ಕರ್ನಾಟಕ ಅರಣ್ಯ ಪ್ರದೇಶ ಶೇ. 33ಕ್ಕೆ ಹೆಚ್ಚಿಸಲು ಯತ್ನ 


Team Udayavani, Aug 19, 2018, 5:21 PM IST

19-agust-16.jpg

ನರೇಗಲ್ಲ: ಮನೆಗೊಂದು ಮರ, ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ವನ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಆಯವ್ಯಯದಲ್ಲಿ ಹಸಿರು ಕರ್ನಾಟಕ ಆಂದೋಲನವನ್ನು ಎಲ್ಲೆಡೆ ಹಮ್ಮಿಕೊಳ್ಳಲಾಗಿದೆ ಎಂದು ರೋಣ ಉಪ ವಲಯ ಅರಣ್ಯಾಧಿಕಾರಿ ಎಸ್‌. ರಂಗಣ್ಣವರ ಹೇಳಿದರು. ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ ಅರಣ್ಯ ಇಲಾಖೆ ಗದಗ, ಪಟ್ಟಣ ಪಂಚಾಯತ್‌ ನರೇಗಲ್‌, ಗ್ರೀನ್‌ ಆರ್ಮಿ ತಂಡ, ಸರಕಾರಿ ಪ್ರೌಢಶಾಲೆ, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಸಿರು ಕರ್ನಾಟಕ ಯೋಜನೆಗೆ ಅಗತ್ಯವಿರುವ ಸಸಿಗಳನ್ನು ಇಲಾಖೆಯಿಂದ ಪೂರೈಸಲಾಗುತ್ತದೆ. ಈ ಕಾರ್ಯಕ್ರಮದಡಿ ಸಣ್ಣಪುಟ್ಟ ಬೋಳು ಗುಡ್ಡಗಳು, ಗೋಮಾಳಗಳು, ಸರಕಾರಿ ಜಮೀನುಗಳು, ಸರಕಾರಿ ಇಲಾಖೆಯ ಕಚೇರಿ ಬಯಲು ಆವರಣ, ಶಾಲಾ-ಕಾಲೇಜು ಆವರಣ, ರೈತರ ಜಮೀನು, ಉದ್ಯಾನವನ ಮತ್ತು ಹಂತ ಹಂತವಾಗಿ ಮನೆಗಳ ಅಂಗಳಗಳಲ್ಲಿ ಮರಗಿಡಗಳನ್ನು ಬೆಳೆಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು, ಶಾಲಾ ಕಾಲೇಜುಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು ಸಕ್ರಿಯವಾಗಿ ಭಾಗವಹಿಸಬೇಕಾಗಿದೆ. ಕರ್ನಾಟಕ ಅರಣ್ಯ ಪ್ರದೇಶವನ್ನು ಶೇ. 33ಕ್ಕೆ ಹೆಚ್ಚಿಸಲು ಹಾಗೂ ಗದಗ ಜಿಲ್ಲೆಯಲ್ಲಿ ಕೇವಲ ಶೇ. 7ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇದ್ದು, ಸಸಿಗಳನ್ನು ನೆಟ್ಟು ಅರಣ್ಯ ಪ್ರದೇಶವನ್ನು ಹೆಚ್ಚಿಸಬೇಕಾಗಿದೆ ಎಂದರು.

ಪದವಿ ಪ್ರಾಚಾರ್ಯ ಬಸವರಾಜ ಬಳಗಾನೂರಮಠ ಮಾತನಾಡಿ, ಮಾನವ ಸಂಕುಲದ ಅಭಿವೃದ್ಧಿಗೆ ಪರಿಸರ ಉಳಿಸಿ ಬೆಳೆಸುವುದು ಅವಶ್ಯವಾಗಿದೆ. ನಾವಿಂದು ಕೇರಳ, ಕೊಡಗು, ಹಾಸನದಲ್ಲಿನ ಅತೀವೃಷ್ಟಿಯಿಂದಾಗಿ ಆಗುತ್ತಿರುವ ಜಲಪ್ರಳಯ, ಭೂಕುಸಿತ ಹಾಗೂ ಉತ್ತರ ಕರ್ನಾಟಕದಲ್ಲಿನ ಭೀಕರ ಬರಗಾಲ, ಅಂತರ್ಜಲ ಕುಸಿತ, ಹೆಚ್ಚುತ್ತಿರುವ ತಾಪಮಾನ ಪರಿಸರದ ನಾಶಕ್ಕೆ ಕಾರಣವಾಗಿದೆ. ಆದ್ದರಿಂದ ಎಲ್ಲರೂ ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು ಎಂದರು.

