ಕಾನೂನು ಸಾಕ್ಷರತಾ ಕಾರ್ಯಕ್ರಮ ಪೂರ್ವ ತಯಾರಿಯೊಂದಿಗೆ ಅನುಷ್ಠಾನಗೊಳಿಸಿ
Team Udayavani, Apr 5, 2017, 2:35 PM IST
ಧಾರವಾಡ: ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳು ಪೂರ್ವ ತಯಾರಿಯೊಂದಿಗೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿ.ಶ್ರೀಶಾನಂದ ಹೇಳಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಾಧಿಧಿಕಾರದ ದ್ವೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಏ.8ರಂದು ಮಾಸಿಕ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುವದು ಎಂದರು. ಏಪ್ರಿಲ್ನಲ್ಲಿ ಮಕ್ಕಳ ಹಕ್ಕುಗಳ ಕುರಿತು, ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ, ಭೂಮಿ ಉಳಿಸಿ ದಿನಾಚರಣೆ,
ರೈತರ ಕಲ್ಯಾಣಕ್ಕಾಗಿ ಇರುವ ಸರಕಾರದ ಯೋಜನೆಗಳ ಕುರಿತು ಹಾಗೂ ಮೇ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ, ಬಾಲ್ಯ ವಿವಾಹ ತಡೆ, ಶಾಲೆ ಕಡೆ ನನ್ನ ನಡೆ ಜಾಗೃತಿ ಆಂದೋಲನ, ತಂಬಾಕು ವಿರೋಧಿ ದಿನದ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗೆಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಜಿಲ್ಲಾ ನ್ಯಾಯಾಧೀಶರಾದ ಎಸ್.ಎಸ್. ಬಳ್ಳೊಳ್ಳಿ, ಸಿದ್ದಪ್ಪ ಹೊಸಮನಿ, ಡಿಎಚ್ಒ ಡಾ| ಆರ್. ಎಂ.ದೊಡ್ಡಮನಿ, ಜಿಲ್ಲಾ ಪರಿಸರ ಅಧಿಧಿಕಾರಿ ವಿಜಯಕುಮಾರ ಕಡಕ್ಬಾವಿ, ಡಿಡಿಪಿಐ ಎನ್.ಎಚ್. ನಾಗೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಗಿರಿಧರ ಕುಕನೂರ ಇದ್ದರು. ಎಸ್.ಎನ್.ಹೆಗಡೆ ಸ್ವಾಗತಿಸಿ,ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