ತಡವಾದರೂ ಐತಿಹಾಸಿಕ ನಿರ್ಧಾರ; ಪ್ರಧಾನಿಯವರನ್ನು ಅಭಿನಂದಿಸುತ್ತೇನೆ: ಯಡಿಯೂರಪ್ಪ
Team Udayavani, Nov 19, 2021, 11:43 AM IST
ಹುಬ್ಬಳ್ಳಿ: ರೈತ ಹಿತ ಕಾಪಾಡುವ ದೃಷ್ಟಿಯಿಂದ ಕೃಷಿ ಮಸೂದೆಗಳನ್ನು ವಾಪಸ್ಸು ಪಡೆಯಲಾಗಿದೆಯೇ ಹೊರತು ಇದರಲ್ಲಿ ಸೋಲು ಗೆಲುವಿನ ಪ್ರಶ್ನೆ ಬರುವುದಿಲ್ಲ. ಮಸೂದೆಗಳ ಜಾರಿಯಲ್ಲಿ ಯಾವುದೇ ಒಣ ಪ್ರತಿಷ್ಠೆಯಿರಲಿಲ್ಲ. ರೈತರ ಒಳಿತಿಗಾಗಿ ಮಸೂದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಾಪಸ್ಸು ಪಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವ ಚುನಾವಣೆಗಳನ್ನು ಮುಂದಿಟ್ಟುಕೊಂಡು ಮಸೂದೆಗಳನ್ನು ವಾಪಸ್ಸು ಪಡೆದಿಲ್ಲ. ಕಾಯ್ದೆಯಲ್ಲಿ ಯಾವುದೇ ಲೋಪ ದೋಷಗಳಿಲ್ಲ. ಮಸೂದೆಗಳ ಬಗ್ಗೆ ಜಾಗೃತಿ ಹಾಗೂ ಅನುಕೂಲತೆಗಳನ್ನು ಜನರಿಗೆ ಮುಟ್ಟಿಸುವುದಾಗಿ ಹಿಂದೆ ನಾವೆಲ್ಲ ಹೇಳಿರುವುದು ನಿಜ. ಆದರೆ ತಡವಾದರೂ ಇದೊಂದು ಐತಿಹಾಸಿಕ ನಿರ್ಧಾರವಾಗಿದ್ದು, ಪ್ರಧಾನಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಕಾಯ್ದೆ ವಿರೋಧಿಸಿ ನೂರಾರು ರೈತರು ಸಾವನ್ನಪ್ಪಿದ್ದಾರೆ ಎಂಬುದು ಸರಿಯಲ್ಲ. ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮಸೂದೆ ವಾಪಸ್ಸು ಪಡೆಯಲಾಗಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಉತ್ತರ ಪ್ರದೇಶದಲ್ಲಿ ಈಗಾಗಲೇ ಬಿಜೆಪಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಉತ್ತಮ ಕಾರ್ಯ ಮಾಡಿದ್ದಾರೆ. ಹಿಂದಿಗಿಂತ ಹೆಚ್ಚಿನ ಸ್ಥಾನಗಳು ಲಭಿಸಲಿವೆ. ಅಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಪಕ್ಷದಲ್ಲಿ ಸಾಮೂಹಿಕ ನಾಯಕತ್ವಕ್ಕೆ ಹೆಚ್ಚಿನ ಗೌರವವಿದೆ ಎಂದರು.
ಇದನ್ನೂ ಓದಿ:ಕೃಷಿ ಕಾಯ್ದೆಗಳ ವಾಪಾಸ್; ಅನ್ನದಾತ, ಕಾಂಗ್ರೆಸ್ ಹೋರಾಟಕ್ಕೆ ಸಿಕ್ಕ ಜಯ: ಡಿ.ಕೆ. ಶಿವಕುಮಾರ್
ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಹತ್ತು ಬಾರಿ ಯೋಚನೆ ಮಾಡುತ್ತಾರೆ. ಆದರೆ ಇನ್ನೊಬ್ಬರಿಗೆ ಅವಕಾಶ ದೊರೆಯಲಿ ಎನ್ನುವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದೇನೆ. ನಾನು ಹೋದ ಕಡೆಯಲ್ಲೆಲ್ಲಾ ನಮ್ಮ ಯಡಿಯೂರಪ್ಪ ಎನ್ನುವ ಪ್ರೀತಿ ದೊರೆಯುತ್ತಿದೆ. ಇದಕ್ಕಿಂತ ದೊಡ್ಡ ಗೌರವ, ಅಧಿಕಾರ ಮತ್ತೇನು ಬೇಕಾಗಿಲ್ಲ. ವಿಧಾನಪರಿಷತ್ತು ಚುನಾವಣೆ ಮುಗಿದ ನಂತರ ವಿಶ್ರಮಿಸದೆ ಪ್ರತಿ ಜಿಲ್ಲೆಗೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾನಗಲ್ಲ ಚುನಾವಣೆಯಲ್ಲಿ ಹಿನ್ನಡೆಯಾಗಿದೆ. ಇದು ಒಬ್ಬ ನಾಯಕನಿಗೆ ಸೀಮಿತವಲ್ಲ. ಪಕ್ಷದ ಎಲ್ಲಾ ನಾಯಕರು ಇದರ ಜವಾಬ್ದಾರಿ ಹೊರಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು