ಕನ್ನಡ ಅನ್ನದ ಭಾಷೆಯಾಗಲಿ: ಡಾ| ಪಟ್ಟಣಶೆಟ್ಟಿ

ಧಾರಾನಗರಿಯಲ್ಲಿ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Team Udayavani, Mar 27, 2022, 11:14 AM IST

4

ಧಾರವಾಡ: ಕನ್ನಡವು ಚಿನ್ನದ ಭಾಷೆ ಆಗದಿದ್ದರೂ ಪರವಾಗಿಲ್ಲ, ಆದರೆ ಅನ್ನದ ಭಾಷೆಯಾಗಲಿ ಎಂದು ಹಿರಿಯ ಸಾಹಿತಿ ಡಾ|ಸಿದ್ಧಲಿಂಗ ಪಟ್ಟಣಶೆಟ್ಟಿ ಹೇಳಿದರು.

ಜಿಲ್ಲಾ ಕಸಾಪ ಸಾಹಿತ್ಯ ಭವನದ ಆವರಣದಲ್ಲಿ ಕಸಾಪ ಹಮ್ಮಿಕೊಂಡ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಅವರು, ಕನ್ನಡದ ಹತ್ತಿರ ಕನ್ನಡಿಗರು ಹೋದಾಗ ಮಾತ್ರ ಕನ್ನಡ ಭಾಷೆ ಉಳಿದು, ಬೆಳೆದು ಬರಲು ಸಾಧ್ಯ. ಈ ನಿಟ್ಟಿನಲ್ಲಿ ಕನ್ನಡ ಕಟ್ಟುವ ಕಾರ್ಯ ಆಗಬೇಕು. ವೃತ್ತಿ ಸಾಹಿತ್ಯದ ಬಗ್ಗೆ ಗಂಭೀರ ಚಿಂತನೆ ಅಗತ್ಯವಿದೆ. ಒಟ್ಟಿನಲ್ಲಿ ಕನ್ನಡವು ಕುರ್ಚಿ ಮೇಲೆ ಕುಳಿತವರ ಭಾಷೆಯಾಗದೇ ರೈತನ ಭಾಷೆ ಆಗಲಿ. ಜನಸಾಮಾನ್ಯರ ಅಚ್ಚುಮೆಚ್ಚಿನ ಭಾಷೆಯಾಗಲಿ ಎಂದರು.

ಜಿಲ್ಲೆ, ತಾಲೂಕಿಗೊಂದು ವಿಶಿಷ್ಟತೆಯ ಹೊಂದಿರುವ ಕನ್ನಡ ಭಾಷೆಯು ಆಯಾ ಪ್ರದೇಶದಲ್ಲಿ ವಿಶಿಷ್ಟ ಪದಕೋಶಗಳನ್ನೇ ಹೊಂದಿದೆ. ಹೀಗಾಗಿ ಈ ಪದಕೋಶಗಳ ಸಂಗ್ರಹ ಈವರೆಗೂ ಆಗದ ಕಾರಣ ಈಗಲೂ ಜಿಲ್ಲಾಮಟ್ಟ ಹಾಗೂ ತಾಲೂಕುಮಟ್ಟದ ನಿಘಂಟುವಿನ ಕೊರತೆ ಇದೆ. ಈ ಕೊರತೆ ನೀಗಿಸಲು ಪದಕೋಶ ಸಂಗ್ರಹ ಕಾರ್ಯ ಆಗಬೇಕಿದೆ ಎಂದು ಹೇಳಿದರು.

ಸಮ್ಮೇಳನ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಮಾತನಾಡಿ, ಚಿಂತನೆ, ಯೋಚನೆ ನಡೆಯದೇ ಯಾವುದೇ ಸಾಹಿತ್ಯ ರಚನೆ ಸಾಧ್ಯವಿಲ್ಲ. ಸಾಹಿತ್ಯಕ್ಕೆ ಸಂಘಟನೆ, ಗುಂಪು ಅಗತ್ಯವಿದೆ. ಅದರಲ್ಲೂ ತಾತ್ವಿಕ ಹಿನ್ನೆಲೆ ಇಲ್ಲದ ಯಾವುದೇ ಸಾಹಿತ್ಯ ಬೆಳೆಯುವುದು ಅಸಾಧ್ಯ. ಭಾರತೀಯ ಯಾವ ಸಾಹಿತ್ಯಕ್ಕಿಂತಲೂ ಕನ್ನಡ ಸಾಹಿತ್ಯ ಕಡಿಮೆ ಇಲ್ಲ. ಇದಕ್ಕೆ ಜ್ಞಾನಪೀಠ ಪ್ರಶಸ್ತಿಗಳು ಅರಸಿ ಬಂದಿರುವುದೇ ಸಾಕ್ಷಿ ಎಂದರು.

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ಕರ್ನಾಟಕ ಏಕೀಕರಣ ಹಾಗೂ ಗೋಕಾಕ ಚಳವಳಿಗೆ ಸ್ಪೂರ್ತಿ ನೀಡಿದ ಸ್ಥಳ ಧಾರವಾಡ. ಇದಲ್ಲದೇ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದೆ. ಕನ್ನಡದ ಬಗ್ಗೆ ಅಭಿಮಾನ ಬರೀ ಮಾತಾಗದೇ ಕೃತಿ ರೂಪದಲ್ಲಿ ತರಬೇಕಿದೆ ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ನಿಕಟಪೂರ್ವ ಸಮ್ಮೇಳಾನಾಧ್ಯಕ್ಷ ಡಾ|ಬಸವರಾಜ ಸಾದರ ಅವರು 14ನೇ ಸಮ್ಮೇಳನಾಧ್ಯಕ್ಷ ಡಾ| ರಮಾಕಾಂತ ಜೋಶಿ ಅವಿಗೆ ಕನ್ನಡ ಧ್ವಜ ಹಸ್ತಾಂತರಿಸಿದರು.

ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ, ಕಸಾಪ ಹಾವೇರಿ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ, ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ವಿಪ ಮಾಜಿ ಸಭಾಪತಿ ಡಾ| ವೀರಣ್ಣ ಮತ್ತಿಕಟ್ಟಿ, ಡಾ|ಶರಣಪ್ಪ ಕೊಟಗಿ ಇನ್ನಿತರರಿದ್ದರು.

 ರಂಗಮಂದಿರ ಅನುದಾನಕ್ಕೆ ಭರವಸೆ:  ವಿದ್ಯಾಕಾಶಿ, ಸಾಂಸ್ಕೃತಿಕ ನೆಲೆಬೀಡಾದ ಧಾರವಾಡ ಜಿಲ್ಲೆಯಲ್ಲಿ ರಂಗಮಂದಿರ ಕೊರತೆಯಿದ್ದು, ರಂಗಮಂದಿರ ನಿರ್ಮಾಣಕ್ಕಾಗಿ ಕಸಾಪ ಈಗಾಗಲೇ 25 ಲಕ್ಷ ರೂ. ಅನುದಾನವಿದೆ. ಇನ್ನೂ ಅನುದಾನ ಬೇಕಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ|ಲಿಂಗರಾಜ ಅಂಗಡಿ ಹೇಳಿದರು.  ಇದಕ್ಕೆ ಸ್ಪಂದಿಸಿದ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೊಂದಿಗೆ ಚರ್ಚಿಸಿ 75 ಲಕ್ಷ ರೂ. ಅನುದಾನ ಕೊಡಿಸುವ ಭರವಸೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಸಚಿವ ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ, ರಂಗ ಮಂದಿರ ನಿರ್ಮಾಣಕ್ಕೆ ಸಹಕಾರದ ಜತೆಗೆ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.