ಮೃತ ಕುಸ್ತಿಪಟು ಸಂತೋಷ ಕುಟುಂಬಕ್ಕೆ ಜೋಶಿ ಸಾಂತ್ವನ
Team Udayavani, Feb 18, 2017, 3:00 PM IST
ಧಾರವಾಡ: ಒಲಿಂಪಿಕ್ಸ್ನ ಕುಸ್ತಿ ಸ್ಪರ್ಧೆಯಲ್ಲಿ ಕಾಲು ಮುರಿತದಿಂದ ಕಿಮ್ಸ್ಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಬಳಿಕ ಮೃತಪಟ್ಟ ಚಿಕ್ಕಮಲ್ಲಿಗವಾಡ ಗ್ರಾಮದ ಕುಸ್ತಿಪಟು ಸಂತೋಷ ಹೊಸಮನಿ ಅವರ ಮನೆಗೆ ಸಂಸದ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿದರು.
ಚಿಕ್ಕಮಲ್ಲಿಗವಾಡ ಗ್ರಾಮದ ಸಂತೋಷ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ ಸಂಸದರು, ಬಿಜೆಪಿ ಪಕ್ಷದಿಂದ ಒಂದು ಲಕ್ಷ ರೂ. ಹಣ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಮಾತನಾಡಿದ ಸಂಸದ ಜೋಶಿ, ಓಲಿಂಪಿಕ್ಸ್ ಸಮಿತಿ ಕೈಗೊಳ್ಳಬೇಕಿದ್ದ ಮುಂಜಾಗ್ರತೆಯಲ್ಲಿ ಎಡವಿದ್ದು ಮತ್ತು ಬೇಜವಾಬ್ದಾರಿಯಿಂದ ಉತ್ಸಾಹಿ ಕ್ರೀಡಾ ಪಟುವನ್ನು ಕಳೆದುಕೊಂಡಂತಾಗಿದೆ.
ಇದಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಮಂತ್ರಿಗಳು ಕಾರಣ. ಸಮಯಕ್ಕೆ ಸರಿಯಾಗಿ ಕ್ರೀಡಾಪಟುವಿಗೆ ಯೋಗ್ಯ ಚಿಕ್ಸಿತೆ ನೀಡಲು ಕ್ರಮ ಕೈಗೊಳ್ಳದೇ ಹೋಗಿದ್ದರಿಂದ ಒಂದು ಜೀವ ಬಲಿಯಾಗಿದೆ. ಸದ್ಯ ಮೃತ ಕುಟುಂಬ ವರ್ಗಕ್ಕೆ ಸರಕಾರದಿಂದ ಸಹಾಯ ಹಸ್ತ ನೀಡುವ ಜವಾಬ್ದಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲಿದೆ ಎಂದರು. ಮಾಜಿ ಶಾಸಕಿ ಸೀಮಾ ಮಸೂತಿ, ಈರೇಶ ಅಂಚಟಗೇರಿ, ಬಸವರೆಡ್ಡಿ, ಮೋಹನ ರಾಮದುರ್ಗ, ಮಂಜು ಜೋಳಪ್ಪನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