ಚತುಷ್ಪಥ ರಸ್ತೆಗೆ ಭೂಸ್ವಾಧೀನದ್ದೇ ಸವಾಲು

ಗದಗ ರಸ್ತೆಯಿಂದ-ಅಂಚಟಗೇರಿವರೆಗಿನ ರಸ್ತೆ

Team Udayavani, Mar 26, 2021, 5:29 PM IST

ಚತುಷ್ಪಥ ರಸ್ತೆಗೆ ಭೂಸ್ವಾಧೀನದ್ದೇ ಸವಾಲು

ಹುಬ್ಬಳ್ಳಿ: ಗದಗ ರಸ್ತೆಯಿಂದ-ಅಂಚಟಗೇರಿವರೆಗಿನ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಭೂಸ್ವಾ ಧೀನ ಹಾಗೂ ಅತಿಕ್ರಮಣ ತೆರವು ಜಿಲ್ಲಾಡಳಿತ ಹಾಗೂ ಸ್ಥಳೀಯ ಜನಪ್ರತಿನಿ ಧಿಗಳಿಗೆ ಸವಾಲಿನ ಕಾರ್ಯವಾಗಿದ್ದು, ನಗರ ವ್ಯಾಪ್ತಿಯಲ್ಲಿ ಕಾಮಗಾರಿಗೆ ದೊಡ್ಡ ಹಿನ್ನಡೆಯಾಗಿದೆ.

ಇದು ವಾಣಿಜ್ಯ ನಗರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಅಗಲೀಕರಣ ಮಾಡಬೇಕೆಂಬುದು ದಶಕಗಳ ಬೇಡಿಕೆಯಾಗಿತ್ತು. ಹೀಗಾಗಿ ಚತುಷ್ಪಥ ಕಾಂಕ್ರೀಟ್‌ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಯೋಜನೆ ಕೈಗೊಳ್ಳಲಾಯಿತು. ಸುಮಾರು 126 ಕೋಟಿ ವೆಚ್ಚ ಯೋಜನೆಗೆ 2018ರಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಇನ್ನೇನು 2 ವರ್ಷದಲ್ಲಿ ಯೋಜನೆ ಪೂರ್ಣಗೊಂಡು ನಗರ ಪ್ರವೇಶ ರಸ್ತೆ ಮಾದರಿಯಾಗಲಿದೆ ಎಂದು ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಆದರೆ ಮೂಲಸೌಲಭ್ಯ ಸ್ಥಳಾಂತರ, ಮರಗಳ ಕಡಿತ ಸೇರಿ ವಿವಿಧ ಕಾರಣಕ್ಕಾಗಿ ಒಂದೂವರೆ ವರ್ಷ ಕಳೆದಿದ್ದಾರೆ.

ಆಗಿರುವುದಾದರೂ ಏನು?: ಕಾಮಗಾರಿ ವಿಳಂಬದಿಂದಬೇಸತ್ತ ಜನರು ಜನಪ್ರತಿನಿಧಿ ಗಳಿಗೆ, ಗುತ್ತಿಗೆದಾರರಿಗೆಹಿಡಿಶಾಪ ಹಾಕುತ್ತಿದ್ದಂತೆ ಕಾಮಗಾರಿ ಒಂದಿಷ್ಟು ವೇಗ ಪಡೆಯಿತು. ಮೂರು ವರ್ಷದ ಅವಧಿಯಲ್ಲಿಆಗಿರುವುದು 6 ಕಿಮೀ ಮಾತ್ರ. ಅಂಚಟಗೇರಿ ಬಳಿ ಬೈಪಾಸ್‌ ಸೇತುವೆಯಿಂದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೇತುವೆ ಒಂದು ಭಾಗದಲ್ಲಿ ಕಾಂಕ್ರೀಟ್‌ ರಸ್ತೆ ಮಾಡಿದ್ದಾರೆ. ಇನ್ನೊಂದು ಭಾಗದಲ್ಲಿ ರಸ್ತೆ ಅಗೆದುಕೈಬಿಟ್ಟಿದ್ದಾರೆ. ಇನ್ನು ಗದಗ ರಸ್ತೆಯ ಸೇತುವೆಯಿಂದ ರೈಲ್ವೆನಿಲ್ದಾಣ ಬಳಿಯ ಮೇಲ್ಸೇತುವೆವರೆಗೆ ಒಂದು ಭಾಗದ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಯೋಜನೆಗೆ ಸವಾಲು :

ನಗರ ಹೊರಭಾಗದಲ್ಲಿ ಯಾವುದೇ ಸಮಸ್ಯೆಯಿಲ್ಲದಿದ್ದರೂ ಒಂದು ರಸ್ತೆಯ ನಿರ್ಮಾಣಕ್ಕೆ ಮೂರು ವರ್ಷ ತೆಗೆದುಕೊಂಡಿದ್ದಾರೆ. ಇದೀಗ ನಗರದಲ್ಲಿ ಯೋಜನೆ ಅನುಷ್ಠಾನಕ್ಕೆ ಭೂಸ್ವಾ ಧೀನಅಗತ್ಯವಾಗಿದ್ದು, ಈ ಪ್ರಕ್ರಿಯೆ ಕೈಗೊಳ್ಳಲು ಯಾರೂ ಮುಂದಾಗುತ್ತಿಲ್ಲ. ಇಂಡಿ ಪಂಪ್‌ ವೃತ್ತ ಬಳಿ, ಹಳೇಬಸ್‌ ನಿಲ್ದಾಣ ಬಳಿ ಸೇರಿದಂತೆ ಸುಮಾರು 1.3 ಕಿಮೀ ಭೂಸ್ವಾಧೀನ ಆಗಬೇಕಿದೆ. ಚತುಷ್ಪಥ ರಸ್ತೆಗೆ ಭೂಸ್ವಾಧೀನ ಅಗತ್ಯವಾಗಿದೆ. ಇನ್ನು ಕೆಲವೆಡೆ ಅಕ್ರಮ ಒತ್ತುವರಿಗಳಿದ್ದು, ಅವುಗಳನ್ನು ತೆರವುಗೊಳಿಸುವುದು ಜಿಲ್ಲಾಡಳಿತ, ಮಹಾನಗರ ಪಾಲಿಕೆಗೆ ದೊಡ್ಡ ಸವಾಲಾಗಿದೆ. ಅರವಿಂದ ನಗರ, ಗಿರಿಣಿಚಾಳ ಬಳಿ ಅಲ್ಲಲ್ಲಿ ಒಂದಿಷ್ಟು ಗಟಾರು ನಿರ್ಮಾಣ ಬಿಟ್ಟರೆ ಮತ್ತಾವ ಪ್ರಗತಿಯೂ ಇಲ್ಲ.

ಸವಾರರ ನರಕಯಾತನೆ :

ಕಾಮಗಾರಿ ವಿಳಂಬ, ಸ್ಥಳೀಯ ಜನಪ್ರತಿನಿ ಧಿಗಳ ಮತ ಬ್ಯಾಂಕ್‌ನಿಂದ ಬೆಂಗಳೂರು ಹಾಗೂಕಾರವಾರ ಮಾರ್ಗವಾಗಿ ನಗರ ಪ್ರವೇಶಿಸುವರಸ್ತೆ, ಸುತ್ತಲಿನ ಪ್ರದೇಶ ತೀರಾ ದುಸ್ಥಿತಿಯಲ್ಲಿದೆ. ಬಂಕಾಪುರ ವೃತ್ತದ ಮಾರ್ಗದ ರಸ್ತೆ ಕಿರಿದಾಗಿದೆಎನ್ನುವ ಕಾರಣಕ್ಕೆ ನಗರ, ಗ್ರಾಮೀಣ ಬಸ್‌ಗಳನ್ನುಹೊರತುಪಡಿಸಿ ಉಳಿದ ಸುಮಾರು 2000ಕ್ಕೂಹೆಚ್ಚು ಸಾರಿಗೆ ಸಂಸ್ಥೆ ಬಸ್‌ಗಳು ಅರವಿಂದ ನಗರದಮಾರ್ಗವಾಗಿ ಸಂಚರಿಸುತ್ತಿವೆ. ಇದರೊಂದಿಗೆಹುಬ್ಬಳ್ಳಿ, ಗದಗ, ಬಾಗಲಕೋಟೆ, ವಿಜಯಪುರಕ್ಕೆತೆರಳುವ ಪ್ರತಿಯೊಂದು ವಾಹನಗಳು ಇಲ್ಲಿಂದಲೇ ಸಂಚರಿಸುತ್ತಿವೆ. ರಸ್ತೆ ಕಿರಿದಾಗಿಅಪಘಾತಗಳು ಆಗಾಗ ಸಂಭವಿಸುತ್ತಲೇ ಇವೆ.

ಕಾಮಗಾರಿ ನಡೆಸಬೇಕೋ ಬೇಡವೋ..!? :

ಇದೀಗ ಚನ್ನಮ್ಮ ವೃತ್ತದಲ್ಲಿ ಫ್ಲೈಓವರ್‌ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ಈ ವೃತ್ತದಿಂದ ಅಂಬೇಡ್ಕರ್‌ ವೃತ್ತದವರೆಗೆರಸ್ತೆ ಕಾಮಗಾರಿ ನಡೆಸಬೇಕೋ ಬೇಡವೋ ಎನ್ನುವ ಗೊಂದಲ ಅಧಿಕಾರಿಗಳಲ್ಲಿದೆ. ಫ್ಲೆ$çಓವರ್‌ ಪೂರ್ಣಗೊಂಡ ನಂತರವೇ ಕಾಮಗಾರಿಆರಂಭಿಸಬೇಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಮಹಾನಗರದ ವಿಳಂಬದ ಯೋಜನೆಗಳಿಗೆ ಇದೊಂದು ಸೇರ್ಪಡೆ ಯಾಗುವುದರಲ್ಲಿ ಅನುಮಾನವಿಲ.

ತಿಂಗಳಿಗೆ ಒಂದು ಕಿಮೀ; ಜುಲೈ ಅಂತ್ಯದ ಗುರಿ :

ರಾಷ್ಟ್ರೀಯ ಹೆದ್ದಾರಿ ಪ್ರಾ ಧಿಕಾರ ತಿಂಗಳಿಗೆ ಒಂದು ಕಿಮೀ ರಸ್ತೆ ನಿರ್ಮಿಸುವ ಮೂಲಕ ಜುಲೈ ಅಂತ್ಯದೊಳಗೆ ಯೋಜನೆ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದೆ. ಆದರೆ ಕಾಮಗಾರಿ ವೇಗ, ಅಡೆತಡೆಗಳನ್ನು ನೋಡಿದರೆ ವರ್ಷವೇ ಬೇಕಾಗುತ್ತಿದೆ. ಮಹಾನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಯೋಜನೆಗಳಿಗೆ ವೇಗ ಹಾಗೂ ಸ್ಥಿತಿಗತಿ ಕುರಿತು ನಿಗಾ ವಹಿಸುವಹೊಣೆಯನ್ನು ಇತ್ತೀಚೆಗೆ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಜಿಲ್ಲಾಧಿಕಾರಿಗೆ ವಹಿಸಲಾಗಿತ್ತು.

ಈಗಾಗಲೇ ಕಿಮೀ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಕೆಲ ತಾಂತ್ರಿಕಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಆದರೆ ಮುಂದಿನ ನಾಲ್ಕೈದು ತಿಂಗಳಲ್ಲಿ ಕಾಮಗಾರಿಪೂರ್ಣಗೊಳಿಸಬೇಕೆನ್ನುವ ಗುರಿ ಹಾಕಿಕೊಂಡಿದ್ದೇವೆ.ಹೀಗಾಗಿ ಪ್ರತಿ ತಿಂಗಳು 1 ಕಿಮೀನಂತೆ ಕಾಮಗಾರಿ ಕೈಗೊಂಡು ಜುಲೆ„ ಅಂತ್ಯದೊಳಗೆ ಯೋಜನೆ ಪೂರ್ಣಗೊಳ್ಳಲಿದೆ.  –ಆರ್‌.ಕೆ. ಮಠದ, ಇಇ, ರಾಷ್ಟ್ರೀಯ ಹೆದ್ದಾರಿ (ಲೋಕೋಪಯೋಗಿ)

ಯೋಜನೆಗೆ ಮೀಸಲಿಟ್ಟಿದ್ದ ಅನುದಾನ ಬೇರೆಡೆ ವರ್ಗಾಯಿಸಿರಬೇಕು ಎನ್ನುವ ಅನುಮಾನವಿದೆ. ಕೆಲವೊಂದು ಕಡೆ ಭೂಸ್ವಾ ಧೀನ ಮಾಡಬೇಕಿದೆ. ಪ್ರಾಥಮಿಕಕೆಲಸಗಳನ್ನು ಬಾಕಿಯಿಟ್ಟುಕೊಂಡು ಕಾಮಗಾರಿಆರಂಭಿಸಿರುವುದು ಅವೈಜ್ಞಾನಿಕವಾಗಿದೆ.ಪ್ರತಿಯೊಂದು ಯೋಜನೆಯಲ್ಲೂ ದೂರದೃಷ್ಟಿ ಕೊರತೆ ಎದ್ದು ಕಾಣುತ್ತಿದೆ.  –ಸಂತೋಷ ನರಗುಂದ, ಜಿಲ್ಲಾಧ್ಯಕ್ಷ, ಆಮ್‌ ಆದ್ಮಿ ಪಕ್ಷ

 

­ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.