ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್
Team Udayavani, Jan 26, 2022, 11:29 AM IST
ಹುಬ್ಬಳ್ಳಿ: ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ. ಇದು ಆಡಳಿತ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಒಳ್ಳೆಯದಾಗುತ್ತದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ಸಲುವಾಗಿ ಮುಖ್ಯಮಂತ್ರಿಯವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಇದರಿಂದ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗುತ್ತದೆ. ಮುಂಬರುವ ಚುನಾವಣೆ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದರು.
ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಯಾವಾಗಲೂ ಈ ಮಾತು ಹೇಳಿಕೊಂಡು ಇರುತ್ತಾರೆ. ಆದರೆ ಕಾಂಗ್ರೆಸ್ ಜಿಲ್ಲಾ ಮುಂಖಡರು, ಶಾಸಕರು ಮತ್ತು ಮಾಜಿ ಶಾಸಕರು ಬಿಜೆಪಿ ಆಡಳಿತ ವ್ಯವಸ್ಥೆ ಮೆಚ್ಚಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಇಡೀ ರಾಷ್ಟ್ರದಲ್ಲಿ ಕಾಂಗ್ರೆಸ್ ಅಸ್ತಿತ್ವಕಳೆದುಕೊಂಡಿದೆ. ಆದರೆ ಯಾರಾದರೂ ಕಾಂಗ್ರೆಸ್ ಗೆ ಸೇರಿಕೊಂಡರೆ ಅವರಂಥ ಮೂರ್ಖರು ಯಾರು ಇಲ್ಲ ಎಂದರು.
ಇದನ್ನೂ ಓದಿ:ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹುಳ ಬಿಡುವ ಕೆಲಸ ಮಾಡುತ್ತಿದ್ದಾರೆ. ಅವರು ಹೇಳುವಂತೆ ಕಾಂಗ್ರೆಸ್ ಗೆ ಯಾರು ಸೇರ್ಪಡೆಯಾಗುತ್ತಿದ್ದಾರೆಂಬ ಬಗ್ಗೆ ಧೈರ್ಯವಾಗಿ ಹೇಳಲಿ. ಕದ್ದು ಮುಚ್ಚಿ ಮಾಡುವುದು ಬೇಡ. ನೇರವಾಗಿ ಹೇಳಲಿ ಎಂದರು.
ಸೋನಿಯಾ ಗಾಂಧಿ, ರಾಹುಲ ಗಾಂಧಿ ಅವರ ಆಪ್ತರಾದ ಆರ್ ಪಿಎನ್ ಸಿಂಗ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂದು ಅರ್ಥ ಮಾಡಿಕೊಳ್ಳಬೇಕು. ಅಷ್ಟೇ ಅಲ್ಲ ಮುಂಬರುವ ದಿನಗಳಲ್ಲಿ ಆ ಪಕ್ಷ ಪೂರ್ತಿ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮಾಡಲಿಲ್ಲ ಅಂದರೆ ಕೆಲ ಶಾಸಕರು ಕಾಂಗ್ರೆಸ್ ಹೋಗುತ್ತಾರಂತಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಆಗುವುದಿಲ್ಲ. ರಾಜ್ಯದಲ್ಲಿ ಪಕ್ಷ ಸಂಘಟನಾತ್ಮಕವಾಗಿದೆ. ಇದು ಎಲ್ಲ ಶುದ್ಧ ಸುಳ್ಳು. ಮಣಿಪುರ, ಗೋವಾ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ನಶಿಸಿಹೋಗುತ್ತದೆ. ಕಾಂಗ್ರೆಸ್ ಗೆ ಯಾರು ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