ಸೂಪರ್‌ ಮಾರ್ಕೆಟ್‌ಗಿಲ್ಲ ಸ್ಮಾರ್ಟ್‌ ಭಾಗ್ಯ

|ಪ್ರಸ್ತಾವನೆಗಳಿಗೆ ಸಿಗದ ಮನ್ನಣೆ |ಕೊಳಚೆ ಗೂಡಾದ ಹಾಲಗೇರಿ|ಹುಬ್ಬಳ್ಳಿಗಿರುವ ಪ್ರೀತಿ ಧಾರವಾಡಕ್ಕಿಲ್ಲ

Team Udayavani, Dec 4, 2020, 12:51 PM IST

ಸೂಪರ್‌ ಮಾರ್ಕೆಟ್‌ಗಿಲ್ಲ ಸ್ಮಾರ್ಟ್‌ ಭಾಗ್ಯ

ಧಾರವಾಡ: ಹುಬ್ಬಳ್ಳಿಯ ಸೂಪರ್‌ ಮಾರ್ಕೆಟ್‌ (ಜನತಾ ಬಜಾರ್‌) ಹು-ಧಾ ಸ್ಮಾರ್ಟ್‌ ಸಿಟಿ ಯೋಜನೆಯಡಿ ಅತ್ಯಾಧುನಿಕ ಮಾರುಕಟ್ಟೆಯಾಗಿ ಅಭಿವೃದ್ಧಿಯತ್ತ ಸಾಗಿದರೆ ಧಾರವಾಡದ ಸೂಪರ್‌ ಮಾರುಕಟ್ಟೆ ಮಾತ್ರ ಪಾಪರ್‌ ಆಗಿಯೇ ಉಳಿಯುವಂತಾಗಿದೆ.

ನಾಲ್ಕು ದಶಕಗಳ ಇತಿಹಾಸ ಹೊಂದಿರುವ ಇಲ್ಲಿನ ಸೂಪರ್‌ ಮಾರುಕಟ್ಟೆ ಅಭಿವೃದ್ಧಿಗಾಗಿ ಅದೆಷ್ಟೋ ಸೂಪರ್‌ ಯೋಜನೆಗಳು ಸಿದ್ಧಗೊಂಡಿದ್ದವು. ಆದರೆ ಅವೆಲ್ಲವೂ ಪಾಪರ್‌ ಆಗಿವೆ. ಸ್ಮಾರ್ಟ್‌ ಸಿಟಿ ಯೋಜನೆಯಡಿ ಸ್ಮಾರ್ಟ್‌ ಆಗುವ ನಿರೀಕ್ಷೆಯೂ ಹುಸಿಯಾಗಿದೆ. ಅತಿಕ್ರಮಣ ಆಗುತ್ತಲೇ ಸಾಗಿರುವ ಈ ಮಾರುಕಟ್ಟೆಯ ಅಭಿವೃದ್ಧಿಗೆ ಜನಪ್ರತಿನಿಧಿಗಳುಹಾಗೂ ಪಾಲಿಕೆ ಇಚ್ಛಾಶಕ್ತಿ ಕೊರತೆ ಎದ್ದುಕಾಣುತ್ತಿದೆ. ವ್ಯಾಪಾರಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಈವರೆಗೂ ಅಭಿವೃದ್ಧಿ ಕಾಣದಂತಾಗಿದೆ.

ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ :  ಚಂದ್ರಕಾಂತ ಬೆಲ್ಲದ ಶಾಸಕರಾಗಿದ್ದ ಕಾಲದಿಂದ ಹಿಡಿದು ಅವರ ಮಗ ಅರವಿಂದ ಬೆಲ್ಲದ 2ನೇ ಸಲ ಶಾಸಕರಾಗುವ ವರೆಗೂ ಮಾರುಕಟ್ಟೆ ಅಭಿವೃದ್ಧಿ ಮಾತು ಕೇಳಿಬರುತ್ತಿದೆಯೇ ಹೊರತುಅಭಿವೃದ್ಧಿ ಕಾಣದಂತಾಗಿದೆ. ಪೂರ್ಣಾ ಪಾಟೀಲ, ಶಿವು ಹಿರೇಮಠ ಸೇರಿದಂತೆ ಧಾರವಾಡದವರೇ ಮೇಯರ್‌ ಆಗಿ ಹೋದರೂ ಮಾರುಕಟ್ಟೆ ಸುಧಾರಣೆ ಕಂಡಿಲ್ಲ. ನಗರಾಭಿವೃದ್ಧಿ ಸಚಿವರು ಮಾರುಕಟ್ಟೆಗೆ ಭೇಟಿ ನೀಡಿದ್ದರೂ ಯೋಜನೆಗಳಿಗೆ ಅನುಮೋದನೆನೀಡಿಲ್ಲ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿಸಚಿವ ಜಗದೀಶ ಶೆಟ್ಟರ ಸಾಕಷ್ಟು ಸಲ ಭೇಟಿ ನೀಡಿದ್ದು, ಇವರಾದರೂ ಆಸಕ್ತಿ ತೋರುವರೇ ನೋಡಬೇಕಿದೆ.

