ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್
Team Udayavani, May 31, 2023, 11:57 AM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ. ಅವರ ಅನುಭವ ಹಾಗೂ ಶಕ್ತಿಯನ್ನು ಪಕ್ಷ ಸದ್ಬಳಿಕೆ ಮಾಡಿಕೊಳ್ಳಲಿದೆ. ಅವರೊಂದಿಗೆ ಪಕ್ಷ ಇರುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಿಳಿಸಿದರು.
ಇಲ್ಲಿನ ಬದಾಮಿ ನಗರದಲ್ಲಿರುವ ಶೆಟ್ಟರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ, ಶ್ರೀನಿವಾಸ, ಲಕ್ಷ್ಮಣ ಸವದಿ ಅವರಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ.
ರಾಜಕೀಯದಲ್ಲಿ ಸೋಲು ಗೆಲುವು ಸಾಮಾನ್ಯ. ಶೆಟ್ಟರ ಹಾಗೂ ಸವದಿ ಅವರಿಗೆ ಹೈಕಮಾಂಡ್ ಹಾಗೂ ಎಐಸಿಸಿ ಅಧ್ಯಕ್ಷರ ಸಂದೇಶವನ್ನು ಇವರಿಗೆ ಮುಟ್ಟಿಸಿದ್ದೇನೆ. ಮುಂದಿನ ಲೋಕಸಭೆ ಚುನಾವಣೆ ತಯಾರಿ ಹಾಗೂ ಸಂಘಟನೆ ಕುರಿತು ಮಾತನಾಡಿದ್ದೇವೆ. ಪಕ್ಷ ಶೆಟ್ಟರ ಅವರೊಂದಿಗೆ ಇರುತ್ತದೆ ಎಂದರು.
ಶೆಟ್ಟರ್ ಜೊತೆ ನಾವು ಇರುತ್ತೇವೆ. ನಮಗೆ ವರಿಷ್ಠರ ಆದೇಶ ಇದೆ. ಶೆಟ್ಟರ ಅವರಿಗೆ ಸ್ಥಾನಮಾನ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ. ಪಕ್ಷ ಅವರ ಜೊತೆ ಇರುತ್ತದೆ. ಈ ವಿಚಾರದಲ್ಲಿ ನಾವೇನು ಗೌಪ್ಯವಾಗಿ ಇಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