ಕೆಎಂಎಫ್ ಅಧ್ಯಕ್ಷ ಗಾದಿ ಕೈ ವಶ
• ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಸವರಾಜ ಅರಬಗೊಂಡ ಕೆಎಂಎಫ್ ಅಧ್ಯಕ್ಷ
Team Udayavani, May 11, 2019, 9:55 AM IST
ಧಾರವಾಡ: ಕೆಎಂಎಫ್ ಧಾರವಾಡ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅರಬಗೊಂಡ ಅವರನ್ನು ಕಾಂಗ್ರೆಸ್ ಬೆಂಬಲಿಗರು ಸಿಹಿ ತಿನ್ನಿಸಿ ಅಭಿನಂದಿಸಿದರು.
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಜಿಲ್ಲೆಯಲ್ಲಿ ಬಿಜೆಪಿಗೆ ಮತ್ತೂಂದು ಶಾಕ್ ನೀಡಿದ್ದು, ಜಿಪಂ ಅಧ್ಯಕ್ಷ ಸ್ಥಾನ ತೆಕ್ಕೆಗೆ ತೆಗೆದುಕೊಂಡ ಎರಡೇ ತಿಂಗಳ ಅವಧಿಯಲ್ಲಿ ಇದೀಗ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನೂ ಕೈ ವಶ ಮಾಡಿಕೊಂಡಿದ್ದಾರೆ.
ಬೆಳಗ್ಗೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಾಳೆಯ ಸೇರಿದ್ದ ಬಸವರಾಜ ಅರಬಗೊಂಡ ಅವರನ್ನು ಕಾಂಗ್ರೆಸ್ ಬೆಂಬಲ ನೀಡಿ, ಧಾರವಾಡ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಶುಕ್ರವಾರ ಮಧ್ಯಾಹ್ನ ಅಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ನಿರ್ದೇಶಕ ಶಂಕರ ಮುಗದ ಹಾಗೂ ಬಸವರಾಜ ಅರಬಗೊಂಡ ನಾಮಪತ್ರ ಸಲ್ಲಿದ್ದರು. ಒಕ್ಕೂಟದ 12 ಜನ ನಿರ್ದೇಶಕರು ಸೇರಿ ಒಟ್ಟು 15 ಮತಗಳು ಚಲಾವಣೆಯಾಗಿವೆ. ಈ ಪೈಕಿ ಶಂಕರ ಮುಗದ 6 ಮತಗಳನ್ನು ಪಡೆದರೆ, ಬಸವರಾಜ ಅರಬಗೊಂಡ 8 ಮತಗಳನ್ನು ಪಡೆದಿದ್ದು, 1 ಮತ ತಿರಸ್ಕೃತವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ಬೇಕಿರುವಷ್ಟು ಸಂಖ್ಯೆಯನ್ನು ಬಿಜೆಪಿ ಹೊಂದಿದ್ದ ಹಿನ್ನೆಲೆಯಲ್ಲಿ ಈ ಬಾರಿ ಸಹ ಕೆಎಂಎಫ್ ಅಧಿಕಾರವನ್ನು ಬಿಜೆಪಿ ಹಿಡಿಯಲಿದೆ ಎಂಬ ಭಾವನೆ ಎಲ್ಲರಲ್ಲಿ ಮೂಡಿತ್ತು. ಆದರೆ ಬಸವರಾಜ ಅರಬಗೊಂಡ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗುವ ಮೂಲಕ ಬಿಜೆಪಿ ನಿರಾಸೆ ಅನುಭವಿಸುವಂತಾಗಿದೆ. ಧಾರವಾಡ, ಉತ್ತರ ಕನ್ನಡ, ಗದಗ ಹಾಗೂ ಹಾವೇರಿ ಜಿಲ್ಲಾ ವ್ಯಾಪ್ತಿಯ ಹಾಲು ಒಕ್ಕೂಟದ ಒಟ್ಟು 12 ನಿರ್ದೇಶಕ ಸ್ಥಾನಕ್ಕೆ 6 ಜನ ಅವಿರೋಧವಾಗಿ ಆಯ್ಕೆಯಾಗಿದ್ದರೆ, ಉಳಿದವರು ಏ. 28ರಂದು ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