ಸಿಗದ ಮನ್ನಣೆ :  ಧಾರವಾಡದವರೇ ಆಗಿದ್ದ ಐ.ಎಂ. ಜವಳಿ ಮೇಯರ್‌ ಆಗಿದ್ದ ಸಮಯಲ್ಲಿ ಮಾರುಕಟ್ಟೆ ಅಭಿವೃದ್ಧಿಗೆ ಯತ್ನಿಸಿದ್ದರು. 1995ರಲ್ಲಿ 10 ಕೋಟಿ ಮೀಸಲಿಟ್ಟು, ಪಾಲಿಕೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಯೋಜನೆ ಜಾರಿಯೇ ಆಗಲಿಲ್ಲ. ಸರ್ಕಾರಿ-ಖಾಸಗಿ ಸಹಭಾಗಿತ್ವದಡಿಸೂಪರ್‌ ಮಾರುಕಟ್ಟೆ ನಿರ್ಮಿಸಲು ಯೋಚಿಸಲಾಗಿತ್ತು. ಇದಕ್ಕೂ ಸಂಬಂಧಪಟ್ಟವರು ಆಸಕ್ತಿ ತೋರಲಿಲ್ಲ. ಏಳು ಅಂತಸ್ತಿನ ಮಾರುಕಟ್ಟೆ ಕಟ್ಟಡ ನಿರ್ಮಿಸಲು 2017ರಲ್ಲಿ ನೀಲನಕ್ಷೆ ಸಿದ್ಧಪಡಿಸಲಾಗಿತ್ತು. ಯೋಜನೆ ಗಾತ್ರ 146 ಕೋಟಿಯಾದರೆ

ನಿರ್ಮಾಣ ವೆಚ್ಚ 259 ಕೋಟಿಗೆ ಏರಿಕೆಯಾಗಿತ್ತು. ಈ ಯೋಜನೆಗೂ ಅನುಮೋದನೆ ದೊರೆಯದೇ ಸರ್ಕಾರದ ಮಟ್ಟದಲ್ಲಿಯೇ ಉಳಿದುಬಿಟ್ಟಿತು. ಹು-ಧಾ ಸ್ಮಾಟ್‌ ಸಿಟಿ ಯೋಜನೆಯಡಿ 275 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೂ ಮನ್ನಣೆ ಸಿಗಲಿಲ್ಲ.

 ಗಟಾರ-ಒಳರಸ್ತೆ ನಿರ್ಮಾಣವೂ ವಿಳಂಬ :  98 ಲಕ್ಷ ಹಾಗೂ 31 ಲಕ್ಷ ರೂ.ಗಳ ಎರಡು ಪ್ರತ್ಯೇಕ ಕಾಮಗಾರಿಗಳಡಿ ಮಾರುಕಟ್ಟೆಯ ನಾಲ್ಕು ಒಳರಸ್ತೆಗಳ ಸುಧಾರಣೆ, ಗಟಾರ ನಿರ್ಮಾಣಕ್ಕೆ ವರ್ಷದ ಆರಂಭದಲ್ಲೇ ಶಾಸಕ ಅರವಿಂದ ಬೆಲ್ಲದ ಚಾಲನೆ ನೀಡಿದ್ದರು. ಮಾರ್ಚ್‌ನಲ್ಲಿ ಆರಂಭಗೊಂಡ ಕಾಮಗಾರಿಗೆ ಲಾಕ್‌ಡೌನ್‌ದಿಂದ ಹೊಡೆತ ನೀಡಿದ್ದು, ಒಂದು ಒಳರಸ್ತೆಯ ಗಟಾರ ನಿರ್ಮಾಣ ಕಾರ್ಯ ಸಾಗಿದೆ. ಇನ್ನುಳಿದ ಮೂರು ಒಳರಸ್ತೆಗಳ ಕಾಮಗಾರಿಗೆ ಚಾಲನೆ ಸಿಗಬೇಕಿದೆ. ಕಾಮಗಾರಿಗಳಿಗೆ ವೇಗ ನೀಡಬೇಕು, ಎಲ್ಲ ಒಳರಸ್ತೆಗಳ ಸುಧಾರಣೆ, ಶೌಚಾಲಯ-ಪಾರ್ಕಿಂಗ್‌ ಕೊರತೆ ನೀಗಿಸಿ ಮೂಲಸೌಕರ್ಯ ಒದಗಿಸಬೇಕೆಂಬುದು ವ್ಯಾಪಾರಸ್ಥರ ಆಗ್ರಹ.

ಮಾರುಕಟ್ಟೆ ಇತಿಹಾಸ : ಇಡೀ ನಗರಕ್ಕೆ ನೀರು ಪೂರೈಸುತ್ತಿದ್ದ ಹಾಲಗೇರಿ ಕೆರೆ ಕಾಲಕ್ರಮೇಣ ಬರಿದಾಗಿ ಅದೇ ಜಾಗದಲ್ಲಿಸೂಪರ್‌ ಮಾರುಕಟ್ಟೆ ನೆಲೆಕಂಡಿದೆ. ಧಾರವಾಡದ ಮೂಲ ಮಾರುಕಟ್ಟೆ ರವಿವಾರ ಪೇಟೆಯಲ್ಲಿತ್ತು. ಕೆಸರುಗುಂಡಿಯಾಗಿದ್ದಹಾಲಗೇರಿಯಲ್ಲಿ ಮಾರುಕಟ್ಟೆ ನಿರ್ಮಿಸಿ, ಮಾರುಕಟ್ಟೆ ಸ್ಥಳಾಂತರಿಸಲಾಯಿತು. ಅಂದಾಜು 5 ಎಕರೆ ವಿಸ್ತೀರ್ಣದಲ್ಲಿರುವಮಾರುಕಟ್ಟೆ ಮೇಲ್ದರ್ಜೆಗೇರಿಸುವ ಪ್ರಸ್ತಾವಗಳು 10 ಕೋಟಿಯಿಂದ ಆರಂಭವಾಗಿ 200-300 ಕೋಟಿಗೆ ಏರಿಕೆಯಾಗಿದ್ದರೂ ನನೆಗುದಿಗೆ ಬಿದ್ದಿÊ

ಸೂಪರ್‌ ಮಾರುಕಟ್ಟೆ ನಿಜಕ್ಕೂ ಸೂಪರ್‌ ಆಗಲು ಸಿದ್ಧಪಡಿಸಿರುವ ಪ್ರಸ್ತಾವನೆಗಳಿಗೆ ಮನ್ನಣೆ ಸಿಗಬೇಕು. ಇಡೀ ಮಾರುಕಟ್ಟೆ ಸುಸಜ್ಜಿತ, ಅತ್ಯಾಧುನಿಕಗೊಳಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕು.  –ರವೀಂದ್ರ ಆಕಳವಾಡಿ, ಕಾರ್ಯದರ್ಶಿ, ಧಾರವಾಡ ವಾಣಿಜ್ಯೋದ್ಯಮ ಸಂಘ

ಸೂಪರ್‌ ಮಾರುಕಟ್ಟೆಯಲ್ಲಿ ಶಾಸಕ ಅರವಿಂದ ಬೆಲ್ಲದ ಅವರ ಆಸಕ್ತಿ ಮೇರೆಗೆ ಈಗ ಒಳರಸ್ತೆ, ಗಟಾರ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದ್ದು,ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು. ಇದರ ಜೊತೆಗೆ ವ್ಯಾಪಾರಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾರುಕಟ್ಟೆಯಲ್ಲಿ ಮೂಲಸೌಕರ್ಯ ಒದಗಿಸುವ ಕೆಲಸ ಮಾಡಬೇಕು. –ಉದಯ ಯಂಡಿಗೇರಿ, ವ್ಯಾಪಾರಸ್ಥ

 

ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.