ಜಮೀರ್ ಪರ ಮಾತನಾಡಿ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ: ಶೆಟ್ಟರ್
Team Udayavani, Sep 14, 2020, 4:33 PM IST
ಧಾರವಾಡ: ಶಾಸಕ ಜಮೀರ್ ಅಹಮದ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಸಮರ್ಥನೆಯಿಂದ ಸಿದ್ದರಾಮಯ್ಯ ತಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋಗೆ ಹೋಗಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಹೇಳುವುದು ಎಷ್ಟು ಸರಿ ಎಂದರು.
ಈ ಹಿಂದೆ ಜಿ.ಪರಮೇಶ್ವರ ಅವರು ಗೃಹ ಸಚಿವರಾಗಿದ್ದ ವೇಳೆಯೂ ಡ್ರಗ್ಸ್ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದೆವು. ಅವರು ಗಂಭೀರವಾಗಿ ಪರಿಗಣಿಸಿರಲಿಲ್ಲ. ಈಗ ಎಲ್ಲವೂ ಸ್ಪೋಟಗೊಂಡಿದೆ. ನಮ್ಮ ಸರ್ಕಾರ ಬಹಳ ಗಂಭೀರವಾಗಿ ಈ ಬಗ್ಗೆ ತನಿಖೆ ನಡೆಸುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಾಗ ಇಂತಹ ಪ್ರಕರಣಗಳು ಹೊರಗಡೆ ಬರಲಿಲ್ಲ. ಅವರು ಅಧಿಕಾರದಲ್ಲಿದ್ದಾಗ ಇಂತಹ ಚಟುವಟಿಕೆಗಳಿಗೆ ರಕ್ಷಣೆ ಕೊಟ್ಟಿದ್ದರು ಎಂದು ಶೆಟ್ಟರ್ ಹೇಳಿದರು.
ಡ್ರಗ್ಸ್ ಗೆ ಯುವಕರು ಬಹಳ ಅಡಿಕ್ಟ್ ಆಗುತ್ತಿದ್ದಾರೆ. ಅದನ್ನು ತಪ್ಪಿಸಬೇಕಾಗಿದೆ. ಇದನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇನ್ನೂ ಕೆಲವೊಂದಿಷ್ಟು ವ್ಯಕ್ತಿಗಳು ತನಿಖೆಯಿಂದ ತಪ್ಪಿತಸ್ಥರು ಎಂಬುದು ಗೊತ್ತಾಗಲಿದೆ ಎಂದರು.
ಇದನ್ನೂ ಓದಿ: ಹೋಂ ಸ್ಟೇಗಳಲ್ಲಿ ಮಾದಕ ದ್ರವ್ಯದ ಕೇಸ್ ಬಂದರೆ ಮಾಲೀಕರೆ ಹೊಣೆ: ಪ್ರವೀಣ್ ಸೂದ್ ಎಚ್ಚರಿಕೆ
ರಾಜಕೀಯ ಪಕ್ಷದವರೂ ಡ್ರಗ್ಸ್ ಗೆ ಅಡಿಕ್ಟ್ ಆಗಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಆ ನಾಯಕರ ಹೆಸರು ಗೊತ್ತಿದ್ದರೆ ನೀವೇ ಹೇಳಿಬಿಡಿ ಎಂದು ಪತ್ರಕರ್ತರನ್ನೇ ಕೇಳಿದರು.
ಸಿಬಿಐಯನ್ನು ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಸಿದ್ದರಾಮಯ್ಯನವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶೆಟ್ಟರ್, ಯಾರು ತಪ್ಪು ಮಾಡಿಲ್ಲವೋ ಅವರು ತನಿಖೆಗೆ ಹೆದರುವ ಅಗತ್ಯವಿಲ್ಲ. ಜಮೀರ್ ತಪ್ಪು ಮಾಡಿಲ್ಲ ಎಂದರೆ ಏಕೆ ಹೆದರಬೇಕು? ಯೋಗೀಶ ಗೌಡ ಪ್ರಕರಣದಲ್ಲೂ ತಪ್ಪು ಮಾಡದವರು ಹೆದರುವ ಅಗತ್ಯವಿಲ್ಲ ಎಂದರು.
ನಾನು ದೆಹಲಿಗೆ ಹಲವು ಅಭಿವೃದ್ಧಿ ಕೆಲಸಗಳ ಸಲುವಾಗಿ ಹೋಗಿದ್ದೆ. ಇದಕ್ಕೆ ಬೇರೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದರು.
ಇದನ್ನೂ ಓದಿ: ಅನಂತ್ ಕುಮಾರ್ ಹೆಗಡೆ ಸೇರಿ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢ
ಧಾರವಾಡ-ಬೆಳಗಾವಿ-ಕಿತ್ತೂರು ರೈಲ್ವೆ ಮಾರ್ಗಕ್ಕೆ ಸಂಬಂಧಿಸಿದಂತೆ ಶೀಘ್ರವೇ ಭೂಸ್ವಾಧೀನ ಮಾಡಿಕೊಂಡು ಕೇಂದ್ರಕ್ಕೆ ಸಲ್ಲಿಸಲಾಗುವುದು. ಅಳ್ನಾವರ ಮಾರ್ಗವಾಗಿ ಸಾಕಷ್ಟು ರೈಲುಗಳು ಸಂಚರಿಸಲಿವೆ. ಇನ್ನೂ ಕೆಲವೊಂದಿಷ್ಟು ರೈಲುಗಳನ್ನು ಆ ಮಾರ್ಗದ ಮೂಲಕ ಸಂಚರಿಸುವಂತೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈರಣ್ಣ ಜಡಿ ನೇತೃತ್ವದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಸಾಕಷ್ಟು ಕೆಲಸಗಳನ್ನು ಮಾಡಲಿದೆ. ಅಕಾಡೆಮಿಗೆ ಇನ್ನಷ್ಟು ಹೆಚ್ಚಿನ ಅನುದಾನದ ಸಲುವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಶೆಟ್ಟರ್ ಹೇಳಿದರು.
ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅರವಿಂದ ಬೆಲ್ಲದ, ಅಮೃಯ ದೇಸಾಯಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್