ತುಂಗಭದ್ರಾ ಡ್ಯಾಂ ಹೂಳು ಸಮಸ್ಯೆಗೆ ಸಿಗುವುದೇ ಪರ್ಯಾಯ ಪರಿಹಾರ?

•ಇಂದು ಬೆಂಗಳೂರಿನಲ್ಲಿ ಮೂರು ಜಿಲ್ಲೆಗಳ ಸಂಸದರು-ಶಾಸಕರ ಸಭೆ

Team Udayavani, Jun 15, 2019, 1:13 PM IST

hubali-tdy-3..

ತುಂಗಭದ್ರ ಜಲಾಶಯ (ಸಂಗ್ರಹ ಚಿತ್ರ)

ಹುಬ್ಬಳ್ಳಿ: ತುಂಗಭದ್ರಾ ಜಲಾಶಯದ ಹೂಳು ಸಮಸ್ಯೆಗೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ಹಾಗೂ ಪಶ್ಚಿಮ ನದಿಗಳ ಜೋಡಣೆ ವಿಷಯವಾಗಿ, ಜೂ. 15ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಆಶಾದಾಯಕ ನಿರ್ಣಯದ ನಿರೀಕ್ಷೆ ಹೆಚ್ಚಿದೆ.

ತುಂಗಭದ್ರಾ ಜಲಾಶಯದಲ್ಲಿ ವರ್ಷದಿಂದ ವರ್ಷಕ್ಕೆ ಹೂಳು ಪ್ರಮಾಣ ಹೆಚ್ಚುತ್ತಿದ್ದು, ನೀರು ಸಂಗ್ರಹ ಪ್ರಮಾಣ ಕಡಿಮೆ ಆಗುತ್ತಿದೆ. ಈ ಹಿಂದೆ ಎರಡು ಬೆಳೆಗಳಿಗೆ ದೊರೆಯುತ್ತಿದ್ದ ನೀರು, ಇದೀಗ ಒಂದು ಬೆಳೆಗೂ ಸಮರ್ಪಕ ರೀತಿಯಲ್ಲಿ ನೀಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಇದಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ, ಫ್ಲಡ್‌ಫ್ಲೋ ಕೆನಾಲ್ ನಿರ್ಮಾಣ ಯೋಜನೆ ಪ್ರಸ್ತಾಪ ಹಂತದಲ್ಲೇ ಸಾಗುತ್ತಿದೆ.

ಹೂಳು ಸಮಸ್ಯೆ ಹಾಗೂ ನೀರಿನ ಕೊರತೆಗೆ ಪರ್ಯಾಯ ರೂಪವಾಗಿ ನವಲಿ ಬಳಿ ಸಮಾನಾಂತರ ಜಲಾಶಯ, ಪಶ್ಚಿಮದ ನದಿಗಳ ಜೋಡಣೆ ಕುರಿತಾಗಿ ಸಚಿವ ಹಾಗೂ ತುಂಗಭದ್ರಾ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ವೆಂಕಟರಾವ್‌ ನಾಡಗೌಡ ಅವರ ನೇತೃತ್ವದಲ್ಲಿ ತುಂಗಭದ್ರಾ ಜಲಾಶಯ ವ್ಯಾಪ್ತಿಯ ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಯ ಸಂಸದರು, ಶಾಸಕರ ಸಭೆಯನ್ನು ವಿಧಾನಸೌಧದಲ್ಲಿ ಕರೆಯಲಾಗಿದೆ.

ಹೂಳು ಸಮಸ್ಯೆ: 1860ರಲ್ಲಿಯೇ ಪ್ರಸ್ತಾಪಗೊಂಡು ನಂತರ 1953ರಲ್ಲಿ ಪೂರ್ಣಗೊಂಡಿರುವ ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಹಲವು ಭಾಗಗಳಿಗೆ ನೀರಾವರಿ, ಕುಡಿಯುವ ನೀರಿಗೆ ಪ್ರಮುಖ ಆಸರೆಯಾಗಿದೆ.