ಪಪಂ ಆರೋಗ್ಯ ನಿರೀಕ್ಷಕ ಎನ್‌.ಎಂ. ಹಾದಿಮನಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಗಿಡ ಮರ ಬೆಳೆಸಿ ಹಸಿರೀಕರಣದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಈ ಅಭಿಯಾನದ ಮೂಲದ ಆಗಬೇಕಿದೆ. ಶಾಲಾ ಶಿಕ್ಷಕರಿಗೆ ಈ ಬಗ್ಗೆ ಹೆಚ್ಚು ತಿಳಿವಳಿಕೆ ನೀಡಿ ವಿದ್ಯಾರ್ಥಿಗಳನ್ನು ಉತ್ತೇಜಿಸುವಂತೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಸಿ ನೆಡುವ ಮೂಲಕ ಹಸಿರು ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 

ಪಿಯು ಪ್ರಾಚಾರ್ಯ ಎನ್‌.ಎಂ. ಪವಾಡಿಗೌಡರ, ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್‌.ಬಿ. ನಿಡಗುಂದಿ, ಎಸ್‌.ಸಿ.ಗುಳಗೊಣ್ಣವರ, ಎಸ್‌.ಎನ್‌. ಚಕ್ರಸಾಲಿ, ಕೆ. ಶಿವುಕುಮಾರ, ಕೆ.ಎಚ್‌. ಅಂಜನಮೂರ್ತಿ, ಶಿವುಕುಮಾರ ಹಿರೆಹಾಳ, ಶಿವು ಕೊಪ್ಪದ, ಸಂತೋಷ ಮಣ್ಣೋಡ್ಡರ, ನಿಂಗಪ್ಪ ಮಡಿವಾಳ, ಎಂ.ಎಚ್‌. ಕಾತರಕಿ ಹಾಗೂ ಶಾಲಾ ಕಾಲೇಜಿನ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರೀನ್‌ ಆರ್ಮಿ ತಂಡದ ಸದಸ್ಯರು ಇದ್ದರು.

ಹಸಿರು ಕರ್ನಾಟಕ ಅಭಿಯಾನದಡಿ ನರೇಗಲ್ಲ ಪಟ್ಟಣದಲ್ಲಿ 900 ಸಸಿಗಳನ್ನು ಸರ್ಕಾರಿ ಶಾಲಾ ಕಾಲೇಜಿನ ಆವರಣದಲ್ಲಿ, ಹಿರೇಕೆರೆ ದಂಡೆಯ ಮೇಲೆ, ಎಸ್‌.ಡಬ್ಲೂ ಲೇಯವುಟ್‌ ಇತರೆ ಖಾಲಿ ಜಾಗಗಳಲ್ಲಿ ನೆಡಲಾಗುತ್ತದೆ. ಇಲಾಖೆಯವರು ಒದಗಿಸುವ ಸಸಿಗಳನ್ನು ರೈತರು ನೆಟ್ಟು ಪೋಷಿಸಿದ್ದಲ್ಲಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಪ್ರೋತ್ಸಾಹ ಧನವನ್ನೂ ನೀಡಲಾಗುವುದು.
ಎಸ್‌. ರಂಗಣ್ಣವರ,
ಉಪವಲಯ ಅರಣ್ಯಾಧಿಕಾರಿ ರೋಣ

Ad

ಟಾಪ್ ನ್ಯೂಸ್

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-acid

Dharwad: ನೀರೆಂದು ಆ್ಯಸಿಡ್ ಕುಡಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು

Hubli: ಫಿಟ್ನೆಸ್‌ ತರಬೇತಿ ಯಶಸ್ವಿ; 28 ದಿನದಲ್ಲಿ ತೂಕ ಇಳಿಸಿಕೊಂಡ ಪೊಲೀಸರು

Hubli: ಫಿಟ್ನೆಸ್‌ ತರಬೇತಿ ಯಶಸ್ವಿ; 28 ದಿನದಲ್ಲಿ ತೂಕ ಇಳಿಸಿಕೊಂಡ ಪೊಲೀಸರು

Dharawad: ಕವಿವಿಗೆ ಡಾ.ಎ.ಎಂ.ಖಾನ್ ಕುಲಪತಿ… ರಾಜ್ಯಪಾಲರಿಂದ ಅಧಿಕೃತ ಆದೇಶ

Dharawad: ಕವಿವಿಗೆ ಡಾ.ಎ.ಎಂ.ಖಾನ್ ಕುಲಪತಿ… ರಾಜ್ಯಪಾಲರಿಂದ ಅಧಿಕೃತ ಆದೇಶ

Dharwad ASP Bharamani gives up voluntary retirement and reports for duty

Dharwad: ಸ್ವಯಂ ನಿವೃತ್ತಿ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಧಾರವಾಡ ಎಎಸ್ಪಿ ಭರಮಣಿ

Hubballi: ತರಗತಿಯಲ್ಲೇ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿ ಮೃ*ತ್ಯು

Hubballi: ತರಗತಿಯಲ್ಲೇ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿ ಮೃ*ತ್ಯು

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Arrested: ಜನರಿಗೆ ಧಮ್ಕಿ: ನಕಲಿ ಪೊಲೀಸ್‌ ಅಧಿಕಾರಿ ಸೆರೆ

Arrested: ಜನರಿಗೆ ಧಮ್ಕಿ: ನಕಲಿ ಪೊಲೀಸ್‌ ಅಧಿಕಾರಿ ಸೆರೆ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮೈದುಂಬಿದೆ ಬೆಳ್ಕಲ್‌ ತೀರ್ಥ: ಜಲಧಾರೆಯ ಸೊಬಗು; ಮೋಜು – ಮಸ್ತಿಯಲ್ಲಿ ಮೈಮರೆಯಬೇಡಿ

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

ಮದುವೆ ನೆಪದಲ್ಲಿ ಲೈಂಗಿ*ಕ ಕಿರುಕುಳ: ಆರ್‌ಸಿಬಿ ವೇಗಿ ಯಶ್‌ ದಯಾಳ್‌ ವಿರುದ್ಧ FIR ದಾಖಲು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.