ವೈದ್ಯರು ವಿಶ್ವಾಸಾರ್ಹತೆ ಉಳಿಸಿಕೊಳ್ಳಲಿ

•ಕಿಮ್ಸ್‌ನಲ್ಲಿ ವೈದ್ಯಕೀಯ ಉಪಕರಣ ಹಸ್ತಾಂತರ•ಚಿಕಿತ್ಸೆ ಜತೆ ಸೌಲಭ್ಯ ಕಲ್ಪಿಸಲು ಕ್ರಮ

Team Udayavani, Jun 29, 2019, 9:15 AM IST

hubali-tdy-1..

ಹುಬ್ಬಳ್ಳಿ: ಕಿಮ್ಸ್‌ನಲ್ಲಿ ರೋಟರಿ ನವಜಾತ ಶಿಶು ಆರೈಕೆ ಕೇಂದ್ರ, ಇಎನ್‌ಟಿ ವಿಭಾಗವನ್ನು ಡಿಸಿ ದೀಪಾ ಉದ್ಘಾಟಿಸಿದರು.

ಹುಬ್ಬಳ್ಳಿ: ವೈದ್ಯರು ರೋಗಿಗಳ ವಿಶ್ವಾಸಾರ್ಹತೆ ಮತ್ತು ನಂಬಿಕೆ ಉಳಿಸಿಕೊಳ್ಳುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ಹೇಳಿದರು.

ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ರೋಟರಿ ಕ್ಲಬ್‌ ಆಫ್‌ ಹುಬ್ಬಳ್ಳಿ ವತಿಯಿಂದ ಕಿಮ್ಸ್‌ನ ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಕೊಡಮಾಡಲಾದ ವಿವಿಧ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಬಹಳಷ್ಟು ಮಹಿಳೆಯರಿಗೆ ನವಜಾತ ಶಿಶುವಿನ ಬೆಳವಣಿಗೆ ಬಗ್ಗೆ ಅಷ್ಟೊಂದು ಮಾಹಿತಿ ಇರಲ್ಲ. ಅನೇಕ ತಾಯಂದಿರು ಹಾಗೂ ರೋಗಿಗಳಿಗೆ ಸೌಲಭ್ಯಗಳ ಬಗ್ಗೆ ಗೊತ್ತಿರಲ್ಲ. ವೈದ್ಯರು ಚಿಕಿತ್ಸೆ ಜತೆಗೆ ವೈದ್ಯಕೀಯ ಸೌಲಭ್ಯಗಳ ಮಾಹಿತಿ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕೆಂದರು.

ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಕಿಮ್ಸ್‌ ಕೇಂದ್ರಬಿಂದುವಾಗಿದ್ದು, ವೈದ್ಯಕೀಯ ಸೌಲಭ್ಯಗಳ ಜತೆ ಮೂಲಸೌಕರ್ಯ ಒದಗಿಸಲು ಒತ್ತು ಕೊಡಲಾಗುವುದು. ರೋಟರಿ ಕ್ಲಬ್‌ನ ಸಾಮಾಜಿಕ ಕಾರ್ಯ ಶ್ಲಾಘನೀಯವಾದದ್ದು. ಅದರಲ್ಲೂ ಭಾರತವನ್ನು ಪೊಲೀಯೋ ಮುಕ್ತವಾಗಿ ಮಾಡುವಲ್ಲಿ ಗಮನಾರ್ಹ ಕಾರ್ಯ ಮಾಡಿದೆ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ರೋಟರಿ ನವಜಾತ ಶಿಶು ಆರೈಕೆ ಕೇಂದ್ರ, ಇಎನ್‌ಟಿ ವಿಭಾಗ ಹಾಗೂ ಎನ್‌ಐಸಿಯು ಕರ್ತವ್ಯನಿರತ ವೈದ್ಯರ ಕೊಠಡಿ ಉದ್ಘಾಟಿಸಿದರು.