ತುಂಗಭದ್ರಾ ಜಲಾಶಯ ಸುಮಾರು 133 ಟಿಂಎಂಸಿ ಅಡಿಯಷ್ಟು ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದರೂ, ಸುಮಾರು 33-34 ಟಿಎಂಸಿ ಅಡಿಯಷ್ಟು ಹೂಳು ಸಂಗ್ರಹದಿಂದಾಗಿ ನೀರು ಸಂಗ್ರಹ ಸಾಮರ್ಥ್ಯ 100 ಟಿಎಂಸಿ ಅಡಿಗೆ ಸೀಮಿತವಾಗುವಂತಾಗಿದೆ. ಪ್ರತಿವರ್ಷ ಸುಮಾರು 0.5ದಿಂದ 0.6ಟಿಎಂಸಿ ಅಡಿಯಷ್ಟು ಹೂಳು ಸಂಗ್ರಹವಾಗುತ್ತಿದೆ.

ತುಂಗಭದ್ರಾ ಜಲಾಶಯ ಎಡ-ಬಲದಂಡೆ ನಾಲೆ, ವಿಜಯನಗರ ಕಾಲುವೆಗಳ ಮೂಲಕ ಲಕ್ಷಾಂತರ ಹೆಕ್ಟೇರ್‌ ಭೂಮಿ ನೀರಾವರಿ ಸೌಲಭ್ಯ ಪಡೆದಿದೆ. ಆಂಧ್ರಪ್ರದೇಶದ ಹಲವು ಜಿಲ್ಲೆಗಳು ಇದೇ ಜಲಾಶಯದ ನೀರು ಅವಲಂಬಿಸಿವೆ. ತುಂಗಭದ್ರಾ ಜಲಾಶಯ ನೀರನ್ನು ವಿಶೇಷವಾಗಿ ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳು ಅವಲಂಬಿಸಿವೆ. ಹೇಳಿಕೊಳ್ಳುವುದಕ್ಕೆ, ಕರ ಪಾವತಿಗೆ ನೀರಾವರಿ ಜಮೀನು. ಆದರೆ ಹನಿ ನೀರು ಹೊಲಕ್ಕೆ ಹರಿಯದ ಸ್ಥಿತಿಯನ್ನು ಕೊನೆ ಭಾಗದ ರೈತರು ಹಲವು ವರ್ಷಗಳಿಂದ ಅನುಭವಿಸುತ್ತಿದ್ದು, ಇದೀಗ ಮಧ್ಯ ಭಾಗದ ರೈತರಿಗೂ ನೀರಿನ ಕೊರತೆ ಉಂಟಾಗುವಂತಾಗಿದೆ.

ಬೇಡಿಕೆಗೆ ಸಮರ್ಥ ಕ್ರಮವಿಲ್ಲ: ತುಂಗಭದ್ರಾ ಜಲಾಶಯದಲ್ಲಿ ಹೂಳು ಪ್ರಮಾಣ ಹೆಚ್ಚಳ, ನೀರು ಸಂಗ್ರಹ ಕಡಿಮೆಯಾಗುತ್ತಿರುವುದನ್ನು ಕಂಡು 80ರ ದಶಕದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌.ಟಿ. ರಾಮರಾವ್‌ ಅವರು ಸಮಾನಾಂತರ ಜಲಾಶಯ, ಫ್ಲಡ್‌ಫ್ಲೋ ಕೆನಾಲ್ ಪ್ರಸ್ತಾಪವನ್ನು ರಾಜ್ಯದ ಮುಂದಿರಿಸಿದ್ದರು. ರಾಜ್ಯ ಸರಕಾರ ಅತ್ತ ಆಸಕ್ತಿ ತೋರಿರಲಿಲ್ಲ.

ಜಲಾಶಯದಲ್ಲಿ ಸಂಗ್ರಹಗೊಂಡ ಸುಮಾರು 33-34 ಟಿಎಂಸಿ ಅಡಿ ಹೂಳು ತೆಗೆಯಲು ಕನಿಷ್ಟ 15-20 ಸಾವಿರ ಕೋಟಿ ಬೇಕಾಗಿದ್ದು, ತೆಗೆದು ಹೂಳು ಸಂಗ್ರಹಕ್ಕೆ 66 ಸಾವಿರ ಎಕರೆ ಭೂಮಿ ಬೇಕಾಗಿದೆ. ಅದೂ ಅಂದಾಜು 15 ಅಡಿ ಎತ್ತರಷ್ಟು ಹೂಳು ಸಂಗ್ರಹಗೊಳ್ಳಲಿದೆಯಂತೆ.

ಅನುಷ್ಠಾನಗೊಳ್ಳಬೇಕಿದೆ ಸಮಾನಾಂತರ ಜಲಾಶಯ: ತುಂಗಭದ್ರಾ ಜಲಾಶಯದಲ್ಲಿನ ಹೂಳು ತಡೆಗೆ ಕೊಪ್ಪಳ ಬಳಿ ಹಿರೇಹಳ್ಳ ಜಲಾಶಯ ನಿರ್ಮಾಣ ಮಾಡಲಾಗಿದೆಯಾದರೂ, ಸಮಸ್ಯೆ ಪರಿಣಾಮಕಾರಿ ತಡೆ ಸಾಧ್ಯವಾಗಿಲ್ಲ. ಇದಕ್ಕಾಗಿಯೇ ರಾಜ್ಯ ಸರಕಾರ ಕೊಪ್ಪಳ ಜಿಲ್ಲೆ ನವಲಿ ಬಳಿ 18 ಸಾವಿರ ಎಕರೆ ಪ್ರದೇಶದಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಯೋಜನೆಗೆ ಮುಂದಾಗಿತ್ತು. ಇಲ್ಲಿ ಅಂದಾಜು 5,600 ಕೋಟಿ ವೆಚ್ಚದಲ್ಲಿ ಸುಮಾರು 35 ಟಿಎಂಸಿ ಅಡಿ ನೀರು ಸಂಗ್ರಹಿಸಬಹುದಾಗಿದೆ. ಯೋಜನೆಯ ಡಿಪಿಆರ್‌ ಆಗಿದ್ದು, ಸರಕಾರ ಅದಕ್ಕೆ ಅನುಮೋದನೆ ನೀಡಿದ್ದರೂ ಅನುಷ್ಠಾನ ಆರಂಭ ವಿಶ್ವಾಸ ಮೂಡಿಸುವ ಸ್ಥಿತಿಗೆ ಇನ್ನೂ ಬಂದಿಲ್ಲ.

ಇದೀಗ ಜಲಾಶಯಕ್ಕೆ ನೀರಿನ ಕೊರತೆ ಹಿನ್ನೆಲೆಯಲ್ಲಿ ಸಮಾನಾಂತರ ಜಲಾಶಯದ ಜತೆಗೆ ಪಶ್ಚಿಮ ನದಿಗಳ ಜೋಡಣೆ ವಿಚಾರವೂ ಚರ್ಚೆಗೆ ಬಂದಿದೆ. ಇದೇ ವಿಷಯವಾಗಿ ಶನಿವಾರ ಸಚಿವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮೂರು ಜಿಲ್ಲೆಗಳ ಸಂಸದರು, ಶಾಸಕರು ಮಹತ್ವದ ಚರ್ಚೆ ನಡೆಸಲಿದ್ದಾರೆ. ಆದರೆ ನದಿಗಳ ಜೋಡಣೆ ಸುಲಭ ಸಾಧ್ಯವಿಲ್ಲ. ಇದಕ್ಕೆ ಅನೇಕ ತಕರಾರು, ತಾಂತ್ರಿಕ ಅಡ್ಡಿಗಳು ಎದುರಾಗುತ್ತವೆ. ನದಿಗಳ ಜೋಡಣೆ ಚರ್ಚೆಯ ಜತೆಗೆ ಸಮಾನಾಂತರ ಜಲಾಶಯ ನಿರ್ಮಾಣ ಕಾರ್ಯ ತ್ವರಿತ ಕಾರ್ಯಾರಂಭ ನಿಟ್ಟಿನಲ್ಲಿ ಏನೆಲ್ಲಾ ಸಾಧ್ಯವೋ ಆ ಎಲ್ಲ ಕ್ರಮಗಳ ಬಗ್ಗೆ ಸ್ಪಷ್ಟ ನಿಲುವು ಕೈಗೊಳ್ಳುವ ಅನಿವಾರ್ಯತೆ ಇದೆ. ಉತ್ತಮ ಮಳೆ ಬಿದ್ದರೆ ಜಲಾಶಯದಲ್ಲಿ ಹೂಳಿನ ಪರಿಣಾಮ ಸಂಗ್ರಹವಾಗದೇ ಸಮುದ್ರ ಸೇರುವ ನೀರನ್ನಾದರೂ ಸಮನಾಂತರ ಜಲಾಶಯದಲ್ಲಿ ಸಂಗ್ರಹಿಸಿಕೊಳ್ಳಬಹುದಾಗಿದೆ.

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.