ಜೂಜಾಟಕ್ಕೆ ಪೊಲೀಸರದ್ದೇ ಸಾಥ್‌?

|ಹುಬ್ಬಳ್ಳಿಯಹೋಟೆಲ್ವೊಂದರ ಕೋಣೆಯೇ ಅಡ್ಡಾ |ಎಲೆ ತಟ್ಟುವ ಕೆಲಸದಲ್ಲಿ ಕೆಲ ಸಿಬ್ಬಂದಿ ಭಾಗಿ

Team Udayavani, May 27, 2019, 2:07 PM IST

hubali-tdy-1..

ಸಾಂದರ್ಭಿಕ ಚಿತ್ರ.

ಹುಬ್ಬಳ್ಳಿ: ನಗರದ ಹೋಟೆಲ್ವೊಂದರಲ್ಲಿ ಇಸ್ಪೀಟ್ ಜೂಜಾಟ ಕೇಂದ್ರವೊಂದು ನಡೆಯುತ್ತಿದ್ದು, ವಿಚಿತ್ರವೆಂದರೆ ಇದನ್ನು ತಡೆಯಬೇಕಾದ ಪೊಲೀಸ್‌ ಸಿಬ್ಬಂದಿಯೇ ಇದರ ಸಕ್ರಿಯ ಸದಸ್ಯರಾಗಿದ್ದಾರೆ!

ನಗರದ ಸಿದ್ದಪ್ಪ ಕಂಬಳಿ ಮಾರ್ಗದಲ್ಲಿನ ಹೋಟೆಲ್ವೊಂದರ ಕೋಣೆಯನ್ನೇ ತಮ್ಮ ಜೂಜಾಟದ ಅಡ್ಡೆ ಮಾಡಿಕೊಂಡಿದ್ದು, ಅನೇಕ ಪೊಲೀಸ್‌ ಸಿಬ್ಬಂದಿ ಪ್ರತಿದಿನ ಬೆಳಗ್ಗೆಯಿಂದಲೇ ಈ ಕೇಂದ್ರದಲ್ಲಿ ಎಲೆ ತಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ಇಸ್ಪೀಟ್ ಜೂಜಾಟಕ್ಕೆ ಸಿಲುಕಿದ ಪೊಲೀಸ್‌ ಸಿಬ್ಬಂದಿಯಲ್ಲಿ ಅನೇಕರು ಹಣ ಕಳೆದುಕೊಂಡಿದ್ದು, ಇದರಿಂದ ಅವರ ಕುಟುಂಬ ತೀವ್ರ ಸಂಕಷ್ಟ ಪಡುವಂತಾಗಿದೆ.

ಪೊಲೀಸ್‌ ಇಲಾಖೆಯ ಎಸ್‌ಬಿ (ವಿಶೇಷ ವಿಭಾಗ) ಡ್ಯೂಟಿ ಮಾಡುವವರು, ರಾತ್ರಿ ಗಸ್ತು ತಿರುಗುವವರು, ಕ್ರೈಂ ಸಿಬ್ಬಂದಿ, ವಾಹನಗಳ ಚಾಲಕರು ಜೂಜಾಟದಲ್ಲಿ ತೊಡಗುತ್ತಿದ್ದಾರೆಂದು ಹೇಳಲಾಗುತ್ತಿದೆ. ನಗರದಲ್ಲಿ ನಡೆಯುವ ಮಟ್ಕಾ, ಜೂಜಾಟದಂತಹ ಅಕ್ರಮ ದಂಧೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವವರೇ ನಾವು. ನಮ್ಮ ಮಾಹಿತಿ ಅವರಿಗೆ ಹೇಗೆ ಹೋಗಲಿದೆ ಎಂಬ ಮನೋಭಾವ ಇವರದ್ದಾಗಿದೆ ಎನ್ನಲಾಗಿದೆ.

