ಕಾನೂನು ವಿವಿಯಲ್ಲಿ ಗಗನ ಕುಸುಮವಾಗಿರುವ ನೇಮಕಾತಿ

ಸದ್ಯ ಖಾಯಂ ಬೋಧಕ ಸಿಬಂದಿ ಇರುವುದು ಕೇವಲ 11 ಮಂದಿ ;ಸ್ನಾತಕೋತ್ತರ ಪದವಿ ಕೋರ್ಸ್‌, ಮೂಲ ಸೌಲಭ್ಯವೂ ಇಲ್ಲಿಲ್ಲ

Team Udayavani, Sep 4, 2022, 7:40 AM IST

ಕಾನೂನು ವಿವಿಯಲ್ಲಿ ಗಗನ ಕುಸುಮವಾಗಿರುವ ನೇಮಕಾತಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಆರಂಭವಾಗಿ 12 ವರ್ಷ ಕಳೆದರೂ ಅತಿಥಿ ಉಪನ್ಯಾಸಕರು ಹಾಗೂ ಹೊರಗುತ್ತಿಗೆ ನೌಕರರ ಮೇಲೆ ನಿಂತಿದೆ. ಒಂದು ಬಾರಿ ಮಾತ್ರ ಬೋಧಕ ಸಿಬಂದಿ ನೇಮಕಾತಿ ನಡೆದಿದೆ. ಬೋಧಕೇತರ ಸಿಬಂದಿ ನೇಮಕಾತಿ ಇನ್ನೂ ಗಗನ ಕುಸುಮವಾಗಿದೆ.

ಇತರ ವಿವಿಗಳಿಗೆ ಹೋಲಿಸಿದರೆ ಇಲ್ಲಿ ಸಾಕಷ್ಟು ಮೂಲ ಸೌಲಭ್ಯಗಳ ಕೊರತೆಯಿದೆ. ಸುಸಜ್ಜಿತ ಭೂಮಿ ದೊರೆಯದ ಕಾರಣ ಹರಿದು ಹಂಚಿ ಹೋಗಿರುವ 55 ಎಕರೆಯಲ್ಲಿ ಆರಂಭವಾಗಿದೆ. ಲಾ ಸ್ಕೂಲ್‌, ಉನ್ನತ ಹುದ್ದೆಯಲ್ಲಿರುವವರಿಗೆ ವಸತಿ ಗೃಹಗಳು, ಹಾಸ್ಟೆಲ್‌ ಒಂದಿಷ್ಟು ಬಿಟ್ಟರೆ ಇಂದಿಗೂ ವಿವಿಯ ಆಡಳಿತ ಕಟ್ಟಡ ಲೋಕೋಪಯೋಗಿ ಕಟ್ಟಡದಲ್ಲೇ ನಡೆಯುತ್ತಿದೆ. ಹೊಸ ಕೋರ್ಸ್‌ಗಳನ್ನು ಪರಿಚಯಿಸುವ ಗೋಜಿಗೆ ಹೋಗದೆ ಒಂದು ಸ್ನಾತಕೋತ್ತರ, ಎರಡು ಯುಜಿ ಕೋರ್ಸ್‌ಗೆ ಸೀಮಿತವಾಗಿದೆ. ಸಂವಿಧಾನಾತ್ಮಕ ಕಾನೂನು ಬಿಟ್ಟರೆ ಇತರ ವಿಷಯಗಳ ಸ್ನಾತಕೋತ್ತರ ಪದವಿಗೆ ಇತರ ವಿವಿಗಳ ಕಾನೂನು ಕಾಲೇಜುಗಳನ್ನು ಆಶ್ರಯಿಸುವಂತಾಗಿದೆ.

ಎಲ್ಲವೂ ಹೊರಗುತ್ತಿಗೆ
ಕಾನೂನು ವಿವಿ ಆರಂಭವಾದ ಸಂದರ್ಭ 10-ಪ್ರೊಫೆಸರ್‌, 17-ರೀಡರ್‌, 41-ಉಪನ್ಯಾಸಕರು ಸಹಿತ ಒಟ್ಟು 68 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ ಮೂವರು ಪ್ರೊಫೆಸರ್‌, ಎಂಟು ಉಪನ್ಯಾಸಕರಿದ್ದಾರೆ. ರೀಡರ್‌ ಹುದ್ದೆಗಳು ಸಂಪೂರ್ಣ ಖಾಲಿಯಿದ್ದು, ಇಡೀ ವಿವಿಗೆ ಖಾಯಂ ಬೋಧಕ ಸಿಬಂದಿ ಇರುವುದು ಕೇವಲ 11 ಮಂದಿ ಮಾತ್ರ. ಉಳಿದೆಲ್ಲವೂ ಅತಿಥಿ ಉಪನ್ಯಾಸಕರ ಮೂಲಕ ಮುನ್ನಡೆಸಲಾಗುತ್ತಿದೆ. ಆರಂಭದಲ್ಲಿ 164 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದವು. ಇಂದು ಸುಮಾರು 170ಕ್ಕೂ ಹೆಚ್ಚು ಸಿಬಂದಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಸದ್ಯ ಕುಲಪತಿ ಸ್ಥಾನವೂ ಪ್ರಭಾರದಲ್ಲಿದೆ. ಕುಲಸಚಿವರೇ ಮುಖ್ಯ ಹಣಕಾಸು ಅಧಿಕಾರಿಯಾಗಿ ಹೊಣೆ ನಿರ್ವಹಿಸುತ್ತಿದ್ದಾರೆ. ವಿಪರ್ಯಾಸ ಎಂದರೆ ಉಪ ಕುಲಸಚಿವ ಹಾಗೂ ಸಹಾಯಕ ಕುಲಸಚಿವ, ವಿವಿಯ ಹೃದಯ ಎನ್ನುವ ಮುಖ್ಯ ಗ್ರಂಥಪಾಲಕ ಹೊರ ಗುತ್ತಿಗೆ. ಅತ್ಯಂತ ಗೌಪ್ಯ ವಿಭಾಗ ಪರೀಕ್ಷಾಂಗ ವಿಭಾಗವನ್ನೂ ಹೊರ ಗುತ್ತಿಗೆ ಸಿಬಂದಿ ಮೂಲಕವೇ ನಡೆಸಲಾಗುತ್ತಿದೆ.

