ಐಟಿ-ಚುನಾವಣಾಧಿಕಾರಿಗಳ ದಾಳಿ;ಚಿನ್ನ ಲೇಪಿತ ಸಾಮಗ್ರಿ-ಶಿವಳ್ಳಿ ಭಾವಚಿತ್ರ ವಶ
Team Udayavani, May 15, 2019, 10:34 AM IST
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಗೋಕುಲ ರಸ್ತೆಯ ಕಾಟನ್ ಕೌಂಟಿ ಕ್ಲಬ್ನ ಕೊಠಡಿಯಲ್ಲಿ ಸಂಗ್ರಹಿಸಿಡಲಾಗಿದ್ದ ಚಿನ್ನ ಲೇಪಿತ ಬಟ್ಟಲುಗಳು, ದಿ| ಶಿವಳ್ಳಿ ಭಾವಚಿತ್ರವುಳ್ಳ ಫೋಟೋಗಳು, ಮತದಾರರ ಪಟ್ಟಿಗಳನ್ನು ಐಟಿ ಹಾಗೂ ಚುನಾವಣಾ ಅಧಿಕಾರಿಗಳು ಸೋಮವಾರ ರಾತ್ರಿ ವಶಪಡಿಸಿಕೊಂಡು, ಓರ್ವರ ವಿರುದ್ಧ ದೂರು ದಾಖಲಿಸಿದ್ದಾರೆ.
ಕುಂದಗೋಳ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನಕಣ್ಣು ಇರಿಸಿರುವ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ ಹಾಗೂ ಎಫ್ಎಸ್ಟಿ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ನಗರದ ವಿವಿಧ ಪ್ರತಿಷ್ಠಿತ ಹೋಟೆಲ್ಗಳ ಮೇಲೆ ದಾಳಿ ನಡೆಸಿತು.
ದಾಳಿ ವೇಳೆ ಅಧಿಕಾರಿಗಳು ಕಾಟನ್ ಕೌಂಟಿ ಕ್ಲಬ್ನ ಕೊಠಡಿ ಸಂಖ್ಯೆ 307ರಲ್ಲಿ ಇರಿಸಲಾಗಿದ್ದ ದಿ| ಸಿ.ಎಸ್. ಶಿವಳ್ಳಿ ಅವರುಳ್ಳ 11 ಭಾವಚಿತ್ರಗಳು, ಚಿನ್ನ ಲೇಪಿತ 50 ಅರಿಷಿಣ ಹಾಗೂ ಕುಂಕುಮದ ಬಟ್ಟಲುಗಳು, ಕುಂದಗೋಳ ವಿಧಾನಸಭಾ ಕ್ಷೇತ್ರ ಭಾಗದ ಸಂಖ್ಯೆ 51ರಿಂದ 57ರವರೆಗಿನ ಮತದಾರರ ಪಟ್ಟಿಗಳು ಹಾಗೂ ಕಾಂಗ್ರೆಸ್ ಪಕ್ಷದ ಚಿಹ್ನೆ ಹೊಂದಿದ್ದ ಟೊಪ್ಪಿಗೆ ವಶಪಡಿಸಿಕೊಂಡಿದ್ದಾರೆ.
ಕುಂದಗೋಳ ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಪರ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಇವುಗಳನ್ನು ಸಂಗ್ರಹಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಶಿವಕುಮಾರ ಗೋಕಾವಿ ವಿರುದ್ಧ ಗೋಕುಲ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು