ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆ ಸಾಧ್ಯವೇ


Team Udayavani, Jun 30, 2019, 9:29 AM IST

hubali-tdy-4..

ಧಾರವಾಡ : ಹಿರಿಯ ಸಾಹಿತಿ ಪ್ರೊ| ಬರಗೂರು ರಾಮಚಂದ್ರಪ್ಪ ಮಾತನಾಡಿದರು.

ಧಾರವಾಡ: ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಇಂಗ್ಲಿಷ್‌ ಕಲಿಕೆ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವೇ ಎಂಬುದನ್ನು ಸರ್ಕಾರ ಪರಾಮರ್ಶಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ|ಬರಗೂರು ರಾಮಚಂದ್ರಪ್ಪ ಹೇಳಿದರು.

ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್‌ ಹಾಗೂ ಜಿಲ್ಲಾ ಕನ್ನಡ ಭಾಷಾ ಬೋಧಕರ ಪರಿವಾರ ವತಿಯಿಂದ ಇಲ್ಲಿನ ಜೆಎಸ್‌ಎಸ್‌ ಕಾಲೇಜು ಆವರಣದ ಸನ್ನಿಧಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕನ್ನಡ ಭಾಷಾ ಬೋಧಕರ ಕಾರ್ಯಾಗಾರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಡೀ ಶಿಕ್ಷಣ ಕ್ಷೇತ್ರ ಇಂದು ಗೊಂದಲದ ಗೂಡಾಗಿದೆ. ಶೈಕ್ಷಣಿಕ ಸ್ವಾಯತ್ತತೆ ಹಾಗೂ ಸಮಾನತೆ ಹಾಳಾಗುತ್ತಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತದೆ ಎಂಬ ತರ್ಕಕ್ಕೆ ಬಿದ್ದು ಸರ್ಕಾರ ಇಂದು 47,928 ಸರ್ಕಾರಿ ಶಾಲೆಗಳಲ್ಲಿ ಒಂದು ಸಾವಿರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದ್ದೀರಿ. ಹಾಗಾದರೆ ಇನ್ನುಳಿದ 46,928 ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವೇ ಎಂಬುದನ್ನು ಸರ್ಕಾರ ಪರಾಮರ್ಶಿಸಿಕೊಳ್ಳಬೇಕು. ಅಂಗನವಾಡಿಯಿಂದಲೇ ಶಿಕ್ಷಣದಲ್ಲಿ ಅಸಮಾನತೆ ತಂದು ಹಸುಗೂಸುಗಳಲ್ಲಿ ಅಸಮಾನತೆ ಬೀಜ ಬಿತ್ತಲಾಗುತ್ತಿದೆ. ಇದು ಅಮಾನವೀಯತೆ ಎಂದರು.

ಜಾಗತಿಕರಣ ವೇಳೆ ಈ ದೇಶದ ಪ್ರಾದೇಶಿಕ ಭಾಷೆಗಳಿಗೆ ಹೊಡೆತ ಬಿದ್ದಿದೆ. ಆಳಲು ಬಂದವರನ್ನು ಅರಗಿಸಿಕೊಳ್ಳುವ ಶಕ್ತಿ ಕನ್ನಡಕ್ಕೆ ಇದೆ. 1973ರಿಂದ ಕನ್ನಡ ಭಾಷೆ ಅಧಃಪತನದ ಹಾದಿಯಲ್ಲಿದೆ ಎಂದು ತಾವು ಕೇಳುತ್ತ ಬಂದಿದ್ದೇನೆ. ಅಂದಿನಿಂದಲೂ ಜನ ಕನ್ನಡವನ್ನು ಉಸಿರಾಡುತ್ತ ಬಂದಿದ್ದಾರೆ. ಹಾಗಂತ ನಾವೆಲ್ಲರೂ ಮೈಮರೆಯುವಂತಿಲ್ಲ. ಈಗಾಗಲೇ ಜಗತ್ತಿನಲ್ಲಿ 30 ಸಾವಿರ ಭಾಷೆಗಳು ನಾಶವಾಗಿವೆ ಎಂದರು.

ಪ್ರಸ್ತುತ ಜಗತ್ತಿನಲ್ಲಿ 6703 ಭಾಷೆಗಳು ಇವೆ. 6703 ಭಾಷೆಗಳಲ್ಲಿ 10 ಭಾಷೆಗಳನ್ನು ಜಗತ್ತಿನಲ್ಲಿ ಮಾತನಾಡುತ್ತಾರೆ. ಅದರಲ್ಲಿ ಕನ್ನಡ ಭಾಷೆ ಪ್ರಚಲಿತವಾಗಿದೆ. ಜಗತ್ತಿನಲ್ಲಿ ನಾಶ ಹೊಂದುತ್ತಿರುವ 20 ಭಾಷೆಗಳಲ್ಲಿ ಕನ್ನಡವೂ ಸೇರಿದೆ. ಕನ್ನಡ ಬದುಕಿನ ಭಾಷೆಯಾದಾಗ ಮಾತ್ರ ಕನ್ನಡ ಉಳಿಸಲು ಸಾಧ್ಯ. ದೇಶದಲ್ಲಿ ಶೇ 22.5 ಉನ್ನತ ಶಿಕ್ಷಣ ಇದೆ. ಉನ್ನತ ಶಿಕ್ಷಣದಲ್ಲಿ ಬಹುರೂಪ ಬರಬೇಕು. ಅದರಂತೆ ಪ್ರಾಥಮಿಕ ಶಿಕ್ಷಣದಲ್ಲಿ ಏಕರೂಪತೆ ಬರಬೇಕು. ಶೈಕ್ಷಣಿಕ ಸ್ವಾಯತ್ತತೆ ಹಾಗೂ ಸಮಾನತೆಗಾಗಿ ಒಂದು ಚಳವಳಿ ಕಟ್ಟಬೇಕು. ಅದನ್ನು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಡಾ|ದ.ರಾ. ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ ಅಧ್ಯಕ್ಷ ಡಾ|ಡಿ.ಎಂ. ಹಿರೇಮಠ, ಎಸ್‌. ಜಯಕುಮಾರ, ಸಾಹಿತಿ ಡಾ|ಸುಬ್ರಾವ್‌ ಎಂಟೆತ್ತಿನವರ, ಡಿಡಿಪಿಐಗಳಾದ ವಿದ್ಯಾ ನಾಡಿಗೇರ, ಗಜಾನನ ಮನ್ನಿಕೇರಿ, ಡಯಟ್ ಪ್ರಾಚಾರ್ಯ ಅಬುದುಲ್ ವಾಜೀದ್‌ ಖಾಜಿ ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.