ಗ್ರಾಮೀಣ ಸಬಲೀಕರಣಕ್ಕೆ ಜಾಬಿನ್‌ ಜಾಗೃತಿ


Team Udayavani, Dec 23, 2019, 11:02 AM IST

huballi-tdy-3

ಹುಬ್ಬಳ್ಳಿ: ಗ್ರಾಮೀಣ ಜನರಿಗೆ ಆರೋಗ್ಯ, ಶಿಕ್ಷಣ, ಸಾವಯವ ಕೃಷಿ, ಸರ್ಕಾರಿ ವಿವಿಧ ಸೌಲಭ್ಯಗಳ ಕುರಿತಾಗಿ ಜಾಗೃತಿ ಮೂಡಿಸುವ, ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಮಾರ್ಗದರ್ಶನ, ಸಹಕಾರಿ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಉನ್ನತ ಭಾರತ ಅಭಿಯಾನದಡಿ ಇಲ್ಲಿನ ಪಿ.ಸಿ.ಜಾಬಿನ್‌ ಕಾಲೇಜು ಐದು ಗ್ರಾಮಗಳಲ್ಲಿ ಜಾಗೃತಿಯ ಮಹತ್ವದ ಹೆಜ್ಜೆಗಳನ್ನಿರಿಸಿದೆ.

ಕೇಂದ್ರ ಸರ್ಕಾರದ ಉನ್ನತ ಭಾರತ ಅಭಿಯಾನ 2.0 ಅಡಿಯಲ್ಲಿ ರಾಜ್ಯದ ಎರಡು ಕಾಲೇಜುಗಳನ್ನು ಆಯ್ಕೆ ಮಾಡಲಾಗಿದ್ದು, ಎರಡೂ ಉತ್ತರ ಕರ್ನಾಟಕದ ಕಾಲೇಜುಗಳು ಎಂಬುದು ಹೆಮ್ಮೆಯ ವಿಷಯ. ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ.ಜಾಬಿನ್‌ ಕಾಲೇಜು ಹಾಗೂ ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜು ಅಭಿಯಾನಕ್ಕೆ ಆಯ್ಕೆಯಾಗಿವೆ. ಪಿ.ಸಿ.ಜಾಬಿನ್‌ ಕಾಲೇಜು ಐದು ಗ್ರಾಮಗಳನ್ನು ದತ್ತು ಪಡೆದು ಹಲವು ಜಾಗೃತಿ, ಅಭಿವೃದ್ಧಿಗೆ ಪೂರಕ ಕಾರ್ಯಗಳನ್ನು ಈಗಾಗಲೇ ಕೈಗೊಂಡಿದೆ.

ಮುಂಬೈ ಐಐಟಿಯವರು ಗ್ರಾಮಗಳ ಅಭಿವೃದ್ಧಿ ಹಾಗೂ ಸಬಲೀಕರಣ ನಿಟ್ಟಿನಲಿ ಕೈಗೊಳ್ಳಬಹುದಾದ ಜಾಗೃತಿ ಹಾಗೂ ಕಾಮಗಾರಿಗಳ ಕುರಿತಾಗಿ ಹಲವು ಶಿಫಾರಸುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಈ ಚಿಂತನೆಯ ಫ‌ಲವಾಗಿ ಕೇಂದ್ರ ಸರ್ಕಾರ ಉನ್ನತ ಭಾರತ ಅಭಿಯಾನ 2.0 ದೇಶಾದ್ಯಂತ ಜಾರಿಗೊಳಿಸಿತ್ತು.

ಐದು ಗ್ರಾಮಗಳಲ್ಲಿ ಜಾಗೃತಿ: ಪಿ.ಸಿ.ಜಾಬಿನ್‌ ಕಾಲೇಜು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ, ಸುಳ್ಳ, ಸಿರಗುಪ್ಪಿ, ಅದರಗುಂಚಿ, ಶರೇವಾಡ ಗ್ರಾಮಗಳನ್ನು ದತ್ತು ಪಡೆದಿದೆ. ಅಲ್ಲಿನ ಗ್ರಾಪಂಗಳ ಸಹಯೋಗದೊಂದಿಗೆ ಗ್ರಾಮಗಳಲ್ಲಿ ವಿವಿಧ ಜಾಗೃತಿ, ಅಭಿವೃದ್ಧಿ ಹಾಗೂ ಪರಿಸರಕ್ಕೆ ಪೂರಕ ಕಾರ್ಯಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ತೊಡಗಿದ್ದಾರೆ.

ಪ್ರತಿ ಗ್ರಾಮದಲ್ಲಿ ಕನಿಷ್ಟ ನಾಲ್ಕು ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಕಳೆದೊಂದು ವರ್ಷದಿಂದ ಗ್ರಾಮಸ್ಥರಿಗೆ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ, ನೀರು ನಿರ್ವಹಣೆ, ಗ್ರಾಮೀಣ ಉದ್ಯಮ ಇನ್ನಿತರ ವಿಷಯಗಳ ಕುರಿತಾಗಿ ಚರ್ಚೆ, ಜನರಿಂದ ಮಾಹಿತಿ, ಅಭಿಪ್ರಾಯ ಸಂಗ್ರಹ ಜಾಗೃತಿ ಹಾಗೂ ಅಗತ್ಯ ಮಾಗದರ್ಶನ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದೆ.

ಐದು ಗ್ರಾಮಗಳಿಗೆ ಪ್ರತ್ಯೇಕವಾಗಿ ಇಬ್ಬರು ಉಪನ್ಯಾಸಕರ ನೇತೃತ್ವದಲ್ಲಿ ತಲಾ 25 ವಿದ್ಯಾರ್ಥಿಗಳ ತಂಡವನ್ನು ರೂಪಿಸಲಾಗಿದ್ದು, ಆಯಾ ತಂಡಗಳು ನಿಗದಿಪಡಿಸುವ ಗ್ರಾಮಗಳಿಗೆ ಕನಿಷ್ಟ ತಿಂಗಳಿಗೊಮ್ಮೆಯಾದರೂ ತೆರಳಿ ಅಲ್ಲಿನ ಜನರೊಂದಿಗೆ ಬೆರೆಯುವ, ಅವರ ಸಮಸ್ಯೆಗಳನ್ನು ಆಲಿಸುವ, ಜಾಗೃತಿ ಮೂಡಿಸುವ, ಸೌಲಭ್ಯಗಳ ಪಡೆಯುವ ನಿಟ್ಟಿನಲ್ಲಿ ಅಗತ್ಯ ಸಹಕಾರ ತೋರುವ ಕಾರ್ಯ ಮಾಡುತ್ತಿದ್ದಾರೆ.

ಜಲ ಸಂರಕ್ಷಣೆ-  ಸಂವರ್ಧನೆಗೆ ಆದ್ಯತೆ:  ಐದು ಗ್ರಾಮಗಳಲ್ಲಿ ಪರಸರ ಸಂರಕ್ಷಣೆ ನಿಟ್ಟಿನಲ್ಲಿ ಗಿಡಗಳನ್ನು ನೆಡುವ ಕಾರ್ಯ ಮಾಡಲಾಗಿದ್ದು, ಟೀಕ್‌, ಬೇವು, ಸಿಲ್ವರ್‌ ಓಕ್‌, ವಿವಿಧ ಔಷಧಿ ಗುಣಗಳ ಗಿಡಗಳನ್ನು ನಡೆಲಾಗಿದೆ. ಸರ್ಕಾರಿ ಶಾಲೆ ಆವರಣದಲ್ಲಿ ಹಾಗೂ ರೈತರ ಹೊಲಗಳಲ್ಲಿಯೂ ಗಿಡಗಳನ್ನು ನೆಡಲಾಗಿದ್ದು, ಸ್ಥಳೀಯ ಒಬ್ಬ ವಿದ್ಯಾರ್ಥಿಗಳಿಗೆ ಒಂದು ಗಿಡದ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಜತೆಗೆ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸುವ ಅಭಿಯಾನ ಕೈಗೊಳ್ಳಲಾಗಿದೆ. ಜಲಶಕ್ತಿ ಅಭಿಯಾನದಡಿ ಜಲ ಸಂರಕ್ಷಣೆ, ಸಂವರ್ಧನೆ ಹಾಗೂ ನಿರ್ವಹಣೆ ಕುರಿತಾಗಿ ಜಾಗೃತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಭವಿಷ್ಯದ ದೃಷ್ಟಿಯಿಂದ ಜಲ ಸಂರಕ್ಷಣೆಯಲ್ಲಿ ಜನರ ಪಾಲ್ಗೊಳ್ಳುವಿಕೆ, ಜಲ ಬಜೆಟ್‌ ತಯಾರು, ನೀರು ಬಳಕೆ ನಿರ್ವಹಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಇತರೆ ಜಲ ಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ರ್ಯಾಲಿಗಳನ್ನು ಕೈಗೊಳ್ಳಲಾಗಿದ್ದು, ಜನರಿಗೆ ಮಳೆ ನೀರು ಕೊಯ್ಲು ಅಳವಡಿಕೆಗೆ ಪ್ರೇರಣೆ ನೀಡುವ ಕಾರ್ಯ ಮಾಡಲಾಗುತ್ತಿದೆ.

ಉನ್ನತ ಭಾರತ ಅಭಿಯಾನದಡಿ ನಮ್ಮ ಕಾಲೇಜು ಐದು ಗ್ರಾಮಗಳನ್ನು ದತ್ತು ಪಡೆದು ವಿವಿಧ ಜಾಗೃತಿ, ಅಭಿವೃದ್ಧಿ ಪೂರಕ ಕಾರ್ಯಗಳಿಗೆ ಮುಂದಾಗಿದ್ದು, ಗ್ರಾಮದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಐದು ಗ್ರಾಮಗಳಲ್ಲಿನ ಸುಮಾರು 24 ನಿವೃತ್ತ ಸೈನಿಕರನ್ನು ಆಹ್ವಾನಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸನ್ಮಾನ ಮಾಡಿದ್ದೇವೆ. ಗ್ರಾಮೀಣ ಜನರ ಹಲವು ಸಮಸ್ಯೆಗಳಿಗೆ ಸ್ಪಂದಿಸುವ, ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆದಿದೆ.  -ಡಾ| ಎಸ್‌.ವಿ.ಹಿರೇಮಠ, ಪ್ರಾಂಶುಪಾಲ, ಪಿ.ಸಿ.ಜಾಬಿನ್‌ ಕಾಲೇಜು

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.