ಅಂಗವಿಕಲರಿಗೆ ಮಾಸಾಶನ ಕೊಡದ ಅಧಿಕಾರಿ ತರಾಟೆಗೆ
Team Udayavani, Jul 29, 2018, 5:19 PM IST
ಬೆಳಗಾವಿ: ಸಾಂಬ್ರಾ ಜನತಾ ದರ್ಶನದಲ್ಲಿ ಅನೇಕ ಅಂಗವಿಕಲರು ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಲು ಬಂದಿರುವುದನ್ನು ಕಂಡು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ತಾಲೂಕಿನ ಸಾಂಬ್ರಾ ಗ್ರಾಮದ ದುರ್ಗಾಮಾತಾ ದೇವಸ್ಥಾನದಲ್ಲಿ ಶನಿವಾರ ನಡೆದ ಜನತಾ ದರ್ಶನದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರು ಅರ್ಜಿ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಕೇಳಿದರು. ಅಂಗವಿಕಲರಿಗೆ ವೇತನ ಕೊಡದಿದ್ದರೆ ಮತ್ತೆ ಇನ್ನು ಯಾರಿಗೆ ಪಿಂಚಣಿ ಕೊಡುತ್ತೀರಾ. ಮೊದಲೇ ಇವರು ವಿಕಲಾಂಗರು. ವೇತನಕ್ಕಾಗಿ ಇವರು ನಿಮ್ಮ ಕಚೇರಿಗೆ ಸುತ್ತಾಡಬೇಕಾ. ಮಾನವೀಯತೆ ಎನ್ನುವುದು ನಿಮಗೆ ಇಲ್ಲವೇ ಎಂದು ಲಕ್ಷ್ಮೀ ಹೆಬ್ಟಾಳಕರ ಅವರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ನಂತರ ಕೆಲ ಫಲಾನುಭವಿಗಳಿಗೆ ಮಾಸಾಶನದ ಆದೇಶದ ಪತ್ರ ನೀಡಿದ ಶಾಸಕಿ ಹೆಬ್ಟಾಳಕರ, ಕ್ಷೇತ್ರದ ಎಲ್ಲ ಹಳ್ಳಿಗಳ ಮನೆ-ಮನೆಗೂ ಹೋಗಲು ನಾನು ಸಿದ್ಧ. ಹಗಲು ರಾತ್ರಿ ಜನರ ಕಷ್ಟ, ಸುಖಗಳನ್ನು ಕೇಳಲು ತಯಾರಿದ್ದೇನೆ. ಅಧಿಕಾರಿಗಳು ನನ್ನ ವೇಗಕ್ಕೆ ತಕ್ಕಂತೆ ಜನರ ಸೇವೆ ಮಾಡಬೇಕು. ಈ ವಿಷಯದಲ್ಲಿ ವಿಳಂಬ ಮಾಡಿದರೆ ಕ್ಷಮಿಸುವುದಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಂದೋಲನದ ರೂಪದಲ್ಲಿ ಅಭಿಯಾನ ನಡೆಸಿ ಕ್ಷೇತ್ರದ ಜನರಿಗೆ ಸರಕಾರದ ಸವಲತ್ತುಗಳನ್ನು ತಲುಪಿಸಬೇಕು ಎಂದು ತಾಕೀತು ಮಾಡಿದರು.
ಜನತಾ ದರ್ಶನದಲ್ಲಿ ಸಲ್ಲಿಸುತ್ತಿರುವ ಅರ್ಜಿಗಳ ಜೊತೆಗೆ ಅರ್ಜಿ ಸಲ್ಲಿಸುವವರ ದೂರವಾಣಿ ಸಂಖ್ಯೆ ಪಡೆಯುತ್ತಿದ್ದೇನೆ. ಅವರು ಯಾವ ಸವಲತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆ, ಅದು ಎಲ್ಲಿಗೆ ಬಂತು ಎನ್ನುವುದನ್ನು ಫಾಲೋಅಪ್ ಮಾಡಲು ನನ್ನ ಸ್ವಂತ ಕಚೇರಿಯಲ್ಲಿ ಕಾಲ್ ಸೆಂಟರ್ ಆರಂಭಿಸುತ್ತೇನೆ. ನನ್ನ ಕ್ಷೇತ್ರದ ಜನರಿಗೆ ನ್ಯಾಯ ಸಿಗುವವರೆಗೆ ಹೋರಾಡುತ್ತೇನೆ ಎಂದು ಹೇಳಿದರು.
ಅಂಗವಿಕಲರಿಗೆ ವೇತನ ಕೊಡದಿದ್ದರೆ ಮತ್ತೆ ಇನ್ನು ಯಾರಿಗೆ ಪಿಂಚಣಿ ಕೊಡುತ್ತೀರಾ. ಮೊದಲೇ ಇವರು ವಿಕಲಾಂಗರು. ವೇತನಕ್ಕಾಗಿ ಇವರು ನಿಮ್ಮ ಕಚೇರಿಗೆ ಸುತ್ತಾಡಬೇಕಾ. ಮಾನವೀಯತೆ ಎನ್ನುವುದು ನಿಮಗೆ ಇಲ್ಲವೇ ?
ಲಕ್ಷ್ಮೀ ಹೆಬ್ಟಾಳಕರ, ಶಾಸಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