ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಕೀಲರ ಪ್ರತಿಭಟನೆ
•ಹುಬ್ಬಳ್ಳಿಯ ನೂತನ ನ್ಯಾಯಾಲಯಗಳ ಸಂಕೀರ್ಣಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಒತ್ತಾಯ
Team Udayavani, Jul 3, 2019, 9:27 AM IST
ಹುಬ್ಬಳ್ಳಿ: ನೂತನ ನ್ಯಾಯಾಲಯಕ್ಕೆ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ವಕೀಲರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ನೂತನ ನ್ಯಾಯಾಲಯಗಳ ಸಂಕೀರ್ಣಕ್ಕೆ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ವಕೀಲರು ನ್ಯಾಯಾಲಯದ ಆವರಣ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ವರೆಗೆ ಬಸ್ ಸೌಲಭ್ಯ ಇಲ್ಲದ್ದರಿಂದ ವಿವಿಧ ಕೆಲಸಗಳಿಗಾಗಿ ಬರುವ ಸಾರ್ವಜನಿಕರಿಗೆ, ನ್ಯಾಯ ಕೋರಿ ಬರುವ ಕಕ್ಷಿದಾರರಿಗೆ, ವಕೀಲರಿಗೆ ಹಾಗೂ ಕೋರ್ಟ್ ಸಿಬ್ಬಂದಿಗೆ ತುಂಬಾ ಸಮಸ್ಯೆ ಆಗುತ್ತಿದೆ. ಕೋರ್ಟ್ಗೆ ಹೋಗಲು-ಬರಲು ಖಾಸಗಿ ವಾಹನ ಇಲ್ಲವೆ ಆಟೋರಿಕ್ಷಾಗಳನ್ನೇ ಅವಲಂಬಿಸಬೇಕಾಗಿದೆ. ಅವರು ಕೇಳಿದಷ್ಟು ಹಣ ಕೊಡಬೇಕಾಗಿದೆ. ಹೀಗಾಗಿ ಹೆಚ್ಚಿನ ಹೊರೆ ಆಗುತ್ತಿದೆ. ಕೂಡಲೇ ಕೋರ್ಟ್ ವರೆಗೆ ಬಸ್ ಸೌಲಭ್ಯ ಒದಗಿಸಬೇಕೆಂದು ಪ್ರತಿಭಟನಾಕಾರರು ವಾಕರಸಾ ಸಂಸ್ಥೆಯನ್ನು ಒತ್ತಾಯಿಸಿದರು.
ಸಂಸ್ಥೆಯ ನಗರ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ವಿವೇಕಾನಂದ ವಿಶ್ವಜ್ಞ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸಂಘದ ಮನವಿ ಸ್ವೀಕರಿಸಿ, ಕೋರ್ಟ್ ವರೆಗೆ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷ ಅಶೋಕ ಬಳಿಗಾರ, ಕಾರ್ಯದರ್ಶಿ ಗುರು ಹಿರೇಮಠ, ಎಸ್.ವಿ. ಕೊಪ್ಪರ, ಜಯಪ್ರಕಾಶ ಪಾಟೀಲ, ವಿಠuಲ ಸೋಮನಕೊಪ್ಪ, ಕಾಮಧೇನು, ಶೋಭಾ ಪವಾರ, ಬಿ.ವಿ. ಕೋರಿಮಠ, ಮಂಜುನಾಥ ಕಟ್ಟಿ, ಅಶೋಕ ಅಣವೇಕರ, ಶಿವಾನಂದ ವಡ್ಡಟ್ಟಿ, ಗುರು ಕೆಲಗೇರಿ, ವಿ.ಕೆ. ಹಿರೇಮಠ, ಮಂಜುನಾಥ ಗುಡಗೇರಿ, ವೆಂಕಟೇಶ ಮಲ್ಯಾಲಿ, ಮುರಳಿ ಪೂಜಾರ, ಲಿಂಗರಾಜ ಪಾಟೀಲ, ಸಂತೋಷ ರೆಡ್ಡಿ, ಸವಿತಾ ಪಾಟೀಲ, ಉಮಾ ಹಂಡಿ, ಮಹಾದೇವಿ ಮುತ್ತಗಿ, ರೇಖಾ ಮುತ್ತಗಿ, ಪ್ರಭಾ ಕುಂಬಾರ, ನಂದಾ ಮಾಳವದೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು
Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್