ಮೋಡ ಲಭ್ಯತೆ ಕೊರತೆ; ಮೊದಲ ದಿನ ನಡೆಯದ ವರ್ಷಧಾರೆ ಬಿತ್ತನೆ

•ಉಕ ವ್ಯಾಪ್ತಿಯಲ್ಲಿ ಕಾರ್ಯಾಚರಣೆ•ನಿರ್ದಿಷ್ಟ ದಿನ ನಿಗದಿ ಇಲ್ಲ

Team Udayavani, Aug 2, 2019, 1:13 PM IST

huballi-tdy-3

ಹುಬ್ಬಳ್ಳಿ: ಮೋಡ ಬಿತ್ತನೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ದೀಪಾ ಚೋಳನ್‌.

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯಾಗಿರುವ ಭಾಗದಲ್ಲಿ ಮೋಡ ಬಿತ್ತನೆ ಮಾಡಿ ಮಳೆ ಸುರಿಸುವ ರಾಜ್ಯ ಸರ್ಕಾರದ ವರ್ಷಧಾರೆ ಯೋಜನೆಗೆ ಗುರುವಾರ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಮೋಡಗಳ ಲಭ್ಯತೆ ಕೊರತೆ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಮಾಡಲಿಲ್ಲ.

ಬೆಳಗಾವಿ ವಿಭಾಗದ ಪ್ರಭಾರ ಪ್ರಾದೇಶಿಕ ಆಯುಕ್ತರಾದ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್‌ ಮೋಡ ಬಿತ್ತನೆಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿದರು. ಕಾರ್ಯಾಚರಣೆಗೆ ಸಂಬಂಧಿಸಿದ ತಾಂತ್ರಿಕ ಮಾಹಿತಿಯನ್ನು ಸಿಬ್ಬಂದಿಯಿಂದ ಪಡೆದರು.

ಸುದ್ದಿಗಾರರೊಂದಿಗೆ ಮಾತನಾಡಿದ ದೀಪಾ ಚೋಳನ್‌, ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಯೋಜನೆ ಕೈಗೊಳ್ಳಲಾಗಿದ್ದು, ಬೆಂಗಳೂರಿನ ಜಿಕೆವಿಕೆ ಹಾಗೂ ಗದಗದಲ್ಲಿರುವ ರಡಾರ್‌ ಕೇಂದ್ರದ ಮಾಹಿತಿ ಆಧರಿಸಿ ಮೋಡ ಬಿತ್ತನೆ ಕಾರ್ಯ ಮಾಡಲಾಗುತ್ತದೆ. ಗದಗಿನಲ್ಲಿರುವ ರಡಾರ್‌ ಉತ್ತರ ಕರ್ನಾಟಕದ ಕೆಲ ಭಾಗವನ್ನು ಕೇಂದ್ರೀಕರಿಸಿಕೊಂಡು ಕಾರ್ಯ ನಿರ್ವಹಿಸುತ್ತದೆ. ಈ ಭಾಗದ ಯಾವ ಪ್ರದೇಶದಲ್ಲಿ ಮೋಡಗಳ ಲಭ್ಯತೆ ಇದೆ ಎಂಬುದನ್ನು ಗುರುತಿಸಿ ಮೋಡ ಬಿತ್ತನೆಗೆ ಸೂಚನೆ ನೀಡುತ್ತದೆ. ಇದರ ಆಧಾರದ ಮೇಲೆ ವಿಮಾನ ಮೋಡ ಬಿತ್ತನೆ ಕಾರ್ಯ ಮಾಡುತ್ತದೆ ಎಂದರು.

ಒಂದು ತಿಂಗಳು ತಡವಾಗಿ ಮಳೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ ಮಾತ್ರ ಹೆಚ್ಚು ಮಳೆಯಾಗಿದೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಜಿಲ್ಲೆಯ ಕುಂದಗೋಳ ಹಾಗೂ ನವಲಗುಂದದಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದೆ. ವಾರ್ಷಿಕ ಸರಾಸರಿ ನೋಡಿದಾಗ ಶೇ.20 ಮಳೆ ಕಡಿಮೆಯಾಗಿದೆ. ಇದೀಗ ಆಗಿರುವ ಮಳೆ ಕೃಷಿಗೆ ಪೂರಕವಾಗಿದೆ. ಆದರೆ ಕುಡಿಯುವ ನೀರು ಹಾಗೂ ಬೇಸಿಗೆಯಲ್ಲಿನ ಸಮಸ್ಯೆ ನೀಗಿಸುವಷ್ಟು ಮಳೆಯಾಗಿಲ್ಲ. ಬಹುತೇಕ ಕೆರೆ ಇನ್ನೂ ತುಂಬಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗೆ ಮುಂದಾಗಿದ್ದು, ಎಷ್ಟು ದಿನಗಳ ಕಾಲ ಮೋಡ ಬಿತ್ತನೆ ನಡೆಯುತ್ತಿದೆ ಎನ್ನುವುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಗದುಗಿನಲ್ಲಿರುವ ರಡಾರ್‌ ಹಾಗೂ ಬಿತ್ತನೆಗೆ ಪೂರಕವಾದ ಮೋಡಗಳ ಲಭ್ಯತೆ ಮೇಲೆ ಕಾರ್ಯ ನಡೆಯಲಿದೆ ಎಂದರು.

