ಫೇಸ್‌ಬುಕ್‌, ಯುಟ್ಯೂಬ್‌ನಲ್ಲೂ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಸಾರ 


Team Udayavani, Dec 14, 2018, 5:06 PM IST

14-december-19.gif

ಧಾರವಾಡ: ಸಾಹಿತ್ಯ ಸಮ್ಮೇಳನ ಇತಿಹಾಸದಲ್ಲೇ ಇದೇ ಮೊದಲ ಬಾರಿ ಸಮ್ಮೇಳನ ಫೇಸ್‌ ಬುಕ್‌ನಲ್ಲಿ ನೇರ ಪ್ರಸಾರಗೊಳ್ಳಲಿದೆ..!ಹೌದು. ಧಾರಾನಗರಿಯಲ್ಲಿ ನಡೆಯುವ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೋಷ್ಠಿಗಳನ್ನು ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ (ಲೈವ್‌ ಕವರೇಜ್‌) ಮಾಡಲು ಸಿದ್ಧತೆ ನಡೆದಿದ್ದು, ಇದರೊಂದಿಗೆ ಯುಟ್ಯೂಬ್‌ನಲ್ಲಿ ಸಮ್ಮೇಳನ ವೀಕ್ಷಿಸಲು ಅಗತ್ಯ ಸಿದ್ಧತೆ ಸಾಗಿದೆ. ಈ ದಿಸೆಯಲ್ಲಿ ತಾಂತ್ರಿಕ ತಂಡ ಕಾರ್ಯ ಪ್ರವೃತ್ತವಾಗಿದೆ. ಎಲ್ಲ ಸಾಹಿತ್ಯಾಸಕ್ತರಿಗೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಅವರಿಗೆ ಸಾಹಿತ್ಯ ಸಮ್ಮೇಳನ ಬಗ್ಗೆ ತೀವ್ರ ಆಸಕ್ತಿ ಇರುತ್ತದೆ. ಇಲ್ಲಿನ ಕಾರ್ಯಕ್ರಮ, ಗೋಷ್ಠಿಗಳನ್ನು ವೀಕ್ಷಿಸಬೇಕು, ಆಲಿಸಬೇಕೆಂಬ ಮಹದಾಸೆ ಇರುತ್ತದೆ. ಸಾಹಿತ್ಯ ಪ್ರೇಮಿಗಳ ಅಭಿಲಾಷೆಯನ್ನು ಮನಗಂಡು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಫೇಸ್‌ಬುಕ್‌ ನಲ್ಲಿ ನೇರ ಪ್ರಸಾರ ಮಾಡಿದರೆ ವಿಶ್ವಾದ್ಯಂತ ಕನ್ನಡಿಗರು ಇಲ್ಲಿನ ಕಾರ್ಯಕ್ರಮಗಳನ್ನು ಆನಂದಿಸಬಹುದಾಗಿದೆ. ಅಲ್ಲದೇ ವೆಬ್‌ ಸೈಟ್‌ನಲ್ಲೂ ನೇರ ಪ್ರಸಾರ ಮಾಡುವ ಚಿಂತನೆ ನಡೆದಿದೆ. ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ|ಲಿಂಗರಾಜ ಅಂಗಡಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವಲ್ಲಿ ಆಸಕ್ತಿ ವಹಿಸಿದ್ದಾರೆ.

ರೇಡಿಯೋ ಕೇಂದ್ರಗಳ ಬಳಕೆ: ಧಾರವಾಡ ಜಿಲ್ಲೆಯಲ್ಲಿ ಕೆಎಲ್‌ಇ ಧ್ವನಿ, ರೆಡ್‌ ಎಫ್‌ ಎಂ ರೇಡಿಯೋ ಮಿರ್ಚಿ ಎಫ್‌ ಎಂ ಕೇಂದ್ರ ಆರಂಭಗೊಂಡ ನಂತರ ಶ್ರೋತೃಗಳ ಸಂಖ್ಯೆ ಹೆಚ್ಚಿದೆ. ರೇಡಿಯೋ ಮಾಧ್ಯಮವನ್ನು ಬಳಸಿಕೊಳ್ಳುವ ದಿಸೆಯಲ್ಲಿ ರೇಡಿಯೋ ಕೇಂದ್ರಗಳೊಂದಿಗೆ ಚರ್ಚಿಸಲಾಗಿದೆ. ಆಕಾಶವಾಣಿಯೊಂದಿಗೆ ಖಾಸಗಿ ರೇಡಿಯೋ ಕೇಂದ್ರಗಳು ಸಮ್ಮೇಳನದ ಗೋಷ್ಠಿಗಳನ್ನು ಪ್ರಸಾರ ಮಾಡಲು ಆಸಕ್ತಿ ತೋರಿವೆ. ಎಲ್ಲ ಕಾರ್ಯಕ್ರಮಗಳು ಬಿತ್ತರಗೊಳಿಸಲು ಕೋರಲಾಗಿದೆ.

ಪ್ರಚಾರಕ್ಕೆ ಕಲಾ ತಂಡ: ಧಾರವಾಡ ಜಿಲ್ಲೆಯ 8 ತಾಲೂಕುಗಳಲ್ಲಿ ಸಂಚರಿಸಲು ಒಂದು ಕಲಾ ತಂಡ ರಚಿಸಲಾಗಿದೆ. ಗೂಡ್ಸ್‌ ವಾಹನವನ್ನು ಸಾಹಿತಿಗಳ, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಭಾವಚಿತ್ರದಿಂದ ಅಲಂಕರಿಸಿ ಹಳ್ಳಿಗಳಲ್ಲಿ ಸಂಚರಿಸಲಾಗುತ್ತದೆ. ಇದರಲ್ಲಿ ಕಲಾತಂಡದ ಕಲಾವಿದರು ಜನವರಿ 4, 5 ಹಾಗೂ 6ರಂದು ನಡೆಯುವ ಸಾಹಿತ್ಯ ಸಮ್ಮೇಳನ ಕುರಿತು ತಿಳಿಸಿಕೊಡಲಿದ್ದಾರೆ. ಸಮ್ಮೇಳನ ವಿಶೇಷತೆ, ಪಾಲ್ಗೊಳ್ಳುವ ಮಹನೀಯರು, ಗಣ್ಯರು, ಹಿರಿಯ ಸಾಹಿತಿಗಳ ಬಗ್ಗೆ ವಿವರಿಸಲಿದ್ದಾರೆ. ಅಲ್ಲದೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಅವರ ಸಾಹಿತ್ಯ ಸಾಧನೆ ಕುರಿತು ತಿಳಿಸಿಕೊಡಲಿದ್ದಾರೆ. ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲಿದ್ದಾರೆ.

ಜಾಲತಾಣ ಬಳಕೆ
ಇಂದು ಸ್ಮಾರ್ಟ್‌ಫೋನ್‌ ಬಳಕೆ ಹೆಚ್ಚಾಗಿದೆ. ಮೊಬೈಲ್‌ನಲ್ಲಿ ವ್ಯಾಟ್ಸ್‌ಆ್ಯಪ್‌, ಫೇಸ್‌ಬುಕ್‌, ಟ್ವಿಟರ್‌ ಮೊದಲಾದ ಸಾಮಾಜಿಕ ಜಾಲತಾಣಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಅವುಗಳ ಬಳಸುವ ಕನ್ನಡಿಗರು ಸಾಹಿತ್ಯ ಸಮ್ಮೇಳನವನ್ನು ವೀಕ್ಷಿಸಲು ಅನುಕೂಲವಾಗಲಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿನ ಪ್ರಸಾರ ಮಾಡುವ ಕುರಿತು ವ್ಯಾಪಕ ಪ್ರಚಾರ ಮಾಡಲು ಪ್ರಚಾರ ಸಮಿತಿ ತೀರ್ಮಾನಿಸಿದೆ.

ಯುವಜನರಿಗೆ ಸಾಹಿತ್ಯ ಬಗ್ಗೆ ಅಭಿರುಚಿ ಮೂಡಿಸುವುದು ಅವಶ್ಯಕವಾಗಿದೆ. ಈ ದಿಸೆಯಲ್ಲಿ ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ವ್ಯಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿಕೊಂಡು ಸಾಹಿತ್ಯ ಸಮ್ಮೇಳನ ಕುರಿತು ಪ್ರಚಾರ ಮಾಡಲಾಗುವುದು. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದವರು ಸಾಮಾಜಿಕ ಜಾಲತಾಣಗಳಲ್ಲಾದರೂ ಕಾರ್ಯಕ್ರಮ ವೀಕ್ಷಿಸಬೇಕೆಂಬುದು ನಮ್ಮ ಉದ್ದೇಶವಾಗಿದೆ. ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳುವ ಚರ್ಚೆಗಳು ಹೆಚ್ಚು ಜನರಿಗೆ ತಲುಪಬೇಕು.
 ಡಾ|ಲಿಂಗರಾಜ ಅಂಗಡಿ,
 84ನೇ ಸಾಹಿತ್ಯ ಸಮ್ಮೇಳನ ಪ್ರಚಾರ ಸಮಿತಿ ಅಧ್ಯಕ್ಷ 

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.