ಪ್ರತಿಭೆಗಳ ಶೋಧಕ್ಕೆ ಜೂನಿಯರ್  ಎಚ್‌ಪಿಎಲ್ 


Team Udayavani, Jun 4, 2018, 4:37 PM IST

4june-20.jpg

ಹುಬ್ಬಳ್ಳಿ: ಹುಬ್ಬಳ್ಳಿ ಪ್ರೀಮಿಯರ್‌ ಲೀಗ್‌ ಜೂನಿಯರ್-2 ಟೂರ್ನಿಯ ಕ್ರಿಕೆಟಿಗರ ಹರಾಜು ಪ್ರಕ್ರಿಯೆ ನಗರದ ಪ್ರಸಿಡೆಂಟ್‌ ಹೊಟೇಲ್‌ನಲ್ಲಿ ರವಿವಾರ ನಡೆಯಿತು.

ಕೆಎಸ್‌ಸಿಎ ಧಾರವಾಡ ವಲಯದ ಸಂಚಾಲಕ ಬಾಬಾ ಭೂಸದ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಎಚ್‌ಪಿಎಲ್‌ ಜೂನಿಯರ್ ಕ್ರಿಕೆಟ್‌ ಟೂರ್ನಿ ಆಯೋಜಿಸಲಾಗುತ್ತಿದೆ. ಕ್ರಿಕೆಟ್‌ ಬದಲಾಗುತ್ತಿದೆ. ಕಾಲಕ್ಕೆ ತಕ್ಕಂತೆ ನಾವು ಕೂಡ ಹೊಸ ಮಾದರಿಗೆ ಹೊಂದಿಕೊಳ್ಳಬೇಕಿದೆ. 14 ಹಾಗೂ 16 ವಯೋಮಿತಿಯ ಪ್ರತಿಭೆಗಳನ್ನು ಗುರುತಿಸಿದರೆ ಮುಂದೆ ಅವರಿಗೆ ತರಬೇತಿ ನೀಡಿ ಪ್ರೋತ್ಸಾಹಿಸಲು ಅನುಕೂಲವಾಗುತ್ತದೆ. ಈ ಉದ್ದೇಶದಿಂದ ಕ್ರಿಕೆಟ್‌ ಸಂಘಟಿಸಲಾಗುತ್ತಿದೆ ಎಂದರು.

ಉತ್ತರ ಕರ್ನಾಟಕ ಭಾಗದ ಹುಡುಗರಿಗೆ ಅವಕಾಶಗಳು ಲಭ್ಯವಾಗಬೇಕು. ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಿ 3 ಅಸೋಸಿಯೇಶನ್‌ ಗಳಿವೆ. ಆಂಧ್ರಪ್ರದೇಶದಲ್ಲಿ 2 ಅಸೋಸಿಯೇಶನ್‌ ಗಳಿವೆ. ನಮ್ಮ ರಾಜ್ಯದಲ್ಲಿ ಕೇವಲ ಒಂದೇ ಅಸೋಸಿಯೇಶನ್‌ ಇದ್ದು, ಸ್ಪರ್ಧೆ ಹೆಚ್ಚಾಗಿದೆ. ಆದ್ದರಿಂದ ಹುಡುಗರನ್ನು ಸ್ಪರ್ಧೆಗೆ ಸನ್ನದ್ಧಗೊಳಿಸುವುದು ಮುಖ್ಯ ಎಂದರು.

ಪಾಲಕರು ಹುಡುಗರು ಮುಕ್ತವಾಗಿ ಬೆಳೆಯಲು ಅವಕಾಶ ನೀಡಬೇಕು. ಕ್ರಿಕೆಟ್‌ಗೆ ದೈಹಿಕ ಕ್ಷಮತೆಗಿಂತ ಮಾನಸಿಕ ಸದೃಢತೆ ಬಹಳ ಮುಖ್ಯ. ಅದನ್ನು ಮಕ್ಕಳೇ ಬೆಳೆಸಿಕೊಳ್ಳಬೇಕು. ಅದನ್ನು ಎಲ್ಲಿಯೂ ಕಲಿಸುವುದಿಲ್ಲ. ತಪ್ಪು ತಿದ್ದುಕೊಳ್ಳುತ್ತ ಸಾಗಿದರೆ ಮುಂದೆ ಒಳ್ಳೆ ಕಿಕೆಟಿಗರಾಗಿ ರೂಪಗೊಳ್ಳಲು ಸಾಧ್ಯ ಎಂದರು.

ನಿಖೀಲ್‌ ಭೂಸದ ಪ್ರಾಸ್ತಾವಿಕ ಮಾತನಾಡಿ, ಕಳೆದ ಬಾರಿ 20 ಓವರ್‌ ಗಳ ಪಂದ್ಯವನ್ನಾಡಿಸಲಾಗಿತ್ತು. ಆದರೆ ಈ ಆವೃತ್ತಿಯಲ್ಲಿ 30 ಓವರ್‌ಗಳ ಪಂದ್ಯವನ್ನಾಡಿಸಲಾಗುವುದು. ಈ ಬಾರಿ 16 ವಯೋಮಿತಿ ತಂಡಗಳ ಮಧ್ಯೆ ಸೆಣಸು ನಡೆಯುವುದು. ಹುಬ್ಬಳ್ಳಿಯ ಎನ್‌ ಕೆ ವಾರಿಯರ್,  ಪಿನ್‌ ವಾರಿಯರ್, ಬೆಳಗಾವಿಯ ಸ್ಮಾರ್ಟ್‌ ವಿಜನ್‌, ಬಿಜಾಪುರ ಬುಲ್ಸ್‌ ಸಿಸಿಐ, ಗದಗ್‌ನ ವಾಲ್ಮೀಕಿ ಸ್ಟ್ರೈಕರ್ ಒಟ್ಟು 5 ತಂಡಗಳ ಮಧ್ಯೆ ಸ್ಪರ್ಧೆ ನಡೆಯಲಿದೆ. ಜೂನ್‌ 12ಕ್ಕೆ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ ಎಂದರು.

ರೌಂಡ್‌ ರಾಬಿನ್‌ ಪದ್ಧತಿಯಂತೆ ಪಂದ್ಯಗಳನ್ನಾಡಿಸಲಾಗುವುದು. ಪ್ರತಿ ದಿನ 2 ಪಂದ್ಯಗಳನ್ನು ಸಂಘಟಿಸಲಾಗುವುದು. ಕೆಂಪು ಚೆಂಡು ಬಳಸಲಾಗುತ್ತಿದ್ದು, 16 ಆಟಗಾರರ ತಂಡದಲ್ಲಿ ಕನಿಷ್ಟ ಐದು ಜನರನ್ನು 14 ವಯೋಮಿತಿ ಕ್ರಿಕೆಟಿಗರನ್ನು ಹಾಗೂ ಆಡುವ 11ರ ತಂಡದಲ್ಲಿ ಕನಿಷ್ಟ 4 ಜನರನ್ನು 14 ವಯೋಮಿತಿ ತಂಡದ ಆಟಗಾರರನ್ನು ಕಡ್ಡಾಯವಾಗಿ ಸೇರಿಸಬೇಕು. ತಂಡವು 14 ಹಾಗೂ 16 ವಯೋಮಿತಿಯ ಮಿಶ್ರಣವಾಗಿರುವುದು ಎಂದರು.

ಮುಖ್ಯ ಅತಿಥಿಯಾಗಿ ಎಸಿಪಿ ಕೆ.ಎಚ್‌. ಪಠಾಣ ಆಗಮಿಸಿದ್ದರು. ಹಿರಿಯ ಕೋಚ್‌ ಅರ್ಮುಗಂ ಮಾತನಾಡಿದರು. ಫ್ರಾಂಚೈಸಿ ಮಾಲೀಕರಾದ ಎಸ್‌. ರವಿಚಂದ್ರ ರೆಡ್ಡಿ, ಡಾ| ಪ್ರಭುಲಿಂಗ ಮಾನಕರ, ವೆಂಕಟೇಶ ವಾಲ್ಮೀಕಿ, ಮಹೇಶ ಚವರಿ, ವಿಕ್ರಮ್‌ ದೇಸಾಯಿ, ಅಜಯ್‌ ಇದ್ದರು. ಶಿವಾನಂದ ಗುಂಜಾಳ ವಂದಿಸಿದರು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.