ಸಂಘಪರಿವಾರದ ಹೆಸರು ಹೇಳದಿದ್ದರೆ ಸಿದ್ದರಾಮಯ್ಯ-ಡಿಕೆಶಿ ಗೆ ತಿಂದಿದ್ದು ಜೀರ್ಣವಾಗದು: ಶೆಟ್ಟರ್
Team Udayavani, Apr 11, 2022, 3:52 PM IST
ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಡಿ.ಕೆ. ಶಿವಕುಮಾರ್ ಗೆ ಸಂಘ ಪರಿವಾರದ ಹೆಸರು ಹೇಳದಿದ್ದರೆ, ಅವರಿಗೆ ತಿಂದದ್ದು ಜೀರ್ಣ ಆಗುವುದಿಲ್ಲ ಎಂದೆನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಾಗ್ದಾಳಿ ನಡೆಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ-ದೇಶದಲ್ಲಿನ ಎಲ್ಲ ಸಮಸ್ಯೆಗಳಿಗೂ ಸಂಘ ಪರಿವಾರವನ್ನೇ ಗುರಿ ಮಾಡುತ್ತಾರೆ. ಪದೇ ಪದೇ ಸಂಘ ಪರಿವಾರದ ಹೆಸರು ಹೇಳುವುದು ಅವರಿಗೆ ಖಯಾಲಿಯಾಗಿಬಿಟ್ಟಿದೆ. ಇದನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರದ ಬಗ್ಗೆಯಾಗಲಿ ಅಥವಾ ಮುಖ್ಯಮಂತ್ರಿಗಳ ಬಗ್ಗೆಯಾಗಲಿ ಏನಾದರೂ ಮಾತನಾಡುವುದಿದ್ದರೆ ಮಾತನಾಡಲಿ. ಅದನ್ನು ಬಿಟ್ಟು ಸಂಘ ಪರಿವಾರದ ವಿರುದ್ಧ ಅನಗತ್ಯ ಟೀಕೆ ಮಾಡುವುದು ಸರಿಯಲ್ಲ. ವಿರೋಧ ಪಕ್ಷದ ವೈಫಲ್ಯತೆ ಮುಚ್ಚಿಕೊಳ್ಳಲು ಇವತ್ತು ಸಂಘದ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ:ಇಂದೇ ಉಸ್ತುವಾರಿ ಬದಲಾಯಿಸಿ, ನನಗೇನು ಅಭ್ಯಂತರವಿಲ್ಲ: ಶಾಸಕರ ವಿರುದ್ಧ ಗರಂ ಆದ ಬಿ.ಸಿ.ಪಾಟೀಲ
ಧಾರವಾಡದಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವು ವೇಳೆ ದಾಂಧಲೆ ವಿಚಾರವಾಗಿ ಒಬ್ಬರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ. ಎರಡೂ ಕಡೆಯವರು ಸಂಯಮದಿಂದ ಇದ್ದರೆ ಈ ರೀತಿಯ ಘಟನೆಗಳು ನಡೆಯುವುದಿಲ್ಲ. ಕಲ್ಲಂಗಡಿ ಹಣ್ಣು ಎಸೆದಾಗ ವ್ಯಾಪಾರಿಯ ಪರ ಮಾತನಾಡುವವರು ಶಿವಮೊಗ್ಗದ ಹರ್ಷನ ಕೊಲೆ ಬಗ್ಗೆ ಯಾಕೆ ಮಾತನಾಡುವುದಿಲ್ಲ. ಕೇವಲ ಒಂದು ಸಮಾಜದ, ಒಂದು ಸಮುದಾಯದ ತಪ್ಪನ್ನೇ ಎತ್ತಿ ತೋರಿಸುವುದು ಸರಿಯಲ್ಲ. ಈ ಪದ್ಧತಿ ಅಳಿದರೆ ಮಾತ್ರ ಸೌಹಾರ್ದತೆ ವಾತಾವರಣ ನಿರ್ಮಾಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮತ ಬ್ಯಾಂಕ್ ರಾಜಕಾರಣ ನಿಲ್ಲಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