ಹಳ್ಳಿಗಳಲ್ಲಿ ಮತ್ತೆ ಹೆಡೆ ಬಿಚ್ಚಿದ ಕಳ್ಳಭಟ್ಟಿ ದಂಧೆ


Team Udayavani, Apr 21, 2020, 11:16 AM IST

huballi-tdy-1

ಹುಬ್ಬಳ್ಳಿ: ಕಲಘಟಗಿ ತಾಲೂಕಿನಾದ್ಯಂತ ಕಳ್ಳಭಟ್ಟಿ ಸಾರಾಯಿ ದಂಧೆ ಸಕ್ರಿಯವಾಗಿದೆಯೇ ಎಂಬ ಅನುಮಾನ ಮೂಡಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಇದು ಮದ್ಯವಸ್ಯನಿಗಳ ಮೇಲೆ ತುಂಬಾ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಹಿಂದೆ ಹುಬ್ಬಳ್ಳಿಯ ಕೆಲ ಕೊಳಚೆ ಪ್ರದೇಶಗಳಲ್ಲಿ ಪ್ರಮುಖವಾಗಿ ಸೆಟ್ಲಮೆಂಟ್‌ನಲ್ಲಿ ಕಳ್ಳಭಟ್ಟಿ ದಂಧೆ ಜೋರಾಗಿತ್ತು.ಗೋವಾ, ಮಹಾರಾಷ್ಟ್ರದಿಂದ ಅಕ್ರಮವಾಗಿ ಸ್ಪಿರಿಟ್‌ ತಂದು ಮದ್ಯ ತಯಾರಿಸುತ್ತಿದ್ದರು. ಇವರಲ್ಲಿ ಕೆಲವರು ಕಳ್ಳಭಟ್ಟಿ ಸಾರಾಯಿ ತಯಾರಿಸುತ್ತಿದ್ದರು. ಆದರೆ ಪೊಲೀಸರು ಹಾಗೂ ಅಬಕಾರಿ ಇಲಾಖೆಯವರ ನಿರಂತರ ದಾಳಿಯಿಂದ ತಮ್ಮ ದಂಧೆಗೆ ಹೊಡೆತ ಬೀಳತೊಡಗಿತು. ಇದನ್ನರಿತ ಇಲ್ಲಿ ಕಳ್ಳಭಟ್ಟಿ ಸಾರಾಯಿ ದಂಧೆ ನಡೆಸುತ್ತಿದ್ದ ಬಹುತೇಕರು ತಮ್ಮ ದಂಧೆಯನ್ನು ಕಲಘಟಗಿ ತಾಲೂಕಿನ ಗ್ರಾಮೀಣ ಭಾಗದ ನಿರ್ಜನ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆಂದು ಹೇಳಲಾಗುತ್ತಿದೆ.

ಕೆಲವರು ಹೇಳುವ ಪ್ರಕಾರ ಧಾರವಾಡ ಜಿಲ್ಲೆ ಸೇರಿದಂತೆ ಕಲಘಟಗಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ಜೋರಾಗಿದೆ. ತಾಂಡಾ ಹಾಗೂ ಗ್ರಾಮದ ಹೊರವಲಯದ ಪ್ರದೇಶಗಳಲ್ಲಿ ಕಳ್ಳಭಟ್ಟಿ ತಯಾರಿಸುವವರ ಜಾಲವೇ ಇದೆ. ಕಲಘಟಗಿ ತಾಲೂಕಿನಲ್ಲಿ 9-10 ತಾಂಡಾಗಳಿದ್ದು, ಗಂಭ್ಯಾಪೂರ ಮಾತ್ರವಲ್ಲದೆ ಉಗ್ಗಿನಕೇರಿ, ಹಿರೇಹೊನ್ನಳ್ಳಿ, ಕುರುವಿನಕೊಪ್ಪ, ಮುತ್ತಗಿ, ಗಳಗಿ ಹುಲಕೊಪ್ಪ ಸೇರಿದಂತೆ ಇತರೆ ಗ್ರಾಮಗಳಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ಜೋರಾಗಿದೆ ಎಂದು ತಿಳಿದು ಬಂದಿದೆ.

ಮದ್ಯ ಸಿಗದೇ ಸ್ಯಾನಿಟೈಜರ್‌ಗೆ ಮೊರೆ ಹೋದ್ರೆ: ದೇಶಾದ್ಯಂತ ಕೊರೊನಾ ವೈರಸ್‌ ಹರಡುತ್ತಿದ್ದಂತೆ ಮಾ. 22ರಂದು ಜನತಾ ಕರ್ಫ್ಯೂ ಹಾಗೂ 24ರಿಂದ ಲಾಕ್‌ ಡೌನ್‌ ಆರಂಭವಾದಾಗಿನಿಂದ ಮದ್ಯದಂಗಡಿ, ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗಳು ಬಂದ್‌ ಆಗಿವೆ. ಅಂದಿನಿಂದ ಇಂದಿನವರೆಗೂ ಮದ್ಯದಂಗಡಿಗಳು ತೆರೆದಿಲ್ಲ. ಆವಾಗಿನಿಂದ ಮದ್ಯವ್ಯಸನಿಗಳು ಮದ್ಯಕ್ಕಾಗಿ ಇನ್ನಿಲ್ಲದ ರೀತಿ ಚಡಪಡಿಸುತ್ತಿದ್ದಾರೆ. ಮದ್ಯಕ್ಕೆ ಪರ್ಯಾಯವಾಗಿ ಕೆಲವರು ಕಡಿಮೆ ದರಕ್ಕೆ ದೊರೆಯುವ ಸ್ಯಾನಿಟೈಸರ್‌ ಸೇವಿಸುತ್ತಿದ್ದಾರೆಂದು ತಿಳಿದು ಬಂದಿದ್ದು, ಇದರಲ್ಲಿ ಅಲ್ಕೋಹಾಲ್‌ ಪ್ರಮಾಣ ತೀರ ಕಡಿಮೆಯಿದ್ದು, ಎಥೇನಾಲ್‌ ಪ್ರಮಾಣ ಅಧಿಕವಾಗಿರುತ್ತದೆ. ಹೀಗಾಗಿ ಇದನ್ನು ಸೇವಿಸುವುದು ಹಾಗೂ ಕಳ್ಳಭಟ್ಟಿ ಸಾರಾಯಿ ಕುಡಿಯುವುದು ಸಹ ಆರೋಗ್ಯಕ್ಕೆ ತೀವ್ರ ಹಾನಿಕಾರಕ ಎಂದು ಹೇಳುತ್ತಾರೆ ವೈದ್ಯರು. ಗಂಭ್ಯಾಪೂರದಲ್ಲಿ ಬಸವರಾಜ ಕುರುವಿನಕೊಪ್ಪ ಸ್ಯಾನಿಟೈಸರ್‌ ಕುಡಿದೆ ಮೃತಪಟ್ಟಿದ್ದಾರೆ. ಇವರ ಮನೆಯಲ್ಲಿ ಮೂರು ಸ್ಯಾನಿಟೈಸರ್‌ ಖಾಲಿ ಬಾಟಲಿಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ.

