ಆರು ಕಡೆ ಐಟಿ ದಾಳಿ: ದಾಖಲೆಗಳ ಪರಿಶೀಲನೆ
Team Udayavani, Oct 6, 2017, 9:30 AM IST
ಹುಬ್ಬಳ್ಳಿ: ನಗರದಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಚಿನ್ನದ ವ್ಯಾಪಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ತೆರಿಗೆ ಅಧಿಕಾರಿಗಳು (ಐಟಿ) ಗುರುವಾರ ಬೆಳಗ್ಗೆ ಏಕಕಾಲಕ್ಕೆ ಆರು ಕಡೆ ದಾಳಿ ಮಾಡಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಗಳ ದಾಖಲೆ ಪತ್ರಗಳನ್ನು ಪರಿಶೀಲಿಸಿದರು.
ಗೋವಾ-ಕರ್ನಾಟಕ ವಲಯದ ತೆರಿಗೆ ಅಧಿಕಾರಿಗಳು ಜಂಟಿ ಆಯುಕ್ತರ ನೇತೃತ್ವದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಚಿನ್ನದ ವ್ಯಾಪಾರಿಗಳಾದ ದಿಲೀಪ್ ತಿಲೇಸರಾ, ರಾಜು ಪಟಾಡಿಯಾ ಕಚೇರಿ, ನಿವಾಸ ಹಾಗೂ ಇವರ ರಿಯಲ್ ಎಸ್ಟೇಟ್ ವ್ಯವಹಾರದ ಪಾಲುದಾರರ ಮನೆ ಮೇಲೂ ದಾಳಿ ನಡೆಸಿದರು ಎಂದು ತಿಳಿದು ಬಂದಿದೆ. ದಿಲೀಪ್ ತಿಲೇಸರಾ ಪಾಲುದಾರಿಕೆಯ ನಗರದ ಕೊಪ್ಪಿಕರ ರಸ್ತೆಯ ಸೆಟ್ಲೈಟ್ ಕಾಂಪ್ಲೆಕ್ಸ್, ಮನೋಜ್ ಜುವೆಲರ್ಸ್, ನೀಲಿಜಿನ್ ರಸ್ತೆಯ ತಿರುಮಲ ಟ್ರೇಡ್ ಸೆಂಟರ್ ಮತ್ತು ಸನ್ಸಿಟಿ ಡೆವಲಪರ್ಸ್ ಕಚೇರಿ ಮೇಲೆ ಹಾಗೂ ರಾಜು ಪಟಾಡಿಯಾ ಅವರ ಡೈಮಂಡ್ ಜುವೆಲರ್, ನಿವಾಸ, ಕಚೇರಿ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆ ಪತ್ರಗಳನ್ನು ಪರಿಶೀಲಿಸಿ, ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಚೆನ್ನೈ, ತೆಲಂಗಾಣ, ಗೋವಾದಿಂದ ಆಗಮಿಸಿದ್ದ ಅಧಿಕಾರಿಗಳು ಪ್ರತ್ಯೇಕವಾಗಿ 4 ತಂಡಗಳಾಗಿ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