ಯುದ್ಧ ಕಾಲದಲ್ಲಿ ಜೆಡಿಎಸ್‌ನಿಂದ ಮತ್ತೂಮ್ಮೆ ಶಸ್ತ್ರತ್ಯಾಗ


Team Udayavani, Oct 24, 2020, 1:05 PM IST

huballi-tdy-2

ಹುಬ್ಬಳ್ಳಿ: ರಣರಂಗದಲ್ಲಿ ಯುದ್ಧ ಶುರುವಾದ ಸಂದರ್ಭದಲ್ಲಿ ಶಸ್ತ್ರತ್ಯಾಗ ಮಾಡಿದ ರೀತಿಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ವರ್ತಿಸಿದೆ. ಮತದಾನ ಮೂರು ದಿನ ಇರುವಾಗ ಅಭ್ಯರ್ಥಿ ನಿವೃತ್ತಿಗೊಳಿಸಿ, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೋಷಿಸಿ ಗೊಂದಲ ಮೂಡಿಸಿದೆ. ಈ ನಿರ್ಣಯದ ಕುರಿತಾಗಿ ರಾಜಕೀಯವಾಗಿ ಅನೇಕ ಮಾತು-ಶಂಕೆಗಳು ಕೇಳಿ ಬರತೊಡಗಿವೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದು ವರ್ಷದ ಮೊದಲೇ ಅಭ್ಯರ್ಥಿಯನ್ನಾಗಿ ಶಿವಶಂಕರ ಕಲ್ಲೂರ ಅವರನ್ನು ಜೆಡಿಎಸ್‌ ಘೋಷಣೆ ಮಾಡಿತ್ತು. ಕಲ್ಲೂರು ನಾಮಪತ್ರ ಸಲ್ಲಿಸಿ ಪ್ರಚಾರದಲ್ಲೂ ತೊಡಗಿದ್ದರು. ಮತದಾನ ಇನ್ನೇನು ಮೂರ್‍ನಾಲ್ಕು ದಿನ ಇದೆ ಎನ್ನುವಾಗಲೇ ವರಿಷ್ಠರು ಪಕ್ಷದ ಬೆಂಬಲ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಎಂದು ಘೋಷಿಸುವ ಮೂಲಕ, ಸ್ವತಃ ಪಕ್ಷದ ಅಭ್ಯರ್ಥಿಗೆ ಶಾಕ್‌ ನೀಡಿದ್ದಾರೆ.

ಉತ್ತರ ಕರ್ನಾಟಕದ ಬಗ್ಗೆ ತಾತ್ಸಾರ ತೋರುತ್ತ ಬಂದಿರುವ ಜೆಡಿಎಸ್‌, ಪಶ್ಚಿಮ ಪದವೀಧರ ಕ್ಷೇತ್ರದ ವಿಚಾರದಲ್ಲೂ ಅದೇ ಮನೋಭಾವನೆ ಮುಂದುವರಿಸಿದಿದೆಯೇ, ಪಕ್ಷದ ಅಧಿಕೃತ ಅಭ್ಯರ್ಥಿ ಕಣದಲ್ಲಿದ್ದರೂ ಅಭ್ಯರ್ಥಿಯ ಗಮನಕ್ಕೂ ತಾರದೆ ಏಕಾಏಕಿಯಾಗಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವಮೂಲಕ ತಪ್ಪು ಸಂದೇಶ ರವಾನೆ ಮಾಡುವ ಕೆಲಸ ಮಾಡಿದೆ ಎಂಬುದು ಕೆಲವರ ಅನಿಸಿಕೆ.

ಈ ಹಿಂದೆಯೂ ವಿಜಯಪುರ ಜಿಲ್ಲೆಯ ವಿಜುನಗೌಡಪಾಟೀಲರಿಗೆ ವಿಧಾನಪರಿಷತ್ತಿಗೆ ಅಭ್ಯರ್ಥಿಯಾಗುವುದಾಗಿ ಹೇಳಿ ಕೊನೆ ಗಳಿಗೆಯಲ್ಲಿ ಬೇರೊಬ್ಬರನ್ನು ಅಭ್ಯರ್ಥಿಯನ್ನಾಗಿಸಿದ್ದರ ಬಗ್ಗೆ ಆಕ್ರೋಶ ಸ್ಫೋಟಗೊಂಡಿತ್ತು. ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಉತ್ತರ ಕರ್ನಾಟಕದ ಕೆಲವು ಕಡೆಗಳಲ್ಲಿ ಅಭ್ಯರ್ಥಿಯಾಗಿಸುವುದಾಗಿ ಹೇಳಿ ಕೊನೆ ಗಳಿಗೆಯಲ್ಲಿ ಬೇರೆಯವರಿಗೆ ಬಿ ಫಾರಂ ನೀಡಿದ್ದ ಪ್ರಕರಣಗಳು ಇದ್ದು, ಇದೀಗ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಒಂದು ವರ್ಷದ ಮೊದಲೇ ತಾವೇ ಘೋಷಿಸಿದ್ದ ಅಭ್ಯರ್ಥಿ ಕಣದಿಂದ ಬಲವಂತವಾಗಿ ನಿವೃತ್ತಿಗೊಳ್ಳುವಂತೆ ಮಾಡಲಾಗಿದೆ.

