ಕುಪ್ಪೇಲೂರ್ ಲಖನೌ ಪೊಲೀಸರ ವಶಕ್ಕೆ
Team Udayavani, Nov 10, 2019, 11:01 AM IST
ಹುಬ್ಬಳ್ಳಿ: ಉತ್ತರ ಪ್ರದೇಶದ ಬಿಜೆಪಿ ಮುಖಂಡ ಅಖೀಲೇಶ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಹಳೇಹುಬ್ಬಳ್ಳಿ ಅರವಿಂದ ನಗರ ನಿವಾಸಿ ಮಹಮ್ಮದಜಾಫರಸಾದಿಕ್ ಕುಪ್ಪೇಲೂರ್ನನ್ನು ಶನಿವಾರ ಲಖನೌ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆಗೆ ಲಖನೌಗೆ ಕರೆದೊಯ್ದಿದ್ದಾರೆ.
ಅಖೀಲೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸೆ. 21ರಂದು ಆಂತರಿಕ ಭದ್ರತಾ ವಿಭಾಗ (ಐಎಸ್ಡಿ)ದವರು ವಶಕ್ಕೆ ಪಡೆದಿದ್ದರು. ಈಗ ಲಖನೌ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿ ಮಹಮ್ಮದಜಾಫರಸಾದಿಕ್ನನ್ನು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ರೈಲ್ವೆ ವರ್ಕ್ಶಾಪ್ನ ಎಲೆಕ್ಟ್ರಿಕಲ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಮ್ಮದಜಾಫರಸಾದಿಕ್ನನ್ನು ಸೆ. 21ರಂದು ಐಎಸ್ಡಿಯವರು ವಶಕ್ಕೆ ಪಡೆದು, ಬೆಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದವರಿಗೆ ಒಪ್ಪಿಸಿದ್ದರು.
ಅವರು ಸೆ. 22ರಂದು ವಿಚಾರಣೆ ಮಾಡಿ ಕಳುಹಿಸಿದ್ದರು. ಈ ವೇಳೆ ಇದೇ ಅಖೀಲೇಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಗ್ಪುರದಲ್ಲಿ ಬಂಧನವಾಗಿರುವ ಪ್ರಮುಖ ಆರೋಪಿ ಸಯ್ಯದ್ ಆಸಿಂ ಅಲಿ ಜೊತೆ ಮಹಮ್ಮದಜಾಫರಸಾದಿಕ್ ನಿಕಟ ಸಂಪರ್ಕ ಹೊಂದಿದ್ದ ಮಾಹಿತಿ ತನಿಖಾ ತಂಡಕ್ಕೆ ದೊರೆಕಿತ್ತು. ಅಲ್ಲದೆ ಈತ ಸಹ ಈ ಪ್ರಕರಣದಲ್ಲಿ ಭಾಗಿಯಾಗಿದ್ದನೆಂಬ ಅನುಮಾನದಡಿ ಲಖನೌ ಪೊಲೀಸರು ಮಹಮ್ಮದಜಾಫರಸಾದಿಕ್ನನ್ನು ಶನಿವಾರ ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿ, ವೈದ್ಯಕೀಯ ತಪಾಸಣೆಗೊಳಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಲಖನೌಗೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ರೈಲ್ವೆ ಇಲಾಖೆಯು ಮಹಮ್ಮದಜಾಫರಸಾದಿಕ್ನನ್ನು ಸೆ. 23ರಂದು ಸೇವೆಯಿಂದ ಅಮಾನತುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?