ಜನಾಶೀರ್ವಾದ ಇರುವವರೆಗೆ ಬಿಜೆಪಿ ತಂತ್ರ ಫಲಿಸದು: ಜಗದೀಶ್ ಶೆಟ್ಟರ್

ಕರ್ನಾಟಕ ಗುಜರಾತಲ್ಲ, ಹುಬ್ಬಳ್ಳಿ ಅಹ್ಮದಾಬಾದ್‌ ಅಲ್ಲ

Team Udayavani, May 7, 2023, 8:33 AM IST

ಜನಾಶೀರ್ವಾದ ಇರುವವರೆಗೆ ಬಿಜೆಪಿ ತಂತ್ರ ಫಲಿಸದು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನಾನು ಬಸವ ತತ್ವಗಳನ್ನು ನಂಬಿದ ವ್ಯಕ್ತಿಯಾಗಿದ್ದು, ಬಿಜೆಪಿ ರಾಷ್ಟ್ರ-ರಾಜ್ಯ ನಾಯಕರು ನನ್ನನ್ನು ಸೋಲಿಸಿ ಎಂಬ ಒಂದಂಶದ ಪ್ರಚಾರಕ್ಕೆ ಮುಂದಾಗಿದ್ದಾರೆ. ಆದರೆ, ಕರ್ನಾಟಕ ಗುಜರಾತ ಅಲ್ಲ, ಹುಬ್ಬಳ್ಳಿ ಅಹ್ಮದಾಬಾದ್‌ ಅಲ್ಲ. ಕ್ಷೇತ್ರದ ಮತದಾರರ ಆಶೀರ್ವಾದ ಇರುವವರೆಗೂ ಯಾರು ಏನು ಮಾಡಲಾಗದು. ಇದು ಹುಬ್ಬಳ್ಳಿ ಜನರ ಮರ್ಯಾದೆ ಪ್ರಶ್ನೆಯಾಗಿದ್ದು, ತಕ್ಕ ಉತ್ತರ ನೀಡಬೇಕಾಗಿದೆ ಎಂದು ಮಾಜಿ ಸಿಎಂ, ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

ಯಂಗ್‌ ಸ್ಟಾರ್‌ ಕ್ಲಬ್‌ ಮೈದಾನದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ಬಿಜೆಪಿ
ನಾಯಕರಾಗಿ ನೋಡಿದ್ದ ನೀವು, ಇದೀಗ ಕಾಂಗ್ರೆಸ್‌ ನಾಯಕರಾಗಿ ನೋಡುತ್ತಿದ್ದೀರಿ. ಬಿಜೆಪಿಯಿಂದ ಆಗಿರುವ
ಅನ್ಯಾಯ ಮತ್ತೆ ಇಲ್ಲಿ ಹೇಳುವುದು ಬೇಡ. ನಾನು ಕಾಂಗ್ರೆಸ್‌ ಸೇರಿಯಾಗಿದ್ದು, ಪಕ್ಷ ಬೆಳೆಸಲು ಶಕ್ತಿ ಮೀರಿ ಯತ್ನಿಸುವೆ. ಧರ್ಮ ಸಂಘರ್ಷ ನಡೆಯದಂತೆ ಸೌಹಾರ್ದ ಬದುಕು ನಿರ್ಮಾಣಕ್ಕೆ ಯತ್ನಿಸಬೇಕಾಗಿದೆ ಎಂದರು.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್  ಸಿಂಗ್‌ ಸುಖು ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಯಲ್ಲಿ ನಿಷ್ಠಾವಂತರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಟಿಕೆಟ್‌ ನೀಡದೆ ಷಡ್ಯಂತ್ರ ಮಾಡಿ, ಅವರು ಪಕ್ಷ ತೊರೆಯುವಂತೆ ಮಾಡಲಾಗಿದೆ. ಬಿಜೆಪಿ ಈ ರೀತಿ ಅನೇಕರಿಗೆ ದೋಖಾ ನೀಡುತ್ತ ಬಂದಿದ್ದು, ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಹೇಳಿದರು.

