ಮಳೆಗೆ ಭೂಮಿ ಹದ; ಕೃಷಿ ಚಟುವಟಿಕೆ ಆರಂಭ


Team Udayavani, May 15, 2018, 5:26 PM IST

15-May-18.jpg

ರಾಂಪುರ: ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಭೂಮಿ ಹಸಿಯಾಗಿದ್ದು ಮುಂಗಾರು ಕೃಷಿ ಚಟುವಟಿಕೆಗೆ ಭೂಮಿ ಹದಗೊಳಿಸಲು ರೈತರು ಭೂಮಿಯತ್ತ ಚಿತ್ತ ಹರಿಸಿದ್ದಾನೆ.

ಹೌದು, ಬಾಗಲಕೋಟೆ ತಾಲೂಕಿನಲ್ಲಿ ಹಿಂಗಾರು ಬೆಳೆ ನಂತರ ರೈತರು ನೇಗಿಲು ಹೊಡೆದು ಭೂಮಿಗೆ ಕೊಟ್ಟಿಗೆ ಗೊಬ್ಬರ ಹಾಕಿ ಮಳೆಯ ದಾರಿ ಕಾಯುತ್ತಿದ್ದರು. ಆದರೆ ವರುಣ ರೈತರ ನಿರೀಕ್ಷೆ ಹುಸಿಗೊಳಿಸಲಿಲ್ಲ. ಕಳೆದ ಎರಡು ದಿನಗಳ ಹಿಂದೆ ಸುರಿದ ಮಳೆಯಿಂದ ಮುಂಗಾರು ಬಿತ್ತನೆಗೆ ಭೂಮಿ ತಯಾರು ಮಾಡಲು ರೈತರಿಗೆ ಅನುಕೂಲವಾಗಿದೆ. 

ಕಳೆದ ವರ್ಷ ಈ ಭಾಗದ ರೈತರಿಗೆ ಮುಂಗಾರು ಕೈ ಹಿಡಿದಿರಲಿಲ್ಲ. ಕೆಲವೆಡೆ ಮುಂಗಾರು ಸ್ವಲ್ಪ ಮಟ್ಟಿಗೆ ಸುರಿದರೆ ಇನ್ನೂ ಕೆಲವೆಡೆ ಮುಂಗಾರು ಬಿತ್ತನೆಯೇ ಆಗಿರಲಿಲ್ಲ. ಹೀಗಾಗಿ ಮುಂಗಾರು ಬೆಳೆ ಕಳೆದುಕೊಂಡಿದ್ದ ರೈತ ಹಿಂಗಾರಿನ ಮೇಲೆ ಇಟ್ಟಿದ್ದ ನಂಬಿಕೆ ನಿಜವಾಯಿತು. ಉತ್ತಮವಾಗಿ ಸುರಿದ ಹಿಂಗಾರು ಮಳೆಯಿಂದ ಕಡಲೆ, ಬಿಳಿಜೋಳ, ಕುಸುಬಿ, ಮತ್ತಿತರ ಬೆಳೆ ತೆಗೆದು ಮುಂಗಾರಿಗೆ ಆಗಿದ್ದ ಹಾನಿ ಕೊರತೆ ನೀಗಿಸಿಕೊಂಡಿದ್ದ. ಆದರೆ ಈ ಬಾರಿ ಮುಂಗಾರು ರೈತರ ಕೈ ಹಿಡಿಯುವ ನಿರೀಕ್ಷೆ ಇದೆ. ಈವರೆಗೆ ಬಂದ ಹವಾಮಾನ ವರದಿಗಳು ಉತ್ತಮ ಮುಂಗಾರು ಸುರಿಯಲಿದೆ ಎಂದು ಹೇಳಿವೆ. ಹೀಗಾಗಿ ಈ ವರ್ಷ ತಾಲೂಕಿನ ರೈತ ಮುಂಗಾರಿನ ಮೇಲೆ ಬೆಟ್ಟದಷ್ಟು ನಂಬಿಕೆ ಇಟ್ಟುಕೊಂಡು ಕೃಷಿ ಚಟುವಟಿಕೆಗೆ ಅಣಿಯಾಗುತ್ತಿದ್ದಾನೆ.

ಭೂಮಿಯಲ್ಲಿ ಹರಿದ ನೀರು: ಕಳೆದ ಕೆಲ ವರ್ಷಗಳಿಂದ ಮಳೆ ಕೊರತೆ ಉತ್ತರ ಕರ್ನಾಟಕದ ರೈತರನ್ನು ಕಾಡುತ್ತಿದೆ. ಸತತ ಮೂರು ವರ್ಷ ಬರಗಾಲ ಅನುಭವಿಸಿದ ರೈತರು ಭೂಮಿಯಲ್ಲಿ ಮಳೆ ನೀರು ಹರಿದಿದ್ದನ್ನು ಕಂಡಿಲ್ಲ. ಆದರೆ ಕಳೆದ ವರ್ಷ ಮುಂಗಾರಿನ ನಂತರ ಸುರಿದ ಕೆಲ ಮಳೆಗಳು ಭೂಮಿಯಲ್ಲಿ ಹರಿದು ಇಂಗಿದ್ದರೆ ಈ ವರ್ಷ ಇದೀಗ ಸುರಿದ ಮಳೆ ನೀರು ಕೂಡ ಹರಿದು ಭೂಮಿ ಹದಗೊಳಿಸಿದೆ. ಇದು ಮುಂಗಾರು ಆರಂಭಕ್ಕೂ ಮುನ್ನ ರೈತರಿಗೆ ಖುಷಿ ಕೊಟ್ಟಿದೆ. 

ಭೂಮಿ ಹದಗೊಳಿಸುವಷ್ಟು ಮಳೆಯಾಗಿದೆ. ಮುಂಗಾರು ಬಿತ್ತನೆಗೆ ತಯಾರು ಮಾಡಲು ಹೊಲ ಹರಗುತ್ತಿದ್ದೇವೆ.
ಇನ್ನೇನು ವೇಳೆಗೆ ಸರಿಯಾಗಿ ಮಳೆ ಬಿದ್ದರೆ ಜೂನ್‌ ಮೊದಲ ವಾರದಲ್ಲೇ ಮುಂಗಾರು ಬಿತ್ತನೆ ಪ್ರಾರಭಿಸುತೇವೆ.
 ನಾಗೇಶ ದಡ್ಡಿ, ಕಡ್ಲಿಮಟ್ಟಿ ರೈತ.

ಬಿತ್ತನೆ ಅವಧಿ ಇನ್ನೂ ಹದಿನೈದು ದಿನ ಇದೆ. ಸರಿಯಗಿ ಮಳೆ ಬಿದ್ದರೆ ಬಿತ್ತನೆ ಪ್ರಾರಂಭಿಸುತ್ತೇವೆ. ಭೂಮಿ ಹದಗೊಳಿಸುವಷ್ಟು ಈಗಾಗಲೇ ಮಳೆಯಾಗಿದೆ.
 ಷಣ್ಮುಖ ಶಿಂಪಿ, ಅಚನೂರ ರೈತ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.