ಕೆವಿಜಿ: 25 ಸಾವಿರ ಕೋಟಿ ವಹಿವಾಟು ದಾಖಲೆ

• 9 ಜಿಲ್ಲೆಗಳಲ್ಲಿ 636 ಶಾಖೆಯನ್ನು ಹೊಂದಿರುವ ಬ್ಯಾಂಕ್‌• ಕಾರ್ಯ ನಿರ್ವಹಣಾ ಲಾಭ 203.26 ಕೋಟಿ ರೂ.

Team Udayavani, Jun 19, 2019, 1:47 PM IST

hubali-tdy-3..

ಧಾರವಾಡ: ನಗರದ ಕೆವಿಜಿ ಬ್ಯಾಂಕ್‌ನಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕ್‌ ಅಧ್ಯಕ್ಷ ಎಸ್‌.ರವೀಂದ್ರನ್‌ ಮಾತನಾಡಿದರು.

ಧಾರವಾಡ : ಸತತ ಐದು ವರ್ಷದ ಬರಗಾಲದ ಮಧ್ಯೆಯೂ 9 ಜಿಲ್ಲೆಗಳಲ್ಲಿ 636 ಶಾಖೆ ಹೊಂದಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ 2018-19ನೇ ಸಾಲಿನಲ್ಲಿ ಶೇ.7.79 ಪ್ರಗತಿ ದರದಲ್ಲಿ 25,257 ಕೋಟಿ ರೂ. ವಹಿವಾಟು ದಾಖಲಿಸಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಎಸ್‌.ರವೀಂದ್ರನ್‌ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2017-18 ಸಾಲಿನಲ್ಲಿ ಒಟ್ಟು 23,432 ಕೋಟಿ ರೂ.ಗಳ ಮೇಲೆ 1825 ನಿವ್ವಳ ಹೆಚ್ಚಳ ಸಾಧಿಸಿತ್ತು. ಈ ವರ್ಷ ಬ್ಯಾಂಕಿನ ಕಾರ್ಯ ನಿರ್ವಹಣಾ ಲಾಭ 203.26 ಕೋಟಿ ರೂ.ಗಳಾಗಿದ್ದು, ಈ ಪೈಕಿ ಉಪಬಂಧ ಹಾಗೂ ಆದಾಯ ತೆರಿಗೆಯನ್ನೂ ಪಾವತಿಸಿ ಬ್ಯಾಂಕ್‌ 50.12 ಕೋಟಿ ರೂ. ನಿಕ್ಕಿ ಲಾಭ ಗಳಿಸಿದೆ. ಈ ಮೂಲಕ ಬ್ಯಾಂಕಿನ ನಿವ್ವಳ ಸಂಪತ್ತು 1693 ಕೋಟಿ ರೂ.ಗಳಿಂದ 1743 ಕೋಟಿ ರೂ.ಗಳಿಗೆ ವೃದ್ಧಿಸಿದೆ ಎಂದರು.

ಠೇವಣಿ ಸಂಗ್ರಹಣೆಯಲ್ಲಿ ಶೇ.7.34 ಪ್ರಗತಿ ದರದಲ್ಲಿ 13,895 ಕೋಟಿ ರೂ.ಮಟ್ಟವನ್ನು ತಲುಪುವುದರ ಜತೆಗೆ ಗ್ರಾಹಕರ ಸಂಖ್ಯೆಯನ್ನೂ ಹೆಚ್ಚಿಸಿಕೊಂಡಿದೆ. ಅದು ಈಗ 79 ಲಕ್ಷ ಮೀರಿದೆ. ಬ್ಯಾಂಕ್‌ ಸಾಲ ಹಾಗೂ ಮುಂಗಡಗಳು ಶೇ.8.34 ಪ್ರಗತಿ ದರದಲ್ಲಿ 11,362 ಕೋಟಿ ರೂ.ಮಟ್ಟ ತಲುಪಿದೆ. ಕಳೆದ ಐದು ವರ್ಷದಿಂದ ಸತತ ಬರ ಬ್ಯಾಂಕಿನ ಸಾಲ ವಸೂಲಾತಿಯ ಮೇಲೆ ಪರಿಣಾಮ ಬೀರಿದ್ದರೂ ಅನುತ್ಪಾದಕ ಸಾಲದ ಮೇಲೆ ಬ್ಯಾಂಕ್‌ ಉತ್ತಮ ನಿಯಂತ್ರಣ ಸಾಧಿಸಿದೆ ಎಂದರು.

