Athletic Games; 48 ವರ್ಷದ ದಾಖಲೆ ಸೇರಿ ಮೂರು ದಾಖಲೆಗಳು ಧೂಳೀಪಟ
ಕವಿವಿ ಮಟ್ಟದ 70ನೇ ಅಂತರ್ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟ
Team Udayavani, Dec 16, 2023, 8:21 PM IST
ಧಾರವಾಡ : ಇಲ್ಲಿನ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಕರ್ನಾಟಕ ಕಲಾ ಕಾಲೇಜು ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ 2023-24 ನೇ ಕವಿವಿ ಮಟ್ಟದ 70ನೇ ಅಂತರ ಕಾಲೇಜುಗಳ ಅಥ್ಲೆಟಿಕ್ ಕ್ರೀಡಾಕೂಟದ ಮೊದಲ ದಿನವಾದ ಶನಿವಾರವೇ ಹೆಚ್ಚು ಕಮ್ಮಿ ಅರ್ಧ ಶತಮಾನದ (48 ವರ್ಷ) ಕೂಟ ದಾಖಲೆ ಸೇರಿದಂತೆ ಈ ಹಿಂದಿನ ಮೂರು ದಾಖಲೆಗಳು ಧೂಳೀಪಟವಾಗಿವೆ.
ಧಾರವಾಡದ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಮೂವರು ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ 48, 18, 10 ವರ್ಷಗಳ ಈ ಹಿಂದಿನ ದಾಖಲೆಗಳನ್ನು ಮುರಿಯುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ಇದಲ್ಲದೇ ಮೊದಲ ದಿನವೇ ನಾಲ್ಕು ಚಿನ್ನ, ಎರಡು ಬೆಳ್ಳಿ ಪದಕ ಸೇರಿದಂತೆ ಒಟ್ಟು ಪದಕಗಳೊಂದಿಗೆ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯು ಅಗ್ರಸ್ಥಾನದಲ್ಲಿ ಮುನ್ನಡೆದಿದೆ. ಮೂರು ಚಿನ್ನ, ಮೂರು ಬೆಳ್ಳಿ ಪದಕಗಳೊಂದಿಗೆ ಕರ್ನಾಟಕ ಕಲಾ ಮಹಾವಿದ್ಯಾಲಯವು 6 ಪದಕಗಳನ್ನು ಪಡೆದುಕೊಂಡು ದ್ವಿತೀಯ ಸ್ಥಾನದಲ್ಲಿ ಮುನ್ನಡೆದಿದ್ದರೆ ಶಿರಸಿಯ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯವು 2 ಚಿನ್ನದ ಪದಕ ಪಡೆದುಕೊಂಡಿದೆ.
ಹಿಂದಿನ ದಾಖಲೆ ಧೂಳೀಪಟ : 1975 ರಲ್ಲಿ ಕೆಸಿಡಿ ಮಹಾವಿದ್ಯಾಲಯದಿಂದ ಕುಂದನ್ ಸಿಂಗ್ ಸ್ಥಾಪಿಸಿದ್ದ 37.07 ಮೀಟರ್ ಜಾವೆಲಿನ್ ಎಸೆತದ ದಾಖಲೆಯನ್ನು 48 ವರ್ಷಗಳಿಂದ ಯಾರೂ ಹಿಂದಿಕ್ಕಲು ಸಾಧ್ಯವಾಗಿರಲಿಲ್ಲ. ಇದೀಗ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಕ್ರೀಡಾಪಟುವಾದ ಉಡುಪಿಯ ಶ್ರಾವ್ಯ ಬರೋಬ್ಬರಿ 41.43 ಮೀಟರ್ ಎಸೆತದ ಮೂಲಕ ಹಿಂದಿನ ದಾಖಲೆ ಮುರಿದು, ಹೊಸ ದಾಖಲೆ ಬರೆದಿದ್ದಾರೆ. ಇನ್ನು ಪುರುಷರ ಗುಂಡು ಎಸೆತದಲ್ಲಿ ಮೈಸೂರಿನ ಸುಭಾಸ ಡಿ 14.26 ಮೀಟರ್ ಎಸೆಯುವ ಮೂಲಕ 2005 ರಲ್ಲಿ ಗದಗದ ಶರತರಾಜ್ ಆರ್ ದಾಖಲಿಸಿದ್ದ ಬರೋಬ್ಬರಿ 18 ವರ್ಷದ ಹಿಂದಿನ 14.23 ಮೀಟರ್ ದಾಖಲೆಯನ್ನು ಹಿಂದಿಕ್ಕಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದರ ಜತೆಗೆ ಮಹಿಳೆಯರ 100 ಮೀಟರ್ ಓಟವನ್ನು ಕಾರವಾರದ ನಯನಾ ಕೊಕರೆ ಬರೀ 12.10 ಸೆಕೆಂಡ್ನಲ್ಲಿ ಕ್ರಮಿಸುವ ಮೂಲಕ 2013 ರಲ್ಲಿ ಪ್ರಿಯಾಂಕಾ ಕೆ ದಾಖಲಿಸಿದ್ದ 10 ವರ್ಷ ಹಿಂದಿನ 12.26 ಸೆಕೆಂಡ್ ದಾಖಲೆಯನ್ನು ಮುರಿದು, ಹೊಸ ದಾಖಲೆ ಬರೆದಿದ್ದಾರೆ.
ಕಳೆದ 48 ವರ್ಷಗಳ ದಾಖಲೆ ಮುರಿಯಬೇಕೆಂಬ ಗುರಿಯಿತ್ತು. ಈ ಗುರಿ ಸಾಽಸಲು ಸಾಕಷ್ಟು ಕಠಿಣ ಅಭ್ಯಾಸ ಮಾಡಿದ್ದು, ಅದಕ್ಕಾಗಿತರಬೇತಿಯಲ್ಲದೇ ಆರ್ಥಿಕವಾಗಿಯೂ ಜೆಎಸ್ಎಸ್ ಸಂಸ್ಥೆಯು ಸಹಾಯ ಮಾಡಿದಲ್ಲದೇ ಅಗತ್ಯ ಪ್ರೋತ್ಸಾಹ ಕೊಟ್ಟಿದೆ. ಈ ಪ್ರೋತ್ಸಾಹದಿಂದ ಹಾಕಿದ ಶ್ರಮಕ್ಕೆ ತಕ್ಕ ಫಲಿತಾಂಶ ಬಂದಿದ್ದು, ಈ ದಾಖಲೆ ಮುರಿಯಬೇಕೆಂಬ ಕನಸು ನನಸಾಗಿದೆ. ಇದಲ್ಲದೇ ಮುಂದೆ ಆಲ್ ಇಂಡಿಯಾ ವಿಶ್ವವಿದ್ಯಾಲಯ ಹಾಗೂ ಖೇಲೋ ಇಂಡಿಯಾದಲ್ಲಿ ಪಾಲ್ಗೊಳ್ಳಬೇಕೆಂಬ ಗುರಿ ಇದೆ.
- ಶ್ರಾವ್ಯಾ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್
Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ
Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್