ನೇಮಕಾತಿಗೆ ಯಾಕೆ ವಿಘ್ನ?
ವಿವಿ ಆರಂಭದ ಬಳಿಕ ಒಮ್ಮೆಯಷ್ಟೇ ಪ್ರೊಫೆಸರ್‌, ರೀಡರ್‌, ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ನಡೆದಿದೆ. 2013ರಲ್ಲಿ 14 ಹುದ್ದೆಗಳ ಅಧಿಸೂಚನೆಗೆ ನೇಮಕವಾಗಿದ್ದು, 11 ಜನರು ಮಾತ್ರ. 2021 ನವೆಂಬರ್‌ ತಿಂಗಳಲ್ಲಿ 13 ಹುದ್ದೆಗಳ ನೇಮಕಾತಿಗೆ ಆಹ್ವಾನಿಸಿದ್ದರೂ ಪ್ರಕ್ರಿಯೆ ಮುಂದುವರಿದಿಲ್ಲ. ಆದರೆ ಬೋಧಕೇತರ ಹುದ್ದೆಗಳಿಗೆ ಎರಡು ಬಾರಿ ನೇಮಕಾತಿ ಅಧಿಸೂಚನೆ ಹೊರಡಿಸಿದ್ದರೂ ಪ್ರಕ್ರಿಯೆ ನಡೆದಿಲ್ಲ. ಪೂರ್ಣಾವಧಿ ಉಪನ್ಯಾಸಕರಿಗೆ ಯುಜಿಸಿ ವೇತನ ನೀಡುವಂತೆ ಕಾಲೇಜಿಗಳಿಗೆ ಆದೇಶ ನೀಡುವ ವಿಶ್ವವಿದ್ಯಾನಿಲಯವು ತನ್ನ ನಾಲ್ವರು ಗುತ್ತಿಗೆ ಉಪನ್ಯಾಸಕರಿಗೆ ಪಿಯು ಕಾಲೇಜಿನ ಉಪನ್ಯಾಸಕರ ವೇತನ ನೀಡುತ್ತಿದೆ. 10 ವರ್ಷ ಸೇವೆ ಸಲ್ಲಿಸಿದವರನ್ನು ನೇಮಕಾತಿಗೆ ಪರಿಗಣಿಸಬೇಕೆನ್ನುವ ಉಮಾದೇವಿ ಪ್ರಕರಣ ಮುಂದಿಟ್ಟುಕೊಂಡು ಹೋರಾಟಕ್ಕೆ ಮುಂದಾಗುವಂತಾಗಿದೆ.

ಕಾನೂನು ವಿಶ್ವ ವಿದ್ಯಾ ನಿಲಯ ವನ್ನು ಗುದ್ದಾಡಿ ತಂದಿದ್ದು, ಇದು ಉತ್ತರ ಕರ್ನಾಟಕದಲ್ಲಿದೆ ಎನ್ನುವ ಕಾರಣಕ್ಕೆ ಎಲ್ಲ ಸರಕಾರಗಳು ನಿರ್ಲಕ್ಷé ಮಾಡಿಕೊಂಡು ಬರುತ್ತಿವೆ. ವ್ಯವಸ್ಥಿತವಾಗಿ ದುರ್ಬಲಗೊಳಿಸಿ ಇದನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕೆನ್ನುವ ಹುನ್ನಾರಗಳು ನಡೆಯುತ್ತಿವೆ. ಇಷ್ಟೊಂದು ನಿರ್ಲಕ್ಷé ಮಾಡುತ್ತಿರುವುದು ನೋವಿನ ಸಂಗತಿ. ಈ ಕುರಿತು ಮುಂದಿನ ಅಧಿವೇಶನದಲ್ಲಿ ಪ್ರಸ್ತಾವ ಮಾಡುತ್ತೇನೆ.
-ಬಸವರಾಜ ಹೊರಟ್ಟಿ,
ವಿಧಾನಪರಿಷತ್‌ ಸದಸ್ಯ

– ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.