ಕಿಮ್ಸ್‌ನ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ ಮಾತನಾಡಿ, ಕಿಮ್ಸ್‌ನಲ್ಲಿ 10-15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಬಡ್ತಿ ಸಿಕ್ಕಿರಲಿಲ್ಲ. ಹಲವು ಕೊರತೆಗಳ ನಡುವೆಯೂ ಉತ್ತಮ ಸೌಲಭ್ಯ ನೀಡುತ್ತಿದೆ. ಇನ್ನಷ್ಟು ಸೌಲಭ್ಯಗಳ ಅವಶ್ಯವಿದೆ. ಈಗ 130 ಸಿಬ್ಬಂದಿಗೆ ಬಡ್ತಿ ದೊರೆತಿದೆ. ಶೀಘ್ರವೇ ಸುಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗ ಆರಂಭಿಸಲಾಗುವುದು. ನಂತರದ ದಿನಗಳಲ್ಲಿ ಸುಪರ್‌ ಸ್ಪೆಶಾಲಿಟಿ ವಿಭಾಗಗಳನ್ನು ಆರಂಭಿಸಲಾಗುವುದು. ಮಕ್ಕಳ ಮತ್ತು ತಾಯಿ ಘಟಕವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದರು.

ರೋಟರಿ ಚಾರಿಟೇಬಲ್ ಟ್ರಸ್ಟ್‌ ಚೇರ್ಮನ್‌ ಎಂ.ವಿ. ಕರಮರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನವಜಾತ ಶಿಶುಗಳ ಮರಣ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಕಿಮ್ಸ್‌ ಆಸ್ಪತ್ರೆ ಮಕ್ಕಳ ವಿಭಾಗಕ್ಕೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳನ್ನು ಕೊಡಲಾಗಿದೆ. ಅಂದಾಜು 30ಲಕ್ಷ ರೂ. ವೆಚ್ಚದಲ್ಲಿ ನವಜಾತ ಶಿಶುವಿನ ಹಾಸಿಗೆ ಪಕ್ಕದಲ್ಲೇ ತಪಾಸಣೆ ಮಾಡುವಂಥ ಅಲಾó ಸೋನೋಗ್ರಾಫಿಕ್‌ ಯಂತ್ರ, ಸಿರೀಂಜ್‌ ಪಂಪ್ಸ್‌, ಪಲ್ಸ್ ಓಕ್ಸಿಮೀಟರ್‌/ಮಲ್ಟಿಪರಾ ಮಾನಿಟರ್‌, ಓಟೋ ಅಕಾಸ್ಟಿಕ್‌ ಎಮಿಷನ್‌ ಯಂತ್ರಗಳನ್ನು ನೀಡಲಾಗಿದೆ ಎಂದರು.

ರೋಟರಿ ಕ್ಲಬ್‌ ಆಫ್‌ ಹುಬ್ಬಳ್ಳಿ ಅಧ್ಯಕ್ಷ ಅಬ್ದುಲ್ ಸಾದಿಕ್‌ ಮಾತನಾಡಿ, ರೋಟರಿ ಕ್ಲಬ್‌ ಸಮಾಜಮುಖೀ ಕಾರ್ಯ ಮಾಡುತ್ತಿದ್ದು, ಮುಂದುವರಿಸಿಕೊಂಡು ಹೋಗುತ್ತದೆ ಎಂದರು.

ಡಾ|ಜಿ.ಬಿ. ಸತ್ತೂರ, ಡಾ|ರಾಘವೇಂದ್ರ ದೇಸಾಯಿ, ರೋಟರಿ ಕ್ಲಬ್‌ನ ಕಾರ್ಯದರ್ಶಿ ಸುರೇಂದ್ರ ಪೋರವಾಲ ಮೊದಲಾದವರಿದ್ದರು. ಕಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ| ಪ್ರಕಾಶ ವಾರಿ ಪ್ರಾಸ್ತಾವಿಕ ಮಾತನಾಡಿದರು. ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ| ರವೀಂದ್ರ ಗದಗ ಸ್ವಾಗತಿಸಿದರು. ಡಾ|ಶುಭಾ ಪ್ರಾರ್ಥಿಸಿದರು.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.