ಉಪಚುನಾವಣೆ ಬಳಿಕ ನಾವೇ ಕಿಂಗ್ ಮೇಕರ್: ಸರ್ಕಾರ ರಚನೆ ಬಗ್ಗೆ ಭವಿಷ್ಯ ನುಡಿದ ಕೋನರೆಡ್ಡಿ
Team Udayavani, Dec 3, 2019, 4:09 PM IST
ಧಾರವಾಡ: 15 ಜನ ಅನರ್ಹರಿಗೆ ಮತದಾರರೆ ತಕ್ಕ ಪಾಠ ಕಲಿಸಬೇಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಕ್ಷಾತಂರವನ್ನು ತಡೆಗಟ್ಟಬೇಕಾದ್ರೆ 15 ಜನ ಅನರ್ಹರನ್ನು ಸೋಲಿಸಬೇಕು ಎಂದು ಜೆಡಿಎಸ್ ನ ಮಾಜಿ ಶಾಸಕ ಎನ್ ಎಚ್ ಕೋನರೆಡ್ಡಿ ಹೇಳಿದರು.
ಈ ಉಪಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೂ ಹೆಚ್ಚು ಸೀಟ್ ಗಳು ಬರುವುದಿಲ್ಲ. 9 ನೇ ತಾರೀಖು ಒಳ್ಳೆಯ ದಿನ, ಅವತ್ತು ಜೆಡಿಎಸ್ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತೆ ಎಂದರು.
ಮೈತ್ರಿ ಸರ್ಕಾರ ರಚನೆ ವಿಚಾರದ ಬಗ್ಗೆ 9 ನೇ ತಾರೀಖಿನ ನಂತರ ವಿಚಾರ ಮಾಡುತ್ತೆವೆ. ಈ ಬಗ್ಗೆ ದೇವೆಗೌಡರು ಮತ್ತು ಕುಮಾರಸ್ವಾಮಿ ಹೇಳಿದ್ದಾರೆ. ಏನೇ ಆದರೂ ನೂರಕ್ಕೆ ನೂರರಷ್ಟು ನಾವೇ ಕಿಂಗ್ ಮೇಕರ್ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡ್ರೆ ಮುಖ್ಯಮಂತ್ರಿ ಸ್ಥಾನ ಯಾರಿಗೆ ಕೊಡಬೇಕು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನು ಯಾರಿಗೆ ಕೊಟ್ರು ಬೇಡ ಎನ್ನಲ್ಲ, ಆದ್ರೆ ನಮ್ಮ ಪಕ್ಷಕ್ಕೆ ಸಿಎಂ ಸ್ಥಾನ ನೀಡಿದ್ರೆ ಒಳ್ಳೆದು ಎನ್ನುವನು ನಾನು ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