ಕುಟುಂಬದ ಜತೆ ಕಾಲ ಕಳೆದ ಜೋಶಿ
Team Udayavani, Apr 25, 2019, 2:49 PM IST
ಹುಬ್ಬಳ್ಳಿ: ಧಾರವಾಡ ಕ್ಷೇತ್ರದ ಲೋಕಸಭೆ ಮತದಾನ ಮುಗಿದ ಮರುದಿನವಾದ ಬುಧವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ನಿರಾಳರಾಗಿದ್ದರು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ಅವರು ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಬುಧವಾರ ಬೆಳಗ್ಗೆ ಯೋಗ ಮಾಡಿ, ದಿನಪತ್ರಿಕೆಗಳನ್ನು ಓದಿದ ನಂತರ ಕುಟುಂಬ ಸದಸ್ಯರೊಂದಿಗೆ ಕೆಲ ಸಮಯ ಕಳೆದ ಅವರು, ಮಡದಿ-ಮಕ್ಕಳೊಂದಿಗೆ ಕುಳಿತು ಉಪಾಹಾರ ಸೇವನೆ ಮಾಡಿದರು. ಕುಟುಂಬದ ಸದಸ್ಯರಿಗೆ ತಾವೇ ಚಹಾ ಮಾಡಿ ಕೊಟ್ಟರುವುದು ವಿಶೇಷ. ನಂತರ ಮಧ್ಯಾಹ್ನ 12:00ಗಂಟೆವರೆಗೆ ಮನೆಯಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಚರ್ಚಿಸಿದರು. ವಿವಿಧ ಬೂತ್ಗಳಲ್ಲಿ ಮತದಾನ ಪ್ರಮಾಣ ಕುರಿತು ಮಾಹಿತಿ ಪಡೆದರು.
ನಂತರ ಆತ್ಮೀಯರಿಬ್ಬರ ಮದುವೆಗಳಲ್ಲಿ ಪಾಲ್ಗೊಂಡು ನವ ದಂಪತಿಗೆ ಶುಭ ಕೋರಿದರು. ಮಧ್ಯಾಹ್ನ 4:00 ಗಂಟೆಗೆ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಮತಗಳ ಲೆಕ್ಕಾಚಾರ ನಡೆಸಿದರು.
ಏ.25ರಂದು ಬೆಂಗಳೂರಿನಲ್ಲಿ ನಡೆಯುವ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಸಂಜೆ 7:00ಗಂಟೆಯ ವಿಮಾನ ಮೂಲಕ ಬೆಂಗಳೂರಿಗೆ ತೆರಳಿದರು.
ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಿಲ್ಯಾಕ್ಸ್ ಮೂಡ್ನಲ್ಲಿದ್ದೇನೆ ಎಂದು ಹೇಳಲ್ಲ. ನಾನು ಸದಾ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡ ವ್ಯಕ್ತಿ. ಬುಧವಾರ ಬೆಳಗ್ಗೆ ಸ್ವಲ್ಪ ತಡವಾಗಿ ಎದ್ದಿದ್ದೇನೆ. ಆದರೂ ಕಾರ್ಯಕರ್ತರು ನಿರಂತರವಾಗಿ ಬರುತ್ತಿದ್ದು, ಅವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದರು.
ಒತ್ತಡ ಹೇರಿ ಶ್ರುತಿ ಬಂಧನ: ವಿನಯ ಕುಲಕರ್ಣಿ ಎಂ.ಬಿ. ಪಾಟೀಲ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಒತ್ತಡ ಹೇರಿ, ಪಕ್ಷದ ಕಾರ್ಯಕರ್ತೆ ಶ್ರುತಿ ಬೆಳ್ಳಕ್ಕಿ ಅವರನ್ನು ಬಂಧಿಸಿದ್ದಾರೆ. ಲಿಂಗಾಯತ ಧರ್ಮ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಬಂಧನಕ್ಕೊಳಪಡಿಸಲಾಗಿದೆ. ಲಿಂಗಾಯತ ಧರ್ಮ ಕುರಿತು ಹಲವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಮೇಲೂ ಕ್ರಮ ಕೈಗೊಳ್ಳಲು ಮುಂದಾಗಬೇಕು. ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗ ಅಧಿಕಾರಿ ದೂರು ನೀಡಿದರೆ ಮಾತ್ರ ಕ್ರಮ ಕೈಗೊಳ್ಳಬೇಕು. ಆದರೆ ವೈಯಕ್ತಿಕವಾಗಿ ನೀಡಿದ ದೂರನ್ನಾಧರಿಸಿ ಬಂಧನ ಮಾಡಲಾಗಿದೆ ಎಂದು ಆರೋಪಿಸಿದರು.
ಮಹಿಳೆಯ ಬಂಧನದಿಂದ ದೊಡ್ಡ ಸಾಧನೆ ಮಾಡಿದ್ದೇವೆಂದು ವಿನಯ ಕುಲಕರ್ಣಿ ಹಾಗೂ ಸಚಿವ ಎಂ.ಬಿ.ಪಾಟೀಲ ತಿಳಿದಿದ್ದಾರೆ. ಪ್ರತ್ಯೇಕ ಧರ್ಮಕ್ಕಾಗಿ ನಡೆಸಿದ ಹೋರಾಟಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಮುಂದೆಯೂ ಕೂಡ ನಿಮಗೆ ಸೂಕ್ತ ಪಾಠ ಕಲಿಸುತ್ತಾರೆ. ಬಿಜೆಪಿ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸಲಿದೆ ಎಂದರು.
ಇಲ್ಲಿನ ಪೊಲೀಸ್ ವರಿಷ್ಠಾಧಿಕಾರಿ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರು ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