ಕಾರ್ಮಿಕರಿಂದ ಹೆಚ್ಚು ಶುಲ್ಕ ಪಡೆದರೆ ಕಾನೂನು ಕ್ರಮ
Team Udayavani, May 23, 2020, 7:28 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಗೆ ನೋಂದಣಿಗಾಗಿ ಕಾರ್ಮಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಕೇಳಿ ಬಂದಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ಮೀನಾ ಪಾಟೀಲ ಎಚ್ಚರಿಸಿದ್ದಾರೆ.
ಕಾರ್ಮಿಕ ಕಲ್ಯಾಣ ಮಂಡಳಿಗೆ ಕಾರ್ಮಿಕರ ನೋಂದಣಿಗಾಗಿ ಕೆಲ ಸಂಘ-ಸಂಸ್ಥೆ ಹಾಗೂ ಆನ್ಲೈನ್ ಕೇಂದ್ರಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ನೋಂದಣಿಗೆ 25ರೂ.ಗಳ ಶುಲ್ಕ ನಿಗದಿ ಪಡಿಸಲಾಗಿದ್ದು, ಇದಕ್ಕಿಂತಲೂ ಹೆಚ್ಚು ಶುಲ್ಕ ವಸೂಲಿ ಮಾಡುವಂತಿಲ್ಲ. ಸೇವಾ ಸಿಂಧು ಮೂಲಕ ಕಾರ್ಮಿಕರು ಆನ್ಲೈನ್ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅರ್ಹ ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರನ್ನಾಗಿ ನೋಂದಾಯಿಸಿಕೊಂಡು, ಕಾರ್ಮಿಕ ಇಲಾಖೆಯಿಂದ ವಿವಿಧ ಸೌಲಭ್ಯ ನೀಡಲಾಗುತ್ತಿದೆ. ಕಟ್ಟಡ ಕಾರ್ಮಿಕರು ಮಧ್ಯಸ್ಥರು, ಸಂಘ-ಸಂಸ್ಥೆಗಳನ್ನು ನೋಂದಣಿಗೆ ಸಂಪರ್ಕಿಸದೆ ಇಲಾಖೆ ಮೂಲಕ ನೋಂದಣಿ, ನವೀಕರಣ ಇನ್ನಿತರ ಅರ್ಜಿ ಪಡೆಯಬಹುದು, ಇಲಾಖೆಯ ಕಾರ್ಮಿಕ ನಿರೀಕ್ಷಕರು ನೋಂದಣಿ ಅಧಿಕಾರಿಗಳಾಗಿರುತ್ತಾರೆ. ಕಾರ್ಮಿಕ ಇಲಾಖೆ ಹೆಸರು ದುರುಪಯೋಗ ಪಡಿಸಿಕೊಂಡು ಹೆಚ್ಚು ಹಣ ಕೇಳಿದರೆ, ದೂ.ಸಂ. 0836-2353662, 2356503ಗೆ ಕರೆ ಮಾಡಬಹುದೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ
ಐಎನ್ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ
ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ
Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್: ಮೌನ ಮೆರವಣಿಗೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