ಕಾಲಮಿತಿ ಮೀರಿದರೆ ಕಪ್ಪು ಪಟ್ಟಿಗೆ

ತುಪ್ಪರಿ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ 150 ಕೋಟಿ ಟೆಂಡರ್‌ ಪ್ರಕ್ರಿಯೆ ಪೂರ್ಣ

Team Udayavani, Jun 21, 2022, 12:46 PM IST

7

ನವಲಗುಂದ: ನೂರಾರು ಕೋಟಿ ರೂ.ಅನುದಾನ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದ್ದು, ಗುತ್ತಿಗೆದಾರರು ಸಮಯಕ್ಕೆ ಸರಿಯಾಗಿ ಕಾಮಗಾರಿ ಮುಗಿಸಬೇಕು. ಇಲ್ಲವಾದರೆ ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಕೈಮಗ್ಗ ಮತ್ತು ಜವಳಿ ಕಬ್ಬು ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಾಕೀತು ಮಾಡಿದರು.

ತಾಪಂ ಸಭಾಭವನದಲ್ಲಿ ಸೋಮವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನ ಗ್ರಾಮ ಸಡಕ್‌ ರಸ್ತೆ ಹಾಗೂ ಮುಖ್ಯ ಗ್ರಾಮೀಣ ರಸ್ತೆಗಾಗಿ 45 ಕೋಟಿಕ್ಕಿಂತಲೂ ಹೆಚ್ಚು ಕಾಮಗಾರಿಗಳ ಪ್ರಗತಿಯಲ್ಲಿದ್ದು, ಇದರ ಜತೆಗೆ ರೈತರಿಗೆ ಅವಶ್ಯವಾಗಿ ಬೇಕಿರುವ ಬೀಜ, ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಮಹತ್ವಾಕಾಂಕ್ಷೆ ಯೋಜನೆ ಜಲಜೀವನ ಮಷಿನ್‌ ಕಾಮಗಾರಿ 72 ಗ್ರಾಮಗಳಲ್ಲಿ ಶೇ.80 ಮುಗಿದಿರುತ್ತದೆ. 400 ಕೋಟಿ ರೂ. ಅನುದಾನದಲ್ಲಿ ಕ್ಷೇತ್ರಕ್ಕೆ ರೈತರ ಮನೆ ಬಾಗಿಲಿಗೆ ಕುಡಿಯುವ ನೀರು ತಲುಪಿಸಲಾಗುವುದು. ತುಪ್ಪರಿಹಳ್ಳ ಶಾಶ್ವತ ಪರಿಹಾರಕ್ಕಾಗಿ 321 ಕೋಟಿ ರೂ.ಗಳಲ್ಲಿ 150 ಕೋಟಿಗೆ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗುವುದೆಂದು ಹೇಳಿದರು.

ತುಪ್ಪರಿಹಳ್ಳದಿಂದ 1 ಟಿಎಂಸಿ ನೀರು ಬಳಕೆ ಮಾಡಿ ಕೃಷಿ ಹಾಗೂ ಇತರೆ ಕೆಲಸಗಳಿಗೂ ಬಳಸಲು ಅನುಮೋದನೆ ಪಡೆಯಲಾಗಿದೆ. ಪಟ್ಟಣದ ವಾಲ್ಮೀಕಿ ಭವನಕ್ಕೆ 1 ಕೋಟಿ ರೂ. ಸೇರಿದಂತೆ ವಿವಿಧ ಸಮುದಾಯ ಭವನಗಳಿಗೆ ಹಣ ಮಂಜೂರು ಮಾಡಲಾಗಿದೆ ಎಂದರು.

ಅಣ್ಣಿಗೇರಿ ಪಟ್ಟಣಕ್ಕೆ 24?7 ಕುಡಿಯುವ ನೀರಿನ ಯೋಜನೆಗೆ 54 ಕೋಟಿ ರೂ.ಅನುದಾನ ಮಂಜೂರಾಗಿದೆ. ಗ್ರಾಮ ಸಡಕ್‌ ಯೋಜನೆಯಲ್ಲಿ ಹೊಲಗಳ ರೈತರ ರಸ್ತೆಗಳಿಗೆ 50 ಕೋಟಿ ರೂ. ಗಳನ್ನುವ್ಯಯಿಸಲಾಗಿದೆ ಎಂದರು.

ಈ ಮುಂಚೆ 265 ಶಾಲೆಗಳ ಹೊಸ ಕಟ್ಟಡಗಳ ಕಾಮಗಾರಿ ಶೇ.80 ಮುಗಿದಿರುತ್ತವೆ. ಶಲವಡಿ, ಹೆಬ್ಟಾಳ, ಅಣ್ಣಿಗೇರಿ, ನವಲಗುಂದ ಸೇರಿ ಉಳಿದ ಗ್ರಾಮಗಳ ರಸ್ತೆಗಳ ಅಭಿವೃದ್ಧಿಗೆ ಹಣ ವ್ಯಯಿಸಲಾಗಿದೆ ನವಲಗುಂದ ತಾಲೂಕಿನಲ್ಲಿ 4, ಅಣ್ಣಿಗೇರಿ ತಾಲೂಕಿನಲ್ಲಿ 8 ರುದ್ರಭೂಮಿಗಳಿಗೆ ಜಾಗೆ ಖರೀದಿಸಲಾಗಿದೆ. ಇನ್ನು 4 ರುದ್ರಭೂಮಿಗಳಿಗೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಈಗಾಗಲೇ ವಿದ್ಯುತ್‌ 110 ಕೆ.ವಿ ಸ್ಟೇಷನ್‌ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಗೊಳ್ಳಲಿದೆ ಎಂದರು.

ಕೆ.ಡಿ.ಬಿ ಸಭೆಯಲ್ಲಿ ಇಒ ಎಸ್‌.ಎಮ್‌.ಕಾಂಬಳೆ, ತಹಶೀಲ್ದಾರ್‌ ಅನೀಲ ಬಡಿಗೇರ, ಅಣ್ಣಿಗೇರಿ ತಹಶೀಲ್ದಾರ್‌ ಮಂಜುನಾಥ ಅಮಾಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್‌. ಮಾಯಾಚಾರ್ಯ, ಶಿವಯೋಗಿ ಬೆಳಹಾರ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.