ಜೂಜಾಟಕ್ಕೆ ಸಿಲುಕಿ ಹಣ ಕಳೆದುಕೊಂಡ ಅನೇಕರು ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬ್ಯಾಂಕ್‌ಗಳು ಸೇರಿದಂತೆ ಖಾಸಗಿಯವರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ-ಬಡ್ಡಿ ಪಾವತಿಸಲಾಗದೆ ಪರದಾಡುತ್ತಿದ್ದಾರೆ. ಇಸ್ಪೀಟ್, ಜೂಜಾಟ ಇನ್ನಿತರ ಅಕ್ರಮ ದಂಧೆಗಳಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯುವ ಇಲ್ಲವೆ ಬಂಧಿಸುವ ಕಾರ್ಯ ಮಾಡುವ ಪೊಲೀಸರೇ ಈ ಕಾರ್ಯಗಳಲ್ಲಿ ತೊಡಗಿದ್ದು, ಕ್ರಮ ಕೈಗೊಳ್ಳುವವರು ಯಾರು ಎಂಬುದು ಸಾರ್ವಜನಿಕರ ಪ್ರಶ್ನೆ. ಅಧಿಕಾರಿಗಳು ಇದನ್ನು ತಡೆಗಟ್ಟದಿದ್ದರೆ ಇಲಾಖೆಯ ಮರ್ಯಾದೆ ಹಾಳಾಗುವುದರಲ್ಲಿ ಸಂಶಯವಿಲ್ಲವೆಂದು ಹೆಸರು ಹೇಳಲಿಚ್ಚಿಸದ ಓರ್ವರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಉತ್ತರ ಸಿಗದ ಯಕ್ಷಪ್ರಶ್ನೆ:

ನಗರದಲ್ಲಿ ಗೂಂಡಾಗಳು, ರೌಡಿಗಳು, ಕೊಲೆ-ಸುಲಿಗೆಕೋರರು, ಮಟ್ಕಾ-ಜೂಜುಕೋರರ ಮೇಲೆ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ದಿಟ್ಟ ಕ್ರಮ ಕೈಗೊಂಡು ಸಾರ್ವಜನಿಕರಿಂದ ಭೇಷ್‌ ಎನಿಸಿಕೊಂಡಿದ್ದಾರೆ. ಆದರೆ ಇಲಾಖೆಯಲ್ಲಿನ ಕೆಲ ಸಿಬ್ಬಂದಿಯೇ ಇಂತಹ ಕೆಟ್ಟ ಅನಿಷ್ಟಗಳಲ್ಲಿ ಭಾಗಿಯಾಗುತ್ತಿದ್ದರೂ ಹಿರಿಯ ಅಧಿಕಾರಿಗಳು ಅವರ ಮೇಲೆ ಏಕೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಇದನ್ನು ನಿಯಂತ್ರಿಸುತ್ತಿಲ್ಲವೆಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.
ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು?:

ಅವಳಿ ನಗರದ ವಿವಿಧ ಠಾಣೆಗಳಲ್ಲಿ ಕ್ರೈಂ, ಎಸ್‌ಬಿ ವಿಭಾಗದಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕೆಲ ಪೊಲೀಸರೇ ನಗರದ ಕೆಲ ಆಯಕಟ್ಟಿನ ಸ್ಥಳಗಳಲ್ಲಿ ಕ್ಲಬ್‌ಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ನಗರಕ್ಕೆ ಯಾವುದೇ ಅಧಿಕಾರಿಗಳು ಬಂದರೂ ಇವರ ಕ್ಲಬ್‌ಗಳಿಗೆ ಮಾತ್ರ ಯಾವುದೇ ಭಯವಿಲ್ಲ. ಇವು ನಿರಂತರವಾಗಿ, ನಿರ್ಭಿಡೆಯಿಂದ ನಡೆಯುತ್ತವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಮಾಜದಲ್ಲಿನ ಅನಿಷ್ಟಗಳನ್ನು ತೊಡೆದು ಹಾಕುವವರೇ ಇಂತಹುದರಲ್ಲಿ ಭಾಗಿಯಾಗಿರುವಾಗ ‘ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು’ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.
ನಗರದ ಲಾಡ್ಜ್ವೊಂದರಲ್ಲಿ ಪೊಲೀಸ್‌ ಸಿಬ್ಬಂದಿಯೇ ಜೂಜಾಟದಲ್ಲಿ ತೊಡಗಿಕೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಭಾಗಿಯಾಗಿದ್ದು ಕಂಡು ಬಂದರೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. -ಎಂ.ಎನ್‌. ನಾಗರಾಜ, ಹು-ಧಾ ಪೊಲೀಸ್‌ ಆಯುಕ್ತ
•ಶಿವಶಂಕರ ಕಂಠಿ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.