ಕೋಳಿಕೇರಿ ಕೊಳಕು ಕೆರೆಯ ಅಳಲು


Team Udayavani, Dec 6, 2019, 10:40 AM IST

huballi-tdy-1

ಧಾರವಾಡ: ನಲವತ್ತೆರಡು ಎಕರೆ ವ್ಯಾಪ್ತಿಯ ಕೆರೆಯ ತುಂಬೆಲ್ಲಾ ಬರೀ ಚರಂಡಿ ನೀರಿನ ಗಬ್ಬು ನಾತ. ಈ ಚರಂಡಿ ನೀರಿನಲ್ಲಿಯೇ ಆವರಿಸಿದೆ ಕಸಕಳೆ. ಎಕರೆಯಷ್ಟು ಕೆರೆಯ ಒತ್ತುವರಿ. ಅಮೃತ ಯೋಜನೆಯ ಕಾಮಗಾರಿಯದ್ದೂ ಆಮೆಗತಿ. ಇದು ನಗರದ ವಾರ್ಡ್‌ ನಂ. 9ರ ಕೋಳಿಕೇರಿ ಕೆರೆಯ ಕಥೆವ್ಯಥೆ.

ಕೆರೆಗೆ ಹೊಂದಿರುವ ಜನ್ನತನಗರ, ಹೊಸಯಲ್ಲಾಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಈ ಕೆರೆಯ ಗಬ್ಬುನಾತ ಮೂಗಿಗೆ ತಟ್ಟಲಾರದೇ ಇರದು. ಈ ಭಾಗದಿಂದಷ್ಟೇ ಅಲ್ಲದೇ ಧಾರವಾಡದ ಬಹುತೇಕಒಳಚರಂಡಿ ನೀರೆಲ್ಲ ಬಂದು ಸೇರೋದು ಇಲ್ಲಿಯೇ. ಕೆರೆಯ ಸುತ್ತಲೂ ವಾಸಿಸುವ ಜನರ ಪಾಡಂತೂ ಕೇಳ್ಳೋದೇ ಬೇಡ. ಗಬ್ಬು ನಾತದ ಮಧ್ಯೆಯೇ ಜೀವನ ನಡೆಸುವ ಕೆರೆ ಹತ್ತಿರದ ನಿವಾಸಿಗಳಿಗೆ ಹಾವು, ಜೀವ ಜಂತುಗಳ ಕಾಟ ತಪ್ಪಿಲ್ಲ. ಕೆರೆ ಅಭಿವೃದ್ಧಿಗಾಗಿ ಸಾಕಷ್ಟು ಹೋರಾಟ ನಡೆದು ಒಂದಿಷ್ಟು ಯೋಜನೆ ಸಿದ್ಧಪಡಿಸಿದರೂ ಧೂಳು ತಿನ್ನುವಂತಾಗಿದೆ.

ಬೃಂದಾವನ ಯೋಜನೆ ನನೆಗುದಿಗೆ: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಈ ಕೆರೆಯನ್ನು ಬೃಂದಾವನ ಮಾಡಲು ಹಿಂದಿನ ಶಾಸಕರಾಗಿದ್ದ ವಿನಯ ಕುಲಕರ್ಣಿ ಕನಸು ಕಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ 23 ಕೋಟಿ ಯೋಜನೆ ಸಿದ್ಧಪಡಿಸಿದ್ದು, ಒಂದಿಷ್ಟು ಕಾಮಗಾರಿ ಕೈಗೊಳ್ಳಲು ಅಮೃತ ಯೋಜನೆಯಡಿ ಅನುದಾನ ಬಿಡುಗಡೆ ಮಾಡಿಸಿದ್ದರು. ಆದರೆ ಅವರ ಬಳಿಕ ಆಯ್ಕೆಯಾದ ಶಾಸಕ ಅಮೃತ ದೇಸಾಯಿ ಕೆರೆ ಅಭಿವೃದ್ಧಿಯತ್ತ ಲಕ್ಷ್ಯ ವಹಿಸದ ಪರಿಣಾಮ ಕಾಮಗಾರಿಗಳು ಹಳ್ಳ ಹಿಡಿಯುವಂತಾಗಿದೆ. ಇದಲ್ಲದೇ 23 ಕೋಟಿ ಮೊತ್ತದ ಬೃಂದಾವನ ಯೋಜನೆಯೂ ಧೂಳು ತಿನ್ನುವಂತಾಗಿದೆ.

ಕಾಮಗಾರಿಗಳ ಆಮೆಗತಿ: ಅಮೃತ ಯೋಜನೆಯಡಿ 1.95 ಕೋಟಿ ರೂ.ಗಳಲ್ಲಿ ಕೆರೆಯ ಅಭಿವೃದ್ಧಿ ಕೆಲಸ ಆರಂಭಿಸಿ ಒಂದೂವರೆ ವರ್ಷವಾದರೂ ಕಾಮಗಾರಿಗಳಿಗೆ ವೇಗ ಸಿಕ್ಕಿಲ್ಲ. ಈವರೆಗೆ ಶೇ.30 ಕಾಮಗಾರಿಯಷ್ಟೇ ಪೂರ್ಣಗೊಂಡಿದೆ.

