ಶಾಲಾ ಸೌಕರ್ಯ ಬೇಡಿಕೆ ಪ್ರಸ್ತಾವನೆಗೆ ಜೋಶಿ ಸೂಚನೆ

•ನವಲೂರ ಶಾಲೆಗೆ 150ರ ಸಂಭ್ರಮ•ಗ್ರಂಥಾಲಯ ಉದ್ಘಾಟನೆ-ಸ್ಮರಣ ಸಂಚಿಕೆ ಬಿಡುಗಡೆ

Team Udayavani, Jul 29, 2019, 8:18 AM IST

hubali-tdy-3

ಧಾರವಾಡ: ನವಲೂರ ಗ್ರಾಮದಲ್ಲಿ ರವಿವಾರ ಜರುಗಿದ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸುವರ್ಣ ಮಹೋತ್ಸವ ಸಮಾರಂಭವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉದ್ಘಾಟಿಸಿದರು.

ಧಾರವಾಡ: ಜಿಲ್ಲೆಯ ಸರಕಾರಿ ಶಾಲೆಗಳಿಗೆ ಬೇಕಾದ ಶೌಚಾಲಯ, ಸ್ಮಾರ್ಟ್‌ಕ್ಲಾಸ್‌ ಹಾಗೂ ಡೆಸ್ಕ್ಗಳ ಕುರಿತು ಪ್ರಸ್ತಾವನೆ ತಯಾರಿಸಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು.

ನವಲೂರ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಎಸ್‌ಡಿಎಂಸಿ ಸಹಯೋಗದಲ್ಲಿ ಜರುಗಿದ ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸುವರ್ಣ ಮಹೋತ್ಸವ ಸಮಾರಂಭ ಹಾಗೂ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಶಾಲೆಗಳಿಗೆ ಈಗಾಗಲೇ ಐದು ಸಾವಿರಕ್ಕೂ ಅಧಿಕ ಡೆಸ್ಕ್ ವಿತರಿಸಲಾಗಿದೆ. ಯಾವುದೇ ಮಕ್ಕಳು ನೆಲದ ಮೇಲೆ ಕುಳಿತು ಶಿಕ್ಷಣ ಪಡೆಯಬಾರದು. ಹೀಗಾಗಿ ಪ್ರತಿ ಶಾಲೆಗೆ ಡೆಸ್ಕ್ ವಿತರಿಸಲಿದ್ದು, ಅಧಿಕಾರಿಗಳು ಬೇಡಿಕೆ ಇರುವ ಸಂಖ್ಯೆ ನೀಡಬೇಕು. ಒಂದು ಶಾಲೆಗೆ ಕನಿಷ್ಠ ಒಂದು ಸ್ಮಾರ್ಟ್‌ಕ್ಲಾಸ್‌ ನಿರ್ಮಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ದೊಡ್ಡದಿದೆ. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಜವಾಬ್ದಾರಿ ಅರಿತು ಶಿಕ್ಷಕ ಸಮೂಹ ನಡೆಯಬೇಕು. ಸಹಕಾರಿ ಸಹಭಾಗಿತ್ವದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ. ದೇಶದಲ್ಲಿ 15 ಲಕ್ಷ ಸರ್ಕಾರಿ ಶಾಲೆಗಳಿವೆ. ಇದರಲ್ಲಿ 11ಲಕ್ಷ ಶಾಲೆಗಳು ಶೇ.33 ಫಲಿತಾಂಶ ಹೊಂದಿವೆ. ಶಿಕ್ಷಕರು ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದಿದ್ದರೆ, ಅನ್ನ ಕೊಡುವ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸದಿದ್ದರೆ ಮಕ್ಕಳಿಗಾಗಿ ಸರ್ವಸ್ವ ತ್ಯಾಗ ಮಾಡಿದ ತಂದೆ-ತಾಯಿ ಹಾಗೂ ಪೋಷಕರ ಶಾಪ ತಟ್ಟಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರ ನೀಡಬೇಕು. ಮಕ್ಕಳಿಗೆ ಆದರ್ಶವಾಗಿ ವೃತ್ತಿಯ ಘನತೆ-ಗೌರವ ಕಾಪಾಡಬೇಕು ಎಂದು ತಿಳಿಸಿದರು.

‘ನವಲೂರು ಸವಿನೀರು’ ಸ್ಮರಣ ಸಂಚಿಕೆ, ಶಿವೇಶ್ವರ ದೊಡಮನಿ ಜೀವನ ಮತ್ತು ಸಾಹಿತ್ಯ ಗ್ರಂಥ, ವೆಂಕಟೇಶ ಘಂಟೆನ್ನವರ ‘ದೀಪದ ಹಕ್ಕಿ’ ಕವನ ಸಂಕಲನ, ಡಾ| ಅಶೋಕ ಮತ್ತಿಕಟ್ಟಿ ‘ಆರೋಗ್ಯಕ್ಕಾಗಿ ಆಚಾರಗಳು’ ಕೃತಿಗಳು ಬಿಡುಗಡೆಗೊಂಡವು.

ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ, ಬಿಇಒ ಎ.ಎ. ಖಾಜಿ, ಸ್ವಾಗತ ಸಮಿತಿ ಪದಾಧಿಕಾರಿಗಳಾದ ಸಿ.ಜಿ. ಹಿರೇಮಠ, ಮಂಜುನಾಥ ಕಟ್ಟಿ, ಸುನಿತಾ ಕಟ್ಟಿ, ಬಿ.ವೈ. ಬಿರಕಿ, ಮುಖ್ಯಾಧ್ಯಾಪಕ ವೈ.ಎಚ್. ಹಿತ್ತಲಮನಿ ಇದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.