ಹಿಮಾಚಲದಲ್ಲಿ ಚುನಾವಣೆ ವೇಳೆ ರಾಹುಲ್‌ ಗಾಂಧಿಯವರ ಪ್ರೇರಣೆಯಂತೆ 10 ಭರವಸೆಗಳನ್ನು ನೀಡಿದ್ದೆವು. ಅದರಲ್ಲಿ ಪ್ರಮುಖವಾಗಿ ಸರಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನೀಡಿದ ಭರವಸೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿಯೂ ಪಕ್ಷ
ಅಧಿಕಾರಕ್ಕೆ ಬಂದರೆ ಇಲ್ಲಿಯೂ ನೀಡಿದ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.

ವಿಧಾನ ಪರಿಷತ್ತು ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಮಾತನಾಡಿ, ಕರ್ನಾಟಕದಲ್ಲಿ ಕೋವಿಡ್‌ ಸಂಕಷ್ಟ, ನೆರೆ
ಸಮಸ್ಯೆ ವೇಳೆ ಬಾರದ ಪ್ರಧಾನಿಯವರು ಇದೀಗ ನಿತ್ಯವೂ ರಾಜ್ಯಕ್ಕೆ ಪ್ರಚಾರಕ್ಕೆ ಬರುತ್ತಿದ್ದಾರೆ, ರೋಡ್‌ ಶೋ
ನಡೆಸುತ್ತಿದ್ದಾರೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ನಾಯಕರಾದ ಕೆ.ಸಿ. ವೇಣುಗೋಪಾಲ, ಮಾಣಿಕ್ಯಂ ಠಾಗೋರ್‌, ವಿಶ್ವನಾಥನ್‌, ಸಲೀಂ ಅಹ್ಮದ್‌, ದೀಪಕ
ಚಿಂಚೋರೆ, ಎನ್‌.ಎಚ್‌. ಕೋನರಡ್ಡಿ, ಪ್ರೊ| ಐ.ಜಿ. ಸನದಿ, ಅಲ್ತಾಫ್‌ ಹಳ್ಳೂರು, ಅನಿಲಕುಮಾರ ಇನ್ನಿತರರು ಇದ್ದರು.

30 ವರ್ಷಗಳ ರಾಜಕೀಯ ಜೀವನದಲ್ಲೇ ಇಂತಹ ಗ್ಯಾರೆಂಟಿಗಳನ್ನು ನೋಡಿರಲಿಲ್ಲ. ಜನ ಕಲ್ಯಾಣಕ್ಕೆ ಪೂರಕ ಪ್ರಣಾಳಿಕೆಯನ್ನು ಕಾಂಗ್ರೆಸ್‌ ರೂಪಿಸಿದ್ದು, ಪ್ರಮುಖ 5 ಗ್ಯಾರೆಂಟಿಗಳನ್ನು ನೀಡಿದೆ. 140-150 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದು ಖಚಿತ.
-ಜಗದೀಶ ಶೆಟ್ಟರ,
ಹು-ಧಾ ಸೆಂಟ್ರಲ್‌ ಅಭ್ಯರ್ಥಿ

ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒಂದೇ ಬಾರಿಗೆ ನನ್ನ ಕ್ಷೇತ್ರಕ್ಕೆ ಆಗಮಿಸಿರುವುದು ನನ್ನ ಭಾಗ್ಯ. ಕಳೆದ 10 ವರ್ಷಗಳಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ದಿ ಕಾರ್ಯಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತೊಮ್ಮೆ ಆಶೀರ್ವಾದ ಮಾಡಿ.
-ಪ್ರಸಾದ ಅಬ್ಬಯ್ಯ,
ಹು-ಧಾ ಪೂರ್ವ ಕ್ಷೇತ್ರದ ಅಭ್ಯರ್ಥಿ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.