ದೇಶಕ್ಕಾಗಿ ಪ್ರಾಣ ಕೊಡುವುದಕ್ಕಿಂತ ಕೆಲಸ ಮಾಡುವುದು ಮುಖ್ಯ: ಸಿಎಂ ಬೊಮ್ಮಾಯಿ


Team Udayavani, Jan 16, 2023, 12:45 PM IST

ದೇಶಕ್ಕಾಗಿ ಪ್ರಾಣ ಕೊಡುವುದಕ್ಕಿಂತ ಕೆಲಸ ಮಾಡುವುದು ಮುಖ್ಯ: ಸಿಎಂ ಬೊಮ್ಮಾಯಿ

ಧಾರವಾಡ: ದೇಶಕ್ಕಾಗಿ ಪ್ರಾಣ ಕೊಡುತ್ತೇವೆ ಎನ್ನುವ ಕಾಲ ಹೋಗಿದ್ದು, ಈಗ ದೇಶಕ್ಕಾಗಿ ಕೆಲಸ ಮಾಡುವ ಕಾಲ ಬಂದಿದೆ. ಯುವಕರು ಇತ್ತ ಚಿತ್ತ ಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು‌.

ಇಲ್ಲಿನ ಕೃಷಿ ವಿವಿ ಯಲ್ಲಿ ನಡೆದ 26ನೇ ರಾಷ್ಟೀಯ ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭಾರತೀಯ ಯುವಕರ ಬುದ್ದಿಮತ್ತೆ ಜಗತ್ತಿನಲ್ಲಿ ಬೇರೆ ಯಾರಿಗೂ ಇಲ್ಲ. ಇದು ನಮ್ಮ ಸಂಸ್ಕೃತಿಯಿಂದ ನಮಗೆ ಬಂದಿದೆ. ಗೆದ್ದೆ ಗೆಲ್ಲುವೆವು ಎನ್ನುವ ಆತ್ಮ ವಿಶ್ವಾಸದೊಂದಿಗೆ ಯುವಕರು ಮುನ್ನಡೆಯಬೇಕು ಎಂದರು.

ವಿಶ್ವದಲ್ಲಿ ಅತೀ ಹೆಚ್ಚು ಯುವಕರನ್ನು ದೇಶ ಹೊಂದಿದೆ. ಹಿಂದೆ ಜನಸಂಖ್ಯೆ ಹೊರೆ ಎಂದು ಭಾವಿಸಲಾಗಿತ್ತು. ಆದರೆ ಪ್ರಧಾನಿ ಮೋದಿ ಅವರು ಇದನ್ನು ಶಕ್ತಿಯಾಗಿ ಪರಿವರ್ತಿ ಸುವ ಕನಸು ಕಂಡರು ಎಂದರು.

ಜೀವನದಲ್ಲಿ ಯುವಕರಾಗಿರುವುದು ಸೊಗಸು. ಈಗಲೇ ಇದನ್ನು ಆನಂದಿಸಬೇಕು. ಆದರೆ ಅದು ಕೆಲಸ, ಕನಸು ಎಲ್ಲದರಲ್ಲೂ ಇರಬೇಕು. ಮೌಂಟ್ ಎವರೆಸ್ಟ್ ಹತ್ತುವ ಕನಸು ತೇನ್ ಸಿಂಗ್ ಚಿಕ್ಕವನಿದ್ದಾಗಲೆ ಕಂಡಿದ್ದ. ಅದನ್ನು ಆತ ಇಡೇರಿಸಿಕೊಂಡ. ವಿವಿಧ ರಾಜ್ಯಗಳಿಂದ ಬಂದಿದ್ದೀರಿ. ವಿಭಿನ್ನತೆ ಇದ್ದರೂ ಭಾರತ ಮಾತೆ ಎನ್ನುವ ಶಬ್ದ ಎಲ್ಲರನ್ನು ಒಟ್ಟುಗೂಡಿಸುತ್ತದೆ ಎಂದರು.

