ಮುತ್ತಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಚಿರತೆ
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಸುದ್ದಿ ! ಅರಣ್ಯ ಇಲಾಖೆ ಸಿಬ್ಬಂದಿ ನಿಗಾ
Team Udayavani, Jun 25, 2021, 4:06 PM IST
ಕಲಘಟಗಿ: ಉತ್ತರ ಕನ್ನಡ ಜಿಲ್ಲೆ ಧುಂಡಶಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಶಿಗ್ಗಾವಿ ತಾಲೂಕಿನ ಮುತ್ತಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಚಿರತೆ ಅಡ್ಡಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ಇಲ್ಲಿನ ವಲಯಾರಣ್ಯಾಧಿಕಾರಿ ಶ್ರೀಕಾಂತ ಪಾಟೀಲ ಕಾರ್ಯೋನ್ಮುಖರಾಗಿದ್ದು, ತಾಲೂಕಿನ ಕೊನೆಯಂಚಿನ ಬೆಂಡಲಗಟ್ಟಿ-ಬೀರವಳ್ಳಿ ಗ್ರಾಮಗಳ ಜಮೀನುಗಳಿಗೆ ಹೊಂದಿಕೊಂಡ ಅರಣ್ಯ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಲು ಕಾರ್ಯಾಚರಣೆ ಇಂದಿಗೂ ಮುಂದುವರಿಸಲಾಗಿದೆ. ತಾಲೂಕಿನ ಅರಣ್ಯ ವ್ಯಾಪ್ತಿ ಪ್ರದೇಶದಿಂದ ಕೆಲವೇ ಕಿಲೋಮೀಟರ್ ಅಂತರದಲ್ಲಿರುವ ಶಿಗ್ಗಾವಿ ತಾಲೂಕಿನ ಮುತ್ತಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಚಿರತೆ ಅಡ್ಡಾಡಿರುವ ಕುರಿತು ಅದರ ಹೆಜ್ಜೆ ಗುರುತು ಕಾಣಿಸಿಕೊಂಡಿದೆ.
ಚಿರತೆಯ ಚಲನ ವಲನದ ಕುರಿತು ನಿಗಾ ವಹಿಸಲು ಉಪ ವಲಯಾರಣ್ಯಾ ಧಿಕಾರಿ ನೇತೃತ್ವದಲ್ಲಿ ಇಲಾಖಾ ಸಿಬ್ಬಂದಿಯ ಎರಡು ತಂಡಗಳನ್ನು ರಚಿಸಲಾಗಿದೆ. ತಮ್ಮ ಸಿಬ್ಬಂದಿ ಗಡಿಯಂಚಿನ ಭಾಗದಲ್ಲಿ ಎರಡು ದಿನಗಳಿಂದ ಠಿಕಾಣಿ ಹೂಡಿ ನಿಗಾ ವಹಿಸಿದೆ ಎಂದು ವಲಯಾರಣ್ಯಾ ಧಿಕಾರಿ ಶ್ರೀಕಾಂತ ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್