ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
Team Udayavani, Nov 24, 2019, 10:56 AM IST
ಹುಬ್ಬಳ್ಳಿ: ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಸುಂದರ ಬಡಾವಣೆಗಳನ್ನಾಗಿ ರೂಪಿಸಿ ಕ್ಷೇತ್ರದ ಎಲ್ಲ ಕಾಲೋನಿಗಳನ್ನು ಮಾದರಿಯನ್ನಾಗಿಸುವ ಕನಸು ಶೀಘ್ರ ನನಸಾಗಲಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಮಂಟೂರು ರಸ್ತೆ ಗಣೇಶ ಕಾಲೋನಿ ಹಾಗೂ ಶಾ ಕಾಲೋನಿಯಲ್ಲಿ 2 ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ 76 ಲಕ್ಷ ವೆಚ್ಚದಲ್ಲಿ ಬಾಸೆಲ್ ಮಿಶನ್ ಚರ್ಚ್ ಬಳಿ ಒಳಚರಂಡಿ ಕೊಳವೆ ಅಳವಡಿಕೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಂಟೂರು ರಸ್ತೆ ಭಾಗದ ಪ್ರದೇಶಗಳೆಲ್ಲೆಡೆ ಕಾಂಕ್ರೀಟ್ ರಸ್ತೆ, ಗಟಾರ, ಫುಟ್ಪಾತ್, ಕುಡಿಯುವ ನೀರಿನ ವ್ಯವಸ್ಥೆ, ಯುಜಿಡಿ, ಬೀದಿದೀಪ, ಸ್ಮಶಾನ ಅಭಿವೃದ್ಧಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಹತ್ತಾರು ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಕೆಲವೇ ವರ್ಷಗಳಲ್ಲಿ ಮಾದರಿ ಬಡಾವಣೆಯಾಗಿ ಮಂಟೂರು ರಸ್ತೆ ಭಾಗದ ಪ್ರದೇಶಗಳು ಅಭಿವೃದ್ಧಿ ಹೊಂದಲಿವೆ.
ಮಿಷನ್ ಕಾಂಪೌಂಡ್ನಲ್ಲಿ ಒಳಚರಂಡಿ ಕಾಮಗಾರಿ ತಿಂಗಳೊಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಫಾಸ್ಟರ್ ಡಾ| ಎ. ಗಿಡಿಯಾನ್, ರೆವರೆಂಡ್ ಕ್ರಿಸ್ಟಾನಂದ ಕೆ., ಶರೀಫ ಅದವಾನಿ, ಯಲ್ಲಪ್ಪ ಮೆಹರವಾಡೆ, ಮುಖಂಡರಾದ ರಾಜಾರಾವ್, ಶೋಭಾ, ಗೀತಾ ಕರ್ನೂಲ್, ಫರೀದಾ, ದಾಕ್ಷಾಯಿಣಿ, ಜ್ಯೋತಿ ಇನ್ನಿತರರಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಶಾ ಕಾಲೋನಿ, ಗುಂಜಾಳ ಪ್ಲಾಟ್ನಲ್ಲಿ ಬೋರ್ವೆಲ್ ಕೊರೆಯುವ ಕಾಮಗಾರಿಗೆ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?