ಸಂತ್ರಸ್ತರ ನೆರವಿಗೆ ಕರ್ನಾಟಕ ಥಿಂಕರ್ ಫೋರಂ ಸಾಥ್‌


Team Udayavani, Aug 20, 2018, 4:14 PM IST

20-agust-16.jpg

ಧಾರವಾಡ: ಅನಿರೀಕ್ಷಿತ ಅತಿವೃಷ್ಟಿಯಿಂದ ತೀವ್ರ ತೊಂದರೆಗೆ ಸಿಲುಕಿರುವ ಕೊಡುಗು ಜಿಲ್ಲೆಯ ಜನರಿಗೆ ನಾಡಿನ ಜನರ ಸಹಾಯದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಥಿಂಕರ್ ಫೋರಂ (ರಿ) ಕೊಡಗು ಜಿಲ್ಲೆಯ ಜನರಿಗೆ ನೆರವು ನೀಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಈ ಉದ್ದೇಶಕ್ಕಾಗಿ ಫೋರಂ, ಸಾರ್ವಜನಿಕರು ನೀಡುವ ವಸ್ತುಗಳನ್ನು ಕೊಡಗು ಜಿಲ್ಲೆಯ ಜನರಿಗೆ ತಲುಪಿಸುವ ಹೊಣೆ ನಿಭಾಯಿಸಲು ಸಜ್ಜಾಗಿದೆ.

ಆದ್ದರಿಂದ ಸಾರ್ವಜನಿಕರು ಧವಸ-ಧಾನ್ಯ, ಬಟ್ಟೆಗಳು, ಬ್ರೆಡ್‌, ಹಾಸಿಗೆ, ಹೊದಿಕೆ, ದಿಂಬು, ಬೆಂಕಿಪೊಟ್ಟಣ, ಮೇಣಬತ್ತಿ, ಔಷಧಿ ಸಾಮಗ್ರಿ, ಡೆಟಾಲ್‌, ವಾಶಿಂಗ್‌ ಪೌಡರ್‌, ಕೊಬ್ಬರಿ ಎಣ್ಣೆ, ಸಾಬೂನು ಮತ್ತಿತರ ಜೀವನಾವಶ್ಯಕ ವಸ್ತುಗಳನ್ನು ಚೀಲ ಅಥವಾ ಡಬ್ಬಿಯಲ್ಲಿ ಪ್ಯಾಕ್‌ ಮಾಡಿ ಕೊಡಬೇಕು. ಹಣಕಾಸಿನ ರೂಪದಲ್ಲಿ ಸಹಾಯ ಮಾಡಲು ಬಯಸುವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಂದಾಯ ಮಾಡಲು ಅವಕಾಶವಿದೆ. ದಾನಿಗಳು ತಮ್ಮ ಚೆಕ್‌ ಅಥವಾ ಡಿ.ಡಿ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ, ಮುಖ್ಯಮಂತ್ರಿಗಳ ಕಚೇರಿ, ಕರ್ನಾಟಕ ಸರ್ಕಾರ ಈ ವಿಳಾಸಕ್ಕೆ ಬರೆದು ಸಲ್ಲಿಸಬೇಕು. ಸಾರ್ವಜನಿಕರು ತಾವು ನೀಡಿದ ವಸ್ತುಗಳ ಬಗ್ಗೆ ಸಂಬಂಧಿಸಿದವರ ಬಳಿ ರಶೀದಿ ಪಡೆಯಬೇಕು.

ಆಸಕ್ತ ಸಾರ್ವಜನಿಕರು ಜೆ.ಸಿ. ಕಂಬಾರ, ಅಧ್ಯಾಪಕರು, ಆರ್‌.ಎಲ್‌.ಎಸ್‌. ಕಾಲೇಜು, ಮಹಾನಗರ ಪಾಲಿಕೆ ಕಚೇರಿ ಹತ್ತಿರ, ಧಾರವಾಡ (ಮೊ:8296756966), ದೂ:0836-2441185 ಅಥವಾ ಪ್ರಕಾಶ ಶ್ಯಾಡ್ಲಗೇರಿ, ಕರ್ನಾಟಕ ಥಿಂಕರ್ ಫೋರಂ (ರಿ) ಕಚೇರಿ, ಕಿಲ್ಲಾ ಧಾರವಾಡ (ಮೊ:9945720037) ಆ.25ರೊಳಗಾಗಿ ತಲುಪಿಸಬೇಕು. ಮಾಹಿತಿಗಾಗಿ ಪಿ.ಎಚ್‌. ನೀರಲಕೇರಿ, ಅಧ್ಯಕ್ಷರು, ಕರ್ನಾಟಕ ಥಿಂಕರ್ ಫೋರಂ ಅಥವಾ ಕರಣ ದೊಡವಾಡ (ಮೊ: 7760965110) ಸಂಪರ್ಕಿಸಬಹುದು. 

