ಕುರುಕ್ಷೇತ್ರ ಸಂಭಾವನೆ ಸಂತ್ರಸ್ತರಿಗೆ: ನಿಖೀಲ್
•ಪ್ರವಾಹ ಪೀಡಿತರ ನಿವಾಸಗಳಿಗೆ ಭೇಟಿ •ಪಕ್ಷದಿಂದ ಪರಿಹಾರ ವಿತರಿಸುವ ಭರವಸೆ
Team Udayavani, Aug 13, 2019, 9:49 AM IST
ಧಾರವಾಡ: ನಗರದಲ್ಲಿ ಸಂತ್ರಸ್ತ ಅಂಧ ಮಕ್ಕಳಿಗೆ ನಿಖೀಲ್ ಕುಮಾರಸ್ವಾಮಿ ಅಗತ್ಯ ವಸ್ತುಗಳನ್ನು ವಿತರಿಸಿದರು.
ಹುಬ್ಬಳ್ಳಿ: ಕುರುಕ್ಷೇತ್ರ ಸಿನಿಮಾದ ನನ್ನ ಸಂಭಾವನೆಯನ್ನು ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ನೀಡುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ಚಿತ್ರನಟ ನಿಖೀಲ್ ಕುಮಾರಸ್ವಾಮಿ ಹೇಳಿದರು.
ದೇವಿನಗರದ ಪ್ರವಾಹ ಪೀಡಿತರ ನಿವಾಸಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾಗಿ ಅಪಾರ ಹಾನಿಯಾಗಿದೆ. ಜನರು ಮನೆ ಕಳೆದುಕೊಂಡಿದ್ದಾರೆ. ಬೆಳೆ ಕೊಚ್ಚಿ ಹೋಗಿದೆ. ಜನರ ಬದುಕು ನರಕ ಸದೃಶವಾಗಿದೆ ಎಂದರು.
ಪ್ರವಾಹಕ್ಕೀಡಾದವರಿಗೆ ಜೆಡಿಎಸ್ ಯುವ ಘಟಕದಿಂದ ಅಗತ್ಯ ನೆರವು ನೀಡಲಾಗುತ್ತಿದೆ. ಆಹಾರ ಧಾನ್ಯ, ಬ್ಲಾಂಕೆಟ್, ದಿನಬಳಕೆ ಸಾಮಗ್ರಿ ನೀಡಲಾಗುತ್ತಿದೆ. ಇಂಥ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಎಲ್ಲರೂ ಒಗ್ಗಟ್ಟಿನಿಂದ ಜನರ ನೋವಿಗೆ ಸ್ಪಂದಿಸಬೇಕು. ರಾಜ್ಯದ ಸ್ಥಿತಿಗತಿ ಪರಿಶೀಲಿಸಿ ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಜನರ ಕಣ್ಣೀರೊರೆಸುವ ಕಾರ್ಯವಾಗಲಿ: ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಅಧಿಕಾರ ಪಡೆಯುವ ಮುನ್ನ ಇದ್ದ ತೀವ್ರತೆ ಈಗ ಬಿಜೆಪಿಯವರಿಗೆ ಇಲ್ಲ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಮಾಡಬೇಕಿದೆ. ಉಕ ಜನರ ಕಣ್ಣೀರೊರೆಸುವ ಕೆಲಸವನ್ನು ಸರಕಾರ ಮಾಡಬೇಕು. ಬೆಳೆ ಹಾನಿಗೆ ತ್ವರಿತಗತಿಯಲ್ಲಿ ರೈತರಿಗೆ ಪರಿಹಾರ ವಿತರಣೆಯಾಗಬೇಕು. ಸರಕಾರ ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ನಿಖೀಲ್ ಕುಮಾರಸ್ವಾಮಿ ದೇವಿನಗರದಲ್ಲಿ ಪ್ರವಾಹ ಪೀಡಿತರ ನೋವನ್ನು ಆಲಿಸಿದರು. ಪಕ್ಷದ ವತಿಯಿಂದ ಪರಿಹಾರ ಸಾಮಗ್ರಿ ವಿತರಿಸಲಾಗುವುದು ಎಂಬ ಭರವಸೆ ನೀಡಿದರು. ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಅವರು ಮಳೆಯಿಂದಾಗಿ ಶಾಲಾ ಸಾಮಗ್ರಿ ಕಳೆದುಕೊಂಡ ಮಕ್ಕಳಿಗೆ ಪುಸ್ತಕ ಖರೀದಿಗೆ ಹಣ ನೀಡಿದರು.
ಮುಖಂಡರಾದ ರಾಜಣ್ಣ ಕೊರವಿ, ನವೀನ ಮುನಿಯಪ್ಪನವರ, ಶ್ರೀಕಾಂತ ಬಡವಣ್ಣವರ, ಗಣಿ ಗಿರಣಿ, ನಾಗನಗೌಡ, ರಾಜು ಪೂಜಾರಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು