ಬಂಜೆತನ ನೀಗಿಸಲು ಐವಿಎಫ್‌ ತಂತ್ರಜ್ಞಾನ ವರದಾನ


Team Udayavani, Dec 23, 2019, 10:55 AM IST

huballi-tdy-2

ಹುಬ್ಬಳ್ಳಿ: ಬಂಜೆತನ ನೀಗಿಸುವ ನಿಟ್ಟಿನಲ್ಲಿ ಐವಿಎಫ್‌ ಚಿಕಿತ್ಸೆ ಮೂಲಕ ಮಕ್ಕಳನ್ನು ಪಡೆಯುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ನಗರದ ನವೀನ್‌ ಹೊಟೇಲ್‌ನಲ್ಲಿ ಆಕಾಂಕ್ಷ ಐವಿಎಫ್‌ ಸೆಂಟರ್‌ ವತಿಯಿಂದ ಐವಿಎಫ್‌ ಮೂಲಕ ಮಕ್ಕಳು ಪಡೆದ ದಂಪತಿಗಳ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿವಾಹಿತ ಮಹಿಳೆ ಮಕ್ಕಳನ್ನು ಪಡೆಯಲು ಬಯಸುತ್ತಾಳೆ. ಆದರೆ ದೈಹಿಕ ಸಮಸ್ಯೆಯಿಂದ ಹಲವರಿಗೆ ಮಕ್ಕಳಾಗಲ್ಲ. ಇಂಥ ಸಂದರ್ಭದಲ್ಲಿ ವೈದ್ಯಕೀಯ ಚಿಕಿತ್ಸೆ ಅನಿವಾರ್ಯವಾಗುತ್ತದೆ. ವೈದ್ಯಕೀಯ ತಂತ್ರಜ್ಞಾನದಿಂದ ಹಲವರು ಮಕ್ಕಳನ್ನು ಪಡೆಯುತ್ತಾರೆ. ಇಂಥ ಪುಣ್ಯ ಕಾರ್ಯ ಮಾಡುತ್ತಿರುವ ವೈದ್ಯ ದಂಪತಿ ಪ್ರಶಂಸನಾರ್ಹರು ಎಂದರು.

ಇದು ಅತ್ಯಂತ ಹೃದಯಸ್ಪರ್ಶಿ ಕಾಯಕ್ರಮ. ಮಕ್ಕಳನ್ನು ಪಡೆದ ತಾಯಂದಿರ ಖುಷಿ ವರ್ಣಿಸಲು ಸಾಧ್ಯವಿಲ್ಲ. ಜಗತ್ತಿನಲ್ಲಿ ತಾಯಿಯನ್ನು ಮಾತ್ರ ದೇವರ ಸ್ವರೂಪದಲ್ಲಿ ನೋಡುತ್ತೇವೆ. ಜೀವ ಕೊಡುವವಳು ತಾಯಿ ಮಾತ್ರ ಎಂದರು. ಮಕ್ಕಳಾಗದ ಹೆಣ್ಣು ಮಕ್ಕಳು ಬಂಜೆತನದಿಂದ ಜೀವನದುದ್ದಕ್ಕೂ ತೊಂದರೆ ಅನುಭವಿಸಬೇಕಾಗುತ್ತದೆ. ಅಂಥ ಸ್ಥಿತಿಯಲ್ಲಿ ಐವಿಎಫ್‌ ತಂತ್ರಜ್ಞಾನ ವರದಾನದಂತಿದೆ. ಮಹಿಳೆಯರಿಗೆ ಮಗುವಿಗಿಂತ ಸಂತೋಷ ಬೇರೊಂದಿಲ್ಲ. ಕೋಟಿ ರೂ. ಕೊಟ್ಟರೂ ಅವರಿಗೆ ಮಕ್ಕಳನ್ನು ಪಡೆದಾಗ ಆಗುವಷ್ಟು ಖುಷಿ ಆಗಲ್ಲ ಎಂದು ನುಡಿದರು. ಮರುಭೂಮಿಯಲ್ಲಿ ಓಯಸಿಸ್‌ನಂತೆ ಐವಿಎಫ್‌ ಚಿಕಿತ್ಸೆ ಇದೆ. ಸೆಂಟರ್‌ ಮೂಲಕ ಕೃತಕ ಗರ್ಭಧಾರಣೆಯಿಂದ 104 ಜನ ತಾಯಂದಿರು ಮಕ್ಕಳನ್ನು ಪಡೆದಿರುವುದು ಸಂತಸದ ಸಂಗತಿ ಎಂದರು. ಮಕ್ಕಳು ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸುತ್ತಿದ್ದಾರೆ. ಇದಕ್ಕೆ ಮಕ್ಕಳಿಗೆ ಸಂಸ್ಕಾರ ನೀಡದಿರುವುದೇ ಕಾರಣವಾಗಿದ್ದು, ತಾಯಂದಿರು ಮಕ್ಕಳಿಗೆ ಸಂಸ್ಕಾರ ಕಲಿಸಬೇಕು ಎಂದರು.

ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕ್ರಣ್ಣ ಮುನವಳ್ಳಿ ಮಾತನಾಡಿ, ಇದು ವೈದ್ಯ ದಂಪತಿಯ ದೊಡ್ಡ ಸಾಧನೆಯಾಗಿದೆ. ಐವಿಎಫ್‌ ಮಕ್ಕಳ ಸಂಖ್ಯೆ ಹೆಚ್ಚಾಗಿ ಮಕ್ಕಳ ಕೊರಗು ನೀಗುವಂತಾಗಲಿ. ದೇವರ ಕರುಣೆ-ವೈದ್ಯರ ಸಹಕಾರದಿಂದ ಮಕ್ಕಳನ್ನು ಪಡೆಯಲು ಸಾಧ್ಯವಾಗಿದೆ. ಪ್ರಾಮಾಣಿಕ ಕಾರ್ಯ ಇದಾಗಿದೆ ಎಂದರು.

ಸಾನಿಧ್ಯ ವಹಿಸಿದ್ದ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಮಾತನಾಡಿ, 100ಕ್ಕೂ ಹೆಚ್ಚು ದಂಪತಿಗಳು ಮಕ್ಕಳನ್ನು ಪಡೆದಿದ್ದಾರೆ. ಅವರೆಲ್ಲರೂ ಭಾಗ್ಯವಂತರು. ವೈದ್ಯಕೀಯ ಚಿಕಿತ್ಸೆ ಮೂಲಕ ಮಕ್ಕಳನ್ನು ದಯಪಾಲಿಸಿದ ವೈದ್ಯ ದಂಪತಿ ಕಾರ್ಯ ಶ್ಲಾಘನೀಯ ಎಂದರು. ಗೃಹಸ್ಥ ಬದುಕಿನಲ್ಲಿ ಮಗು ಪಡೆಯುವುದು ಮಹತ್ವದ್ದು. ಸಾರ್ಥಕತೆ ಮಗು ಪಡೆಯುವುದರಲ್ಲಿ ಇರುತ್ತದೆ. ಮಕ್ಕಳಿಂದ ಮನೆಯ ವಾತಾವರಣ ಹರ್ಷದಾಯಕವಾಗಿರುತ್ತದೆ. ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಕೊಂಕು ಮಾತು ಕೇಳಬೇಕಾಗುತ್ತದೆ. ವೈದ್ಯ ದಂಪತಿಯ ಮಹತ್ಕಾರ್ಯ ನಿರಂತರವಾಗಿ ನಡೆಯಲಿ. ಐವಿಎಫ್‌ ಚಿಕಿತ್ಸೆ ಮೂಲಕ ಸಮಾಜದಲ್ಲಿ ಮಕ್ಕಳಿಲ್ಲದವರ ಕೊರತೆ ನೀಗಿಸಲಿ ಎಂದರು. ಡಾ| ವಿಶ್ವನಾಥ ಶಿವನಗುತ್ತಿ, ಡಾ|ಸುಶ್ಮಾ ಶಿವನಗುತ್ತಿ ಇದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.