ಚಾಲನಾ ತರಬೇತಿ ಟ್ರ್ಯಾಕ್‌ಗೆ ಅನುದಾನ ಕೊರತೆ

ಮೀಸಲಿದ್ದ ಅನುದಾನ ಸಿಬ್ಬಂದಿ ವೇತನಕ್ಕೆ ಬಳಕೆ | ಗುತ್ತಿಗೆದಾರರಿಗೆ ಬಿಲ್‌ ಪಾವತಿ ವಿಳಂಬ; ಶೇ.15 ಕೆಲಸ ಬಾಕಿ

Team Udayavani, Sep 28, 2021, 1:35 PM IST

fgfrt

ವರದಿ: ಹೇಮರಡ್ಡಿ ಸೈದಾಪುರ

ಹುಬ್ಬಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಏಕೈಕ ಹಾಗೂ ಈ ಭಾಗದ ಎಸ್ಸಿ, ಎಸ್ಟಿ ಹಾಗೂ ಇತರೆ ಅಭ್ಯರ್ಥಿಗಳಿಗೆ ಚಾಲನಾ ತರಬೇತಿಗೆ ಸಹಕಾರಿಯಾಗಬೇಕಾಗಿದ್ದ ಅತ್ಯಾಧುನಿಕ ಟ್ರ್ಯಾಕ್‌ಗೆ ಅನುದಾನ ಕೊರತೆ ಎದುರಾಗಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಅನುದಾನ ಕೊರತೆಯಿಂದ ಗುತ್ತಿಗೆದಾರರಿಗೆ ಬಿಲ್‌ ಬಾಕಿ ಪಾವತಿಯಾಗದ ಹಿನ್ನೆಲೆಯಲ್ಲಿ ಶೇ.15 ಕಾಮಗಾರಿ ಉಳಿದುಕೊಂಡಿದೆ. ವಾಯವ್ಯ ಸಾರಿಗೆ ಸಂಸ್ಥೆ ಪ್ರತ್ಯೇಕವಾಗಿ ಎರಡು ದಶಕ ಪೂರ್ಣಗೊಂಡರೂ ನೇಮಕಾತಿ ಹಾಗೂ ಚಾಲನಾ ತರಬೇತಿಗಾಗಿ ಪ್ರತ್ಯೇಕ ಟ್ರ್ಯಾಕ್‌ ವ್ಯವಸ್ಥೆಯನ್ನು ಹೊಂದಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಲ್ಲಿನ ಹೆಗ್ಗೇರಿ ರಸ್ತೆಯಲ್ಲಿರುವ ಹಿಂದಿನ ನಗರ ಘಟಕದ ಸಂಸ್ಥೆಯ ಸುಮಾರು 5 ಎಕರೆ ಜಾಗದಲ್ಲಿ ಸುಮಾರು 3 ಕೋಟಿ ರೂ. (2.58 ಕೋಟಿ ರೂ. ಟೆಂಡರ್‌ ಮೊತ್ತ) ವೆಚ್ಚದಲ್ಲಿ ಅತ್ಯಾಧುನಿಕ ಟ್ರ್ಯಾಕ್‌ ನಿರ್ಮಿಸಲು ಸಂಸ್ಥೆ ಮುಂದಾಗಿತ್ತು. ಎರಡು ಚಾಲಕ ಹಾಗೂ ಚಾಲಕ/ನಿರ್ವಾಹಕ ನೇಮಕಾತಿ ಪ್ರಕ್ರಿಯೆಯನ್ನು ಇದೇ ಟ್ರ್ಯಾಕ್‌ನಲ್ಲಿ ಮಾಡಬೇಕು ಎನ್ನುವ ಉದ್ದೇಶದಿಂದ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಗುತ್ತಿಗೆದಾರರಿಗೆ ನೀಡಲಾಗಿತ್ತು. ಪರಿಣಾಮ ಈಗಾಗಲೇ ಶೇ.85 ಕಾಮಗಾರಿ ಮುಗಿದಿದೆ. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಅನುದಾನ ಕೊರತೆಯಿಂದ ಶೇ.15 ಕಾಮಗಾರಿ ಬಾಕಿ ಉಳಿದುಕೊಂಡಿದೆ.

2019 ಡಿಸೆಂಬರ್‌ನಲ್ಲಿ ಸುಮಾರು 2814 ಚಾಲಕ, ಚಾಲಕ/ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಈ ಟ್ರ್ಯಾಕ್‌ನಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ಕೋವಿಡ್‌ ಮಹಾಮಾರಿಯ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನೇಮಕಾತಿ ಹಾಗೂ ಕಾಮಗಾರಿ ಸ್ಥಗಿತಗೊಂಡಿದೆ. ಈ ಕಾಮಗಾರಿಗೆ ಮೀಸಲಿದ್ದ ಅನುದಾನವನ್ನು ಅನಿವಾರ್ಯವಾಗಿ ನೌಕರರ ವೇತನಕ್ಕೆ ಬಳಸಿಕೊಂಡ ಪರಿಣಾಮ ಕಾಮಗಾರಿ ಅಷ್ಟಕ್ಕೆ ಸ್ಥಗಿತಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಪ್ರಾದೇಶಿಕ ತರಬೇತಿ ಕೇಂದ್ರದ ಹಿಂಭಾಗದಲ್ಲಿ ತಾತ್ಕಾಲಿಕ ಟ್ರ್ಯಾಕ್‌ನಲ್ಲಿ ಚಾಲನಾ ತರಬೇತಿ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.