಪ್ರದೇಶ ನೀರಾವರಿ ವ್ಯಾಪ್ತಿಗೊಳಪಡಲಿದೆ. ಅಮರಗೋಳ, ಅಳಗವಾಡಿ ಹಾಗೂ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮಗಳಿಗೆ ಅನುಕೂಲವಾಗಲಿದೆ. ಯೋಜನೆಗಾಗಿ 36 ಎಕರೆ ಭೂಮಿಯನ್ನು ಬೆಣ್ಣೆಹಳ್ಳದ ದಂಡೆಯಲ್ಲಿ ಪಡೆದು ಇಲ್ಲಿಂದ ನರಗುಂದ ಶಾಖಾ ಕಾಲುವೆ ಡಿ-6, ಹಂಚಿಕೆಯ 17ನೇ ಎಲ್‌-ಉಪಕಾಲುವೆ ವರೆಗೆ 7 ಕಿಮೀ ರೇಸಿಂಗ್‌ ಮೇನ್‌ ಪೈಪ್‌ ಲೈನ್‌ ಅಳವಡಿಕೆ ಮಾಡಲಾಗಿದೆ. ನೀರೆತ್ತಲು 540 ಎಚ್‌ಪಿ ಸಾಮರ್ಥ್ಯದ ಪಂಪ್‌ಗ್ಳು ಇವೆ.

ಗೊಬ್ಬರಗುಂಪಿ ಏತ ನೀರಾವರಿ ಯೋಜನೆ: ತುಪ್ಪರಿ ಹಳ್ಳ ಬಳಸಿ 16 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನ ಮಾಡಲಾಗಿದೆ. ಯೋಜನೆಯಿಂದ ಗೊಬ್ಬರಗುಂಪಿ, ಶಾನವಾಡ ಹಾಗೂ ಬೆಳವಟಗಿ ಗ್ರಾಮದ 5 ಸಾವಿರ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ಗೊಬ್ಬರಗುಂಪಿ-ಅಮರಗೋಳ ಎರಡು ಪ್ಯಾಕೇಜ್‌ ಸೇರಿ ಒಟ್ಟು 48.08 ಕೋಟಿ ನಿಗದಿಯಾಗಿತ್ತು. ಬಳಿಕ ಹೆಚ್ಚುವರಿಯಾಗಿ 6.20 ಕೋಟಿ ಬಳಕೆಯಾಗಿದ್ದು, ಒಟ್ಟು 54 ಕೋಟಿ ರೂ.ಗಳಲ್ಲಿ ಎರಡೂ ಏತ ನೀರಾವರಿ ಯೋಜನೆ ಪೂರ್ಣಗೊಂಡಿದೆ.

 

-ಪುಂಡಲೀಕ ಮುಧೋಳೆ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.