ಯುವ ಜನೋತ್ಸವ ಅದ್ಬುತವಾಗಿ ಮೂಡಿ ಬಂದಿದೆ. ಆರು ದಿನ ಕರ್ನಾಟಕದ ಆತಿಥ್ಯ ಪಡೆದ ಎಲ್ಲರೂ ಆರು ಕನ್ನಡ ಶಬ್ದ ಕಲಿತು ನನಗೆ ಕಳುಹಿಸಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:ಗಾಂಧಿ ಕುಟುಂಬದ ಮನೆ ಬಾಗಿಲು ಕಾಯುವ ಖರ್ಗೆಗೆ ಜನಪರ ಕಾರ್ಯಕ್ರಮ ಮಾಡಿ ಗೊತ್ತಿಲ್ಲ: ಪಿ.ರಾಜೀವ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಹುಬ್ಬಳ್ಳಿ-ಧಾರವಾಡ ದಲ್ಲಿ ಯುವಜನೋತ್ಸವ ಯಶಸ್ವಿಯಾಗಿದೆ. ಇದಕ್ಕೆ ಸಿಎಂ ಬೊಮ್ಮಾಯಿ ಅವರು ಉತ್ತಮ ಸಹಕಾರ ನೀಡಿದ್ದಾರೆ. ಉತ್ಸವದಲ್ಲಿ ಪಾಲ್ಗೊಂಡ ಯುವಕರಿಗೆ ಇದು ಸ್ಮರಣೀಯ ಎಂದರು.

ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ,  ಯುವಕರಿಗೆ ಇದೊಂದು ಉತ್ತಮ ವೇದಿಕೆ ಇಲ್ಲಿ ಕಲಿತದ್ದೆಲ್ಲವು ಜೀವನ ಪರ್ಯಂತ ಉಪಯೋಗಕ್ಕೆ ಬರುತ್ತದೆ. ಭಾವೈಕ್ಯತೆ ಭಾವ ಮುಡಿಸುವ ಕಾರ್ಯ ಯುವಜನೋತ್ಸವದಲ್ಲಿ ನಡೆದಿದೆ.  ಪ್ರಧಾನಿ ಮೋದಿ ಅವರು ಓಲಂಪಿಕ್ಸ್ ನಲ್ಲಿ ಗೆದ್ದವರಷ್ಟೆ ಅಲ್ಲ ಸೋತವರನ್ನು ಹುರುದುಂಬಿಸಿದರು. ಜೀವನದಲ್ಲಿ ತೊಂದರೆಗಳು ಬರುತ್ತವೆ. ಅವೆಲ್ಲವನ್ನು ಮೆಟ್ಟಿ ನಿಲ್ಲಬೇಕು. ಕೋವಿಡ್ ಸಂದರ್ಭ ನಮಗೆ ಅನೇಕ ಸವಾಲುಗಳು ಇದ್ದವು. 140 ಕೋಟಿ ಜನರು ಇರುವ ದೇಶವನ್ನು ಮೋದಿ ಮುನ್ನಡಿಸಿ ಆರ್ಥಿಕವಾಗಿ ಸಬಲತೆ ಕಾಯ್ದುಕೊಂಡರು ಎಂದರು.

ಯುವಜನೊತ್ಸವದಲ್ಲಿ ಪಾಲ್ಗೊಂಡಿದ್ದ ಲಡಾಖ್ ನ ಯುವತಿ ಮಾಂಸುವಾ, ಮಾತನಾಡಿ, ಯುವಜನೋತ್ಸವ ಖುಷಿ ಕೊಟ್ಟಿದೆ. ಇಡೀ ಭಾರತ ಶ್ರೇಷ್ಠ ಎನ್ನುವುದು ಸಾಬೀತಾಗಿದೆ. ದೇಶದ ತುತ್ತ ತುದಿಯ ಭಾಗದಿಂದ ಬಂದ ನನಗೆ ಸಮಗ್ರ ಭಾರತ ದರ್ಶನವಾಯಿತು ಎಂದರು.

ಸಿಕ್ಕಿಂ ನ ಯುವಕ ಬೀಮ್ ಸುಬಾ ಮಾತನಾಡಿ, ಇಲ್ಲಿಗೆ ಬರುವ ಮುಂಚೆ ಭಾರತ ಅಷ್ಟೆ ಮನಸ್ಸಿನಲ್ಲಿ ಇತ್ತು. ಯುವಜನೋತ್ಸವದಲ್ಲಿ ಭಾಗಿಯಾದ ನಂತರ ಭಾರತ ಶ್ರೇಷ್ಠ ಭಾರತ ಎಂಬುದು ಮನದಟ್ಟಾಯಿತು ಎಂದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡಿದ ವಿಭಿನ್ನ ರಾಜ್ಯಗಳ 19 ಯುವಕ-ಯುವತಿಯರು ಮತ್ತು 6 ಸಂಘ-ಸಂಸ್ಥೆ ಗಳಿಗೆ ರಾಷ್ಟ್ರೀಯ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಜ್ಯಪಾಲರಾದ ಥಾವರ ಚಂದ ಗೆಹ್ಲೊಟ್, ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್, ಕ್ರೀಡಾ ಸಚಿವ ಡಾ.ನಾರಾಯಣ ಗೌಡ, ಮೇಯರ್ ಈರೇಶ ಅಂಚಟಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.