ಕಾಂಗ್ರೆಸ್‌ಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ


Team Udayavani, Apr 13, 2018, 11:12 AM IST

congress.jpg

ಧಾರವಾಡ: ಕಾಂಗ್ರೆಸ್‌ ಪಕ್ಷದ ಪಾಲಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ ಆಗಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಸೋಲಿಸಿ ಈ ಎಟಿಎಂ ಅನ್ನು  ಬಂದ್‌ ಮಾಡಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಹೇಳಿದರು. ಕೇಂದ್ರ ಸರ್ಕಾರಕ್ಕೆ ಅಸಹಕಾರ ನೀಡುತ್ತಿರುವ ಕಾಂಗ್ರೆಸ್‌ ವಿರುದ್ಧ ನಗರದಲ್ಲಿ  ಗುರುವಾರ ಹಮ್ಮಿಕೊಂಡಿದ್ದ ಸಾಂಕೇತಿಕ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 

ಎಐಸಿಸಿ ಅಧ್ಯಕ್ಷ ರಾಹುಲ್‌ ಬಾಬಾ ಕರ್ನಾಟಕಕ್ಕೆ ಪದೇ  ಪದೇ ಆಗಮಿಸುತ್ತಿರುವುದು ತಮ್ಮ ಕೈಯಲ್ಲಿರುವ ರಾಜ್ಯವನ್ನು ಉಳಿಸಿಕೊಳ್ಳಲು ಅಲ್ಲ. ಬದಲಾಗಿ ಪಕ್ಷಕ್ಕೆ ಇಲ್ಲಿಂದ ದೊರೆಯುವ ಭ್ರಷ್ಟಾಚಾರದ ಹಣಕ್ಕಾಗಿ. ಹೀಗಾಗಿ ಈ ಸಲ ಈ  ಎಟಿಎಂ ಬಂದ್‌ ಮಾಡಲು ಕರ್ನಾಟಕ ಜನತೆ ಮನಸ್ಸು ಮಾಡಿದ್ದಾರೆ. ರಾಜ್ಯದಲ್ಲಿ ಮತ್ತೆ ಕಮಲ ಅರಳಲಿದೆ ಎಂದು ತಿಳಿಸಿದರು. 

ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳು  ನಡೆಯದಂತೆ ಮಾಡಿದ ಕಾಂಗ್ರೆಸ್‌ಗೆ ಜನರ ಅಶೋತ್ತರಗಳ ಬಗ್ಗೆ ಕಾಳಜಿಯೇ ಇಲ್ಲ. 22 ದಿನಗಳ ಕಾಲ ಎರಡೂ ಸದನಗಳ ಕಲಾಪ  ವ್ಯರ್ಥವಾಗಿ ಸುಮಾರು 225 ಕೋಟಿಗೂ ಅಧಿಕ ಹಣ ವಿನಾಕಾರಣ ವೆಚ್ಚವಾಗುವಂತೆ ಮಾಡಿದ ಕಾಂಗ್ರೆಸ್‌ ಪಕ್ಷಕ್ಕೆ ಧಿಕ್ಕಾರ. ಜನರ ಆಶೋತ್ತರಗಳ  ಚರ್ಚೆಗಳಿಗೆ ಕಲ್ಲು ಹಾಕಿದ ಕಾಂಗ್ರೆಸ್‌ ಪ್ರಜಾ ಪ್ರಭುತ್ವದ ವಿರೋಧಿಯಾಗಿದ್ದು, ಈ ನಡೆಯನ್ನು ಜನತೆ ಎಂದಿಗೂ ಮರೆಯಬಾರದು ಎಂದರು. 

ಪ್ರಜಾಪ್ರಭುತ್ವದ ಬಂಧನ: ಪ್ರಜಾತಂತ್ರದ ಬಗ್ಗೆ ಮಾತನಾಡುವ ರಾಹುಲ್‌ ಗಾಂಧಿ ಅವರು ಮೊದಲು ತಮ್ಮ ಪಕ್ಷದ ಇತಿಹಾಸ ತಿಳಿದುಕೊಳ್ಳಬೇಕು. ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಘೋಷಿಸಿ ಜನತೆಗೆ ಕರಾಳ ದಿನಗಳ ಅನುಭವ  ನೀಡಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಆಶಯಗಳನ್ನು ಹತ್ತಿಕ್ಕುವ ಕೆಲಸ ಮಾಡಿದ್ದರು ಎಂದರು. ನೆಹರೂ, ಇಂದಿರಾ, ರಾಜೀವ್‌, ಸೋನಿಯಾ, ರಾಹುಲ್‌ ಆಯಿತು. ಮುಂದೆ ಯಾವ ಗಾಂಧಿ ಎಂಬುದು ಗೊತ್ತಿಲ್ಲ, ಒಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ. ಅವರದ್ದು ಬರೀ ಅಧಿಕಾರದ ಪ್ರಜಾಪ್ರಭುತ್ವ ಎಂದು ಕಿಡಿಕಾರಿದರು. 

44ರಿಂದ 4ಕ್ಕೆ ಬರುತ್ತೀರಿ: ಧರಣಿ ಸಂದರ್ಭ ನಿರೀಕ್ಷೆಯಂತೆ ಅಮಿತ್‌ ಶಾ ಅವರು ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಕಾಂಗ್ರೆಸ್‌ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್‌ ಪಕ್ಷದ  ನಾಯಕರು ದೇಶದಲ್ಲಿ ಜಾತಿ ಆಧಾರದ ಮೇಲೆ ಚುನಾವಣೆ ನಡೆಸಲು ಹುನ್ನಾರ ನಡೆಸಿದ್ದಾರೆ. ಗುಜರಾತ್‌,  ಮಹಾರಾಷ್ಟ್ರ, ಆಂಧ್ರ ಹಾಗೂ ಕರ್ನಾಟಕದಲ್ಲಿ ಜಾತಿ ಆಧಾರದ ಮೇಲೆ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ.

ಆದರೆ ಜನರಿಗೆ ಎಲ್ಲವೂ ಗೊತ್ತಿದ್ದು, ಸಮಾಜ ಒಡೆಯುವ ಕೆಲಸ ಮಾಡುವವರನ್ನು ಮನೆಗೆ ಕಳುಹಿಸುತ್ತಾರೆ. ರಾಹುಲ್‌ ಬಾಬಾ ಈಗ ನಿಮ್ಮ ಆಟ ನಡೆಯಲ್ಲ. ಧರ್ಮವನ್ನು  ನೀವು ಒಡೆದರೆ ಲೋಕಸಭೆಯಲ್ಲಿ 44 ಇರುವ ನಿಮ್ಮ ಸದಸ್ಯರ ಸಂಖ್ಯೆ ಬರೀ 4ಕ್ಕೆ ಬರುತ್ತದೆ ಎಚ್ಚರಿಕೆಯಿಂದ ಇರಿ ಎಂದು ವಾಗ್ಧಾಳಿ ನಡೆಸಿದರು. 

22 ದಿನ ಕಲಾಪ ಹಾಳು ಮಾಡಿದ ಕಾಂಗ್ರೆಸ್‌ ವಿರುದ್ದ ಹೋರಾಟಇದಾಗಿದೆ. ದೇಶದ ಎಲ್ಲ ಲೋಕಸಭಾ ಕ್ಷೇತ್ರದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ  ಮಾಡುವ ಮೂಲಕ ದೇಶದ ಲೋಕ ಆದಾಲತ್‌ ಮುಂದೆ ಬಂದಿದ್ದೇವೆ.
-ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.