ಕಾಮಗಾರಿಗಳಿಗೆ ವೇಗ ನೀಡುವ ಕೆಲಸ ಜನಪ್ರತಿನಿಧಿಗಳಿಂದ ಆಗುತ್ತಿಲ್ಲ. ಪಾಲಿಕೆ ಸದಸ್ಯರು ಮಾಜಿ ಆಗಿರುವ ಕಾರಣ ಇತ್ತ ಲಕ್ಷ್ಯ ವಹಿಸದೇ ಸುಮ್ಮನಾಗಿದ್ದರೆ, ಶಾಸಕರೂ ಗಮನ ಹರಿಸುತ್ತಿಲ್ಲ. ಕಾಮಗಾರಿಗಳಿಗೆ ವೇಗ ದೊರೆಯುವಂತೆ ಮಾಡುವುದರ ಜೊತೆಗೆ ಬೃಂದಾವನ ಯೋಜನೆಗೆ ಮತ್ತೆ ಚಾಲನೆ ಸಿಗುವಂತೆ ಮಾಡಬೇಕಿದೆ. ಕೆರೆ ಒತ್ತುವರಿ ತೆರವು ಮಾಡಿ, ಒಳಚರಂಡಿ ನೀರು ಸೇರದಂತೆ ಅಥವಾ ಚರಂಡಿ ನೀರು ಶುದ್ಧೀಕರಿಸಿ ಬಿಡುವಂತೆ ಮಾಡಲು ಘಟಕ ನಿರ್ಮಾಣಕ್ಕೆ ಬೇಡಿಕೆ ಇದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ನಿಟ್ಟಿನಲ್ಲಿ ಇಚ್ಛಾಶಕ್ತಿ ತೋರಬೇಕಿದೆ.

33 ಗುಂಟೆ ಜಾಗ ಒತ್ತುವರಿ: ಕೆರೆಯ 42 ಎಕರೆಯಲ್ಲಿ 33 ಗುಂಟೆ ಜಾಗ ಒತ್ತುವರಿ ಆಗಿದ್ದು, ಇದು ತೆರವಾಗಬೇಕಿದೆ. ಪಾಲಿಕೆ ಒಂದು ವರ್ಷದಿಂದ ಸರ್ವೇ ಮಾಡುತ್ತಿದ್ದರೂ ಆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಕೆರೆಗೆ ಅಂತಿಮ ಗೆರೆ ಹಾಕಲು ಸಿಟಿ ಸರ್ವೇ ಅಧಿಕಾರಿಗಳ ಪೂರ್ಣ ಸಹಕಾರ ಬೇಕಿದೆ. ಸದ್ಯ ಕೆರೆಯ ಸ್ಮಶಾನ ಭಾಗದ ಕಡೆ 17 ಮನೆಗಳು ಕೆರೆಯ ಜಾಗದಲ್ಲಿ ನಿರ್ಮಾಣ ಆಗಿದ್ದು, ಕರೆಮ್ಮನ ಗುಡಿ ಹಾಗೂ ಹೊಸಯಲ್ಲಾಪುರ ಕಡೆ ಗುರುತಿಸುವ ಕಾರ್ಯ ಸಾಗಿದೆ. ಆದಷ್ಟು ಬೇಗ ಸರ್ವೇ ಕಾರ್ಯ ಮುಗಿಸಿ ಒತ್ತುವರಿ ತೆರವು ಕೆಲಸವೂ ಆಗಬೇಕಿದೆ.

ಅಮೃತ ಯೋಜನೆಯಡಿ 1.95 ಕೋಟಿ ವೆಚ್ಚದಲ್ಲಿ ಕಾಮಗಾರಿ
ಕೈಗೊಂಡು ಕೆರೆ ಅಭಿವೃದ್ಧಿ ಮಾಡಲಾಗುತ್ತಿದೆ. ಈವರೆಗೆ ಶೇ.30 ಕಾಮಗಾರಿ ಆಗಿದೆ. ಕೆರೆಯ ಒತ್ತುವರಿ ಗುರುತಿಸಲಾಗಿದ್ದು,
ಸರ್ವೇ ಅಂತಿಮ ಹಂತದಲ್ಲಿದೆ. ಅದು ಪೂರ್ಣಗೊಂಡ ಬಳಿಕ ಒತ್ತುವರಿ ಮಾಡಿದವರಿಗೆ ನೋಟಿಸ್‌  ಜಾರಿಗೊಳಿಸಿ ಒತ್ತುವರಿ ತೆರವು ಕಾರ್ಯಾಚರಣೆಗೂ  ಚಾಲನೆ ನೀಡಲಾಗುವುದು.
ಸುರೇಶ ಇಟ್ನಾಳ, -ಆಯುಕ್ತ, ಹು-ಧಾ ಮಹಾನಗರ ಪಾಲಿಕೆ

 

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.