ಕೊಡಗು ಸಂತ್ರಸ್ತರಿಗೆ ಆಹಾರ ಪದಾರ್ಥ ಸಂಗ್ರಹ
ನವಲಗುಂದ: ಪಟ್ಟಣದಲ್ಲಿ ಜನರಿಂದ ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಖಾಸಗಿ ವಾಹನಿ ಮೂಲಕ ಕೊಡಗು ಸಂತ್ರಸ್ತರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕರಾದ ಮಂಜುನಾಥ ಬೇಲೂರು, ಉಮೇಶ ಹಕ್ಕರಕ್ಕಿ, ನಿಂಗಪ್ಪ ಕುಂಬಾರ, ಜಯಪ್ರಕಾಶ ಬದಾಮಿ, ವಿನಾಯಕ ದಾಡಿಬಾಯಿ, ರಾಮು ಭೋವಿ, ಮಹೇಶ ಪೂಜಾರ, ಆಸೀಫ್‌ ಉಮಚಗಿ, ರವಿ ಬ್ಯಾಹಿಟಿ, ರಾಘು ಮಲ್ಲಾಪೂರ, ಸೋಮಯ್ಯ ಪೂಜಾರ, ರಾಮಕೃಷ್ಣ ಬಡಿಗೇರ, ಬಾಲಾಜಿ ಆನೇಗುಂದಿ, ಗುರು ವಿಠಲ ರಾಯಬಾಗಿ, ಮಂಜು ಮಟಗೇರ, ಮಾರುತಿ ಗುಡಿಸಾಗರ, ಪುಟ್ಟು ಹೀರಗಣ್ಣನವರ ಇದ್ದರು.

ಪ್ರವಾಹ ಇಳಿಮುಖಕ್ಕೆ ಆಗ್ರಹಿಸಿ ದೀರ್ಘ‌ ದಂಡ ನಮಸ್ಕಾರ
ಧಾರವಾಡ: ಕೊಡಗು ಹಾಗೂ ಕೇರಳದಲ್ಲಿ ಪ್ರವಾಹ ಇಳಿಮುಖವಾಗುವಂತೆ ಪ್ರಾರ್ಥಿಸಿ ನಗರದಲ್ಲಿ ರವಿವಾರ ಸಾಮೂಹಿಕ ದೀರ್ಘ‌ ದಂಡ ನಮಸ್ಕಾರ ಸೇವೆ ಸಲ್ಲಿಸುವ ಮೂಲಕ ದೇವರ ಮೊರೆ ಹೋದ ಘಟನೆ ನಡೆದಿದೆ. ರಾಜೀವಗಾಂಧಿ  ನಗರದ ಕೆಲ ಭಕ್ತ ಸಮೂಹವು ಹೊಳೆಮ್ಮದೇವಿ ದೇವಸ್ಥಾನದಿಂದ ಸೋಮೇಶ್ವರ ದೇವಸ್ಥಾನದವರೆಗೆ ದೀರ್ಘ‌ದಂಡ ನಮಸ್ಕಾರ ಹಾಕಿದ್ದು, ಅಲ್ಲದೇ ಆ ಬಳಿಕ ದೇವರ ಸನ್ನಿಧಾನದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಹೊಳೆಮ್ಮದೇವಿ ದೇವಸ್ಥಾನದ ಮೈಲಾರ ಅಜ್ಜ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಈ ದೀರ್ಘ‌ ದಂಡ ನಮಸ್ಕಾರ ಸೋಮೇಶ್ವರ ದೇವಸ್ಥಾನದವರೆಗೂ ಬಂದು ಪುನಃ ದೀಡ ನಮಸ್ಕಾರ ಮೂಲಕವೇ ಹೊಳೆಮ್ಮದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಮಕ್ಕಳು ಸಹ ಈ ದೀರ್ಘ‌ ದಂಡ ನಮಸ್ಕಾರ ಹಾಕಿದ್ದು ವಿಶೇಷವಾಗಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.