ಕಳೆದ ಸಾಲಿನಲ್ಲಿ ಬ್ಯಾಂಕ್‌ ಕಿಸಾನ್‌ ಕ್ರೆಡಿಟ್ ಕಾರ್ಡ್‌ ಯೋಜನೆಯಡಿ 1,18,867 ರೈತರಿಗೆ 2021 ಕೋಟಿ ರೂ. ಸಾಲ ವಿತರಿಸಿದ್ದು, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಲ್ಲಿ ಬ್ಯಾಂಕ್‌ 65,000 ಉದ್ಯೋಗಾಕಾಂಕ್ಷಿಗಳಿಗೆ 951 ಕೋಟಿ ರೂ. ಸಾಲ ವಿತರಿಸಿದೆ. ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ 709 ಫಲಾನುಭವಿಗಳಿಗೆ 64.18 ಕೋಟಿ ರೂ. ಸಾಲ ವಿತರಿಸಿದೆ. ಇನ್ನೂ ಅಟಲ್ ಪೆನ್ಷನ್‌ ಯೋಜನೆಯಡಿ ಪಿಂಚಣಿಗಾಗಿ ಇಲ್ಲಿಯವರೆಗೆ 53,862 ಜನರನ್ನು ನೋಂದಣಿಗೆ ಒಳಪಡಿಸಲಾಗಿದೆ. ಬ್ಯಾಂಕಿನ ಈ ಕಾರ್ಯ ಪರಿಗಣಿಸಿ ಭಾರತೀಯ ಪಿಂಚಣಿ ಪ್ರಾಧಿಕಾರ ಬ್ಯಾಂಕಿಗೆ ರಾಷ್ಟ್ರಮಟ್ಟದ ನಾಲ್ಕು ಪ್ರಶಸ್ತಿಗಳನ್ನು ನೀಡಿದೆ ಎಂದರು.

ಸಾಲದ ಬಡ್ಡಿಯನ್ನು ಸಾಕಷ್ಟು ತಗ್ಗಿಸಲಾಗಿದ್ದು, ಹೊಸ ಆರ್ಥಿಕ ವರ್ಷದ ಸಾಲಿನಲ್ಲಿ ಕೃಷಿ ಪ್ರವಾಸೋದ್ಯಮ ಒಳಗೊಂಡು 10 ನೂತನ ಸಾಲ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅವುಗಳ ಜತೆಗೆ ಗೃಹಸಾಲ, ಸಣ್ಣ ಮತ್ತು ಮಧ್ಯಮ ತರಗತಿಯ ಕೈಗಾರಿಕೆ, ಕೃಷಿ ರಂಗದಲ್ಲಿ ಹೂಡಿಕೆ ಸಾಲ ಸೇರಿ ಸಮಗ್ರ ಕೃಷಿ ಪದ್ಧತಿಗೆ ಈ ಆರ್ಥಿಕ ವರ್ಷದಲ್ಲಿ ಆದ್ಯತೆ ನೀಡಲಾಗುವುದು ಎಂದರು.

ಬ್ಯಾಂಕಿನ ಮಹಾ ಪ್ರಬಂಧಕ ಐ.ಜಿ.ಕುಮಾರ ಗೌಡ, ಸಹಾಯಕ ಮಹಾ ಪ್ರಬಂಧಕ ಶ್ರೀಕಾಂತ ಹೆಗಡೆ, ಮುಖ್ಯ ಪ್ರಬಂಧಕ ಕೆ.ಟಿ.ಭಟ್, ಹಿರಿಯ ವ್ಯವಸ್ಥಾಪಕ ಉಲ್ಲಾಸ ಗುನಗಾ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.