ಅಷ್ಟೊಂದು ಸ್ಯಾನಿಟೈಜರ್‌ ಎಲ್ಲಿಂದ ಬಂತು: ಲಾಕ್‌ಡೌನ್‌ದಿಂದ ಮದ್ಯ ಮಾರಾಟ ಸ್ಥಗಿತಗೊಂಡಾಗಿನಿಂದ ಬಹುತೇಕ ಮದ್ಯವ್ಯಸನಿಗಳು ಮದ್ಯಕ್ಕಾಗಿ ಚಡಪಡಿಸುತ್ತಿದ್ದಾರೆ. ಅದೇ ರೀತಿ ಗಂಭ್ಯಾಪೂರ ಗ್ರಾಮದಲ್ಲಿನ ಸುಮಾರು 15ಕ್ಕೂ ಅಧಿಕ ಮದ್ಯವ್ಯಸನಿಗಳು ಸಹಿತ ಮದ್ಯ ಸಿಗದಿದ್ದಕ್ಕೆ ಸ್ಯಾನಿಟೈಸರ್‌ ಬಳಸುತ್ತಿದ್ದರೆಂದು ಹೇಳಲಾಗುತ್ತಿದೆ. ಆದರೆ ಇಷ್ಟೊಂದು ಪ್ರಮಾಣದಲ್ಲಿ ಅವರಿಗೆ ಸ್ಯಾನಿಟೈಸರ್‌ ಎಲ್ಲಿಂದ ದೊರೆಯಿತು ಎಂಬ ಅನುಮಾನಗಳು ಮೂಡುತ್ತಿವೆ. ಈಗಾಗಲೇ ಸ್ಯಾನಿಟೈಸರ್‌ ಕುಡಿದ ಕೆಲವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಪೊಲೀಸ್‌ ಹಾಗೂ ಅಬಕಾರಿ ಇಲಾಖೆಯವರು ಇಂತಹ ಕಳ್ಳಭಟ್ಟಿ ಸಾರಾಯಿ ಮತ್ತು ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆಕೋರರ ಮೇಲೆ ನಿಗಾ ವಹಿಸಬೇಕು. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಕಳ್ಳಭಟ್ಟಿ ಸಾರಾಯಿ ಕುಡಿದು ಅವಘಡಗಳು ಸಂಭವಿಸುತ್ತಲೇ ಇರುತ್ತವೆ ಎನ್ನುತ್ತಿದ್ದಾರೆ ಗ್ರಾಮಸ್ಥರು.

ಕಲಘಟಗಿ ತಾಲೂಕು ಗಂಭ್ಯಾಪೂರ ಗ್ರಾಮದಲ್ಲಿ ಸ್ಯಾನಿಟೈಸರ್‌ ಸೇವಿಸಿ ವ್ಯಕ್ತಿ ಹಾಗೂ ಮಹಿಳೆ ಮೃತಪಟ್ಟಿದ್ದಾರೆಂದು ಅವರ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಕುರಿತು ಸರಕಾರಿ ವೈದ್ಯರೆ ಖಚಿತಪಡಿಸಿದ್ದಾರೆ. ಅಲ್ಲದೆ ಮೃತಪಟ್ಟವರ ಮನೆಯಿಂದಲೂ ಸ್ಯಾನಿಟೈಸರ್‌ ಖಾಲಿ ಬಾಟಲಿಗಳು ದೊರೆತಿವೆ. ಗ್ರಾಮದಲ್ಲಿ ಹೆಚ್ಚಿನ ಜನರು ಸ್ಯಾನಿಟೈಸರ್‌ ಕುಡಿದಿದ್ದಾರೆ ಎಂಬುದು ಗಮನಕ್ಕೆ ಬಂದಿಲ್ಲ. ಯಾವುದೇ ಕಾರಣಕ್ಕೂ ಸ್ಯಾನಿಟೈಸರ್‌ ಕುಡಿಯಬೇಡಿ. ಅದು ಅಲ್ಕೋಹಾಲ್‌ ಅಲ್ಲ. ಅದು ಹಾನಿಕಾರಕವಾಗಿದೆ ಎಂದು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಕಲಘಟಗಿ ತಾಲೂಕಿನಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ತಡೆಗಟ್ಟಲಾಗಿದೆ. ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು.ವರ್ತಿಕಾ ಕಟಿಯಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ.

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.