ರಾಜಕೀಯ ಲೆಕ್ಕಾಚಾರವೇ?: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವುದರ ಹಿಂದೆ ಪಕ್ಷದ ವರಿಷ್ಠರ ರಾಜಕೀಯ ಲೆಕ್ಕಾಚಾರವಿದೆ. ವಿನಾಕಾರಣ ಈ ನಿರ್ಧಾರ ತೆಗೆದುಕೊಂಡಿಲ್ಲ ಎಂಬುದು ಜೆಡಿಎಸ್‌ ಮೂಲಗಳ ಸಮಜಾಯಿಷಿ. ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರು ಪಶ್ಚಿಮ ಪದವೀಧರ ಕ್ಷೇತ್ರದ ಮಾಹಿತಿ ಪಡೆದು, ಕಳೆದ ನಾಲ್ಕೈದು ದಿನಗಳಿಂದಲೇ ಕ್ಷೇತ್ರ ವ್ಯಾಪ್ತಿಯ ಪಕ್ಷದ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದಾರೆ.

ಪಕ್ಷದ ಅಭ್ಯರ್ಥಿಗೆ ನಿರೀಕ್ಷಿತ ಮಟ್ಟದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಸಾಧ್ಯವಾಗದಿರುವುದು, ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಅತ್ಯಂತ ಕಡಿಮೆ ಮತ ಪಡೆದರೆ ಉತ್ತರದಲ್ಲಿ ಪಕ್ಷಕ್ಕೆ ನೆಲೆ ಇಲ್ಲ ಎಂಬ ಅನಿಸಿಕೆಗೆ ಇನ್ನಷ್ಟು ಪುಷ್ಟಿ ನೀಡಿದಂತಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ಪಕ್ಷೇತರ ಅಭ್ಯರ್ಥಿ ಬೆಂಬಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕಲಿದ್ದು, ಇದು ಬಿಜೆಪಿಗೆ ಲಾಭ ತಂದುಕೊಡಬಲ್ಲದ್ದಾಗಿದೆ ಎಂಬುದು ಕೆಲವರ ಅನಿಸಿಕೆಯಾದರೂ, ಜೆಡಿಎಸ್‌ ಮೂಲಗಳು ಇದನ್ನು ಒಪ್ಪಲು ತಯಾರಿಲ್ಲ. ಬದಲಾಗಿ ಬಸವರಾಜ ಗುರಿಕಾರಗೆ ಗೆಲುವಾಗಲಿದೆ ನೋಡುತ್ತಿರಿ ಎನ್ನುತ್ತಿವೆ. ಹೀಗಾಗಿ ಕಾರ್ಯಕರ್ತರಲ್ಲಿ ಸಣ್ಣ ಅಸಮಾಧಾನ ಉಂಟಾಗಿದೆ.

ಹೊರಟ್ಟಿ ಮೂಲಕ ಮನವರಿಕ : ಶಿವಶಂಕರ ಕಲ್ಲೂರ ಅವರಿಗೆ ವಾಸ್ತವ ಸ್ಥಿತಿ ಹಾಗೂ ಯಾವ ಕಾರಣಕ್ಕೆ ಈ ನಿರ್ಣಯ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಮುಂಚಿತವಾಗಿ ತಿಳಿಸದೆ, ನಿರ್ಣಯ ಕೈಗೊಂಡ ನಂತರದಲ್ಲಿ ಮನವೊಲಿಕೆ ಕಾರ್ಯ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಹೊರಟ್ಟಿ ಅವರ ಮೂಲಕ ಮನವರಿಕೆ ಕಾರ್ಯ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಗುರಿಕಾರಗೆ ಬಲ : ಜೆಡಿಎಸ್‌ ನಾಯಕರು ಕೈಗೊಂಡ ನಿರ್ಧಾರದಿಂದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬಲ ಬಂದಂತಾಗಿದೆ. ಗುರಿಕಾರ ಅವರ ಬೆಂಬಲಿಗರೆಂದರೆ ಹೆಚ್ಚಿನವರು ಶಿಕ್ಷಕರು ಹಾಗೂ ನೌಕರರು. ಚುನಾವಣೆ ಪ್ರಚಾರದಲ್ಲಿ ಅವರು ಪಾಲ್ಗೊಳ್ಳಬಹುದೇ ವಿನಃ ಮತಗಟ್ಟೆ ಏಜೆಂಟರಾಗಲು ಬರುವುದಿಲ್ಲ. ಜೆಡಿಎಸ್‌ ಬೆಂಬಲದಿಂದಾಗಿ ಎಲ್ಲ ಮತಗಟ್ಟೆಗಳಿಗೂ ಏಜೆಂಟರು ಸುಲಭವಾಗಿ ಸಿಕ್ಕಂತಾಗಿದೆ ಎಂದು ಹೇಳಲಾಗುತ್ತಿದೆ.

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.