ವಿಮಾನದ ಪೈಲಟ್ ಜೇಜ್‌ ಬೇನ್‌ ಮಾತನಾಡಿ, ಮೋಡ ಬಿತ್ತನೆ ವೈಜ್ಞಾನಿಕ ಪ್ರಕ್ರಿಯೆಯಾಗಿದೆ. ಮೋಡಕಟ್ಟದ ವಾತಾವರಣ ನೋಡಿಕೊಂಡು ಮಳೆ ಸುರಿಸಬಲ್ಲ ಮೋಡಗಳನ್ನು ಗುರುತಿಸಿ ಸಿಲ್ವರ್‌ ಐಯೋಡೇಡ್‌ ಭರಿತ ಫ್ಲೈರ್ಯಸ್‌ಗಳನ್ನು ಉರಿಸಲಾಗುತ್ತದೆ. ಇದರಿಂದ ಮುಂದೆ ಹೋಗುವ ಮೋಡಗಳನ್ನು ತಡೆದು ನಮ್ಮ ನಿರೀಕ್ಷಿತ ನಿರ್ದಿಷ್ಟ ಪ್ರದೇಶದ ಆಸುಪಾಸಿನಲ್ಲಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಬಿತ್ತನೆ ಮಾಡಿದ ಇಷ್ಟೇ ಸಮಯಕ್ಕೆ ಮಳೆಯಾಗುತ್ತದೆ ಎಂಬುವುದನ್ನು ಯಾವುದೇ ಕಾರಣಕ್ಕೂ ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಪ್ರೊಬೆಷನರಿ ಐಎಎಸ್‌ ಅಧಿಕಾರಿ ಆಕೃತಿ ಬನ್ಸಾಲ್, ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ಅನುಜ್‌ ಠಾಕ್ರೆ, ಹುಬ್ಬಳ್ಳಿ ಗ್ರಾಮೀಣ ಅಪರ ತಹಶೀಲ್ದಾರ್‌ ಪ್ರಕಾಶ ನಾಸಿ, ಕ್ಯಾತಿ ಕ್ಲೈಮೇಟ್ ಮಾಡಿಫಿಕೇಷನ್‌ ಸಂಸ್ಥೆಯ ಅತೀಶ್‌ ಓದುಗೌಡರ ಇದ್ದರು.

ಹಾರಲಿಲ್ಲ ವಿಮಾನ: ಜು.30ರಂದು ಮೋಡ ಬಿತ್ತನೆ ವಿಮಾನ ಇಲ್ಲಿನ ಏರ್‌ಪೋರ್ಟ್‌ ಗೆ ಆಗಮಿಸಿದೆ. ಜು.31ರಂದು ಬಾಗಲಕೋಟೆ ಜಿಲ್ಲೆಯ ವಿವಿಧೆಡೆ ಮೋಡ ಬಿತ್ತನೆ ಮಾಡಿದ್ದು, ಕೆಲವೆಡೆ ಮಳೆಯಾಗಿದೆ ಎಂದು ಹೇಳಲಾಗಿದೆ. ಆದರೆ ಸಂಕೇತಿಕವಾಗಿ ಚಾಲನೆ ನೀಡಿದ ಗುರುವಾರದಂದು ಮೋಡ ಬಿತ್ತನೆಗೆ ಪೂರಕವಾದ ಮೋಡಗಳ ಲಭ್ಯತೆಯಿರದ ಕಾರಣ ಗದಗ ರಡಾರ್‌ನಿಂದ ಯಾವುದೇ ಸೂಚನೆ ಬಾರದ ಹಿನ್ನೆಲೆಯಲ್ಲಿ ವಿಮಾನ ಹಾರಾಟ ಮಾಡಲಿಲ್ಲ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.