‘ಮತ’ ಪಟ್ಟಿಗೆ ಸೇರ್ಪಡೆ ಎಲ್ಲರ ಹೊಣೆ
•ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮ• ಮತದಾನಕ್ಕೆ ಸಹಕಾರಿ•ಮತದಾರರ ಯಾದಿ ದಾಖಲೆ ಪರಿಶೀಲಿಸಿ
Team Udayavani, Sep 2, 2019, 9:41 AM IST
ಧಾರವಾಡ: ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಉದ್ಘಾಟಿಸಿದರು.
ಧಾರವಾಡ: ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳಿಸುವಲ್ಲಿ ಎಲ್ಲ ಅರ್ಹ ಮತದಾರರು ಸಾರ್ವತ್ರಿಕ ಚುನಾವಣೆಗಳಲ್ಲಿ ಭಾಗವಹಿಸಿ, ತಪ್ಪದೆ ಮತದಾನ ಮಾಡಬೇಕು. ಅದಕ್ಕಾಗಿ ಅರ್ಹ ಪ್ರತಿ ಮತದಾರನ ಹೆಸರು, ವಿವರಗಳನ್ನು ಮತದಾರ ಪಟ್ಟಿಗೆ ಸೇರ್ಪಡೆಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಮತದಾರರ ಯಾದಿಯ ವಿಶೇಷ ಪರಿಷ್ಕರಣೆ-2020 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಚುನಾವಣಾ ಆಯೋಗ ಮತದಾರ ಸ್ನೇಹಿಯಾಗಿರುವ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಮೂಲಕ ಮತದಾರ ಮತದಾರರ ಯಾದಿಯಲ್ಲಿ ದಾಖಲಾಗಿರುವ ತನ್ನ ಮಾಹಿತಿ ಪರಿಶೀಲಿಸಿ ಸರಿಪಡಿಸಿಕೊಳ್ಳುವ ಅವಕಾಶ ನೀಡಿದೆ. ಇದು ಉತ್ತಮ ಕಾರ್ಯ. ಜಿಲ್ಲಾಡಳಿತ ಈ ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ರಮ ಜರುಗಿಸಿ, ಸಂಬಂಧಿತ ಎಲ್ಲ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಕೊಳ್ಳುವಂತೆ ಮಾಡಬೇಕು ಎಂದರು.
ಜಿಲ್ಲಾ ಸ್ವೀಪ್ ಯೋಜನೆ ಮುಖ್ಯಸ್ಥರಾದ ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಕಳೆದ ಲೋಕಸಭೆಯ ಚುನಾವಣೆಯಲ್ಲಿ ಮತದಾನದ ಸಂಖ್ಯೆ ಹೆಚ್ಚಳವಾಗಿದೆ. ಈ ಕಾರ್ಯಕ್ರಮದಲ್ಲಿ ಮತದಾರರ ಸೇರ್ಪಡೆ ಗುರಿಯನ್ನು ಪೂರ್ಣವಾಗಿ ಪ್ರಗತಿ ಸಾಧಿಸಲಾಗುವುದು. ಸರಕಾರಿ ನೌಕರರು ತಮ್ಮ ಹಾಗೂ ತಮ್ಮ ಕುಟುಂಬದ ಅರ್ಹ ಸದಸ್ಯರ ಮಾಹಿತಿಯನ್ನು ಮತದಾರರ ಯಾದಿಯಲ್ಲಿ ಸೇರ್ಪಡೆ ಮಾಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.
ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಮಾತನಾಡಿ, ಸಾರ್ವಜನಿಕರಿಗೆ ಚುನಾವಣಾ ಆಯೋಗ ನೀಡಿರುವ ಸಹಾಯವಾಣಿ, ಆ್ಯಪ್ ಮತ್ತು ಆನ್ಲೈನ್ ನೀಡಿರುವ ಅವಕಾಶ ಬಳಸಿಕೊಂಡು ಪ್ರತಿಯೊಬ್ಬರು ಮತದಾರರ ಯಾದಿಗೆ ತಮ್ಮ ಹೆಸರು, ವಿವರ ಸೇರಿಸುವಂತೆ ಪ್ರೇರೇಪಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಚುನಾವಣಾಧಿಕಾರಿಯಾದ ಡಿಸಿ ದೀಪಾ ಚೋಳನ್ ಮಾತನಾಡಿ, ಮತದಾರರ ಪಟ್ಟಿಯಿಂದ ಯಾವುದಾದರೂ ಹೆಸರು ಕೈಬಿಡುವ ಮೊದಲು ಮತದಾರರಿಗೆ ಇದೇ ಮೊದಲ ಬಾರಿಗೆ ಅವರ ಹೆಸರು ತೆಗೆದು ಹಾಕಿರುವ ಕುರಿತು ಏಳು ದಿನಗಳ ಕಾಲಾವಧಿಯ ನೋಟಿಸ್ ನೀಡಲಾಗುತ್ತದೆ ಅಥವಾ ಅವರ ಮನೆಗೆ ನೋಟಿಸ್ ಪ್ರತಿ ಅಂಟಿಸಲಾಗುತ್ತದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿನ್ನಣ್ಣವರ ಮಾತನಾಡಿದರು. ಪ್ರೋಬೆಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್, ಅಪರ ಡಿಸಿ ಇಬ್ರಾಹಿಂ ಮೈಗೂರ, ಹಿರಿಯ ಸಿವಿಲ್ ನ್ಯಾಯಾಧಿಧೀಶ ಚಿಣ್ಣನ್ನವರ ಆರ್.ಎಸ್., ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶಕುಮಾರ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಇದ್ದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಮಾತನಾಡಿದರು. ಡಿವೈಎಸ್ಪಿ ರಾಮನಗೌಡ ಹಟ್ಟಿ, ಜಿ.ಪಂ. ಉಪಕಾರ್ಯದರ್ಶಿ ಎಸ್.ಜಿ. ಕೊರವರ, ಎಸಿಪಿ ಎಂ.ಎನ್. ರುದ್ರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಜಾನನ ಮನ್ನಿಕೇರಿ, ಧಾರವಾಡ ತಹಶೀಲ್ದಾರ್ ಪ್ರಕಾಶ ಕುದರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ಧಾರವಾಡ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