ಪತ್ರ ಚಳವಳಿ-ಸಹಿ ಸಂಗ್ರಹ ಆಂದೋಲನ ಹೆಜ್ಜೆ

ಸಾರಿಗೆ ಸಿಬ್ಬಂದಿಯನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಗೆ ಮರುಜೀವ

Team Udayavani, Jun 17, 2019, 12:41 PM IST

hubali-tdy-4..

ಹುಬ್ಬಳ್ಳಿ: ಪತ್ರ ಚಳುವಳಿಗೆ ಮುಂದಾಗಿರುವ ಸಾರಿಗೆ ನೌಕರರು.

ಹುಬ್ಬಳ್ಳಿ: ಸಾರಿಗೆ ನೌಕರರನನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು ಎನ್ನುವ ಬೇಡಿಕೆ ಅಭಿಯಾನ ರೂಪ ಪಡೆದುಕೊಂಡಿದ್ದು, ತಮ್ಮ ಹಕ್ಕು ಪಡೆಯಲು ಇದೀಗ ಸರಕಾರದ ಮೇಲೆ ತೀವ್ರ ಒತ್ತಡ ಹೇರಲು ಪತ್ರ ಚಳವಳಿ, ಸಹಿ ಸಂಗ್ರಹ ಆಂದೋಲನಕ್ಕೆ ಸಾರಿಗೆ ನೌಕರರು ಅಣಿಯಾಗಿದ್ದಾರೆ.

ಸಾರಿಗೆ ನೌಕರರನ್ನು ಸರಕಾರಿ ನೌಕರರಾಗಿ ಪರಿಗಣಿಸಬೇಕು ಎಂಬುದು ಸಾರಿಗೆ ನೌಕರರ ಹಳೆಯ ಬೇಡಿಕೆ. ಯಾವ ಸಂಘಟನೆಗಳು ಈ ಬೇಡಿಕೆ ಕುರಿತು ಅಷ್ಟೊಂದಾಗಿ ಒತ್ತು ನೀಡಿರಲಿಲ್ಲ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಯಾದರೆ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಘೋಷಿಸುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಈ ಬೇಡಿಕೆಗೆ ಮರು ಜೀವ ಬಂದಂತಾಗಿದ್ದು, ಇದೀಗ ಅಭಿಯಾನ ರೂಪ ಪಡೆದಿದೆ. ರಾಜ್ಯದ ನಾಲ್ಕೂ ನಿಗಮಗಳ ನೌಕರರು ಪತ್ರ ಚಳವಳಿ, ಸಹಿ ಸಂಗ್ರಹ ಆಂದೋಲನಕ್ಕೆ ಮುಂದಾಗಿದ್ದಾರೆ.

ಸಿದ್ಧಗೊಂಡ ವೇದಿಕೆ: ಇದಕ್ಕಾಗಿಯೇ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅವರ ಮಾರ್ಗದರ್ಶನದಲ್ಲಿ ಕೆಎಸ್‌ಆರ್‌ಟಿಸಿ ನಿಗಮಗಳ ನೌಕರರ ಮೂಲಭೂತ ಹೋರಾಟ ವೇದಿಕೆ ರಚನೆಯಾಗಿದೆ. ಮೂರು ವರ್ಷದ ಹಿಂದೆ ಜನ್ಮ ತಾಳಿದ ವೇದಿಕೆ ಎಚ್.ಡಿ.ಕುಮಾರಸ್ವಾಮಿ ಅವರು ನೀಡಿದ ಭರವಸೆಯಿಂದ ಮತ್ತಷ್ಟು ಚುರುಕುಕೊಂಡಿದ್ದು, ಒಂದೇ ವರ್ಷದಲ್ಲಿ 32 ಸಾವಿರ ನೌಕರರು ಸದಸ್ಯತ್ವ ನೋಂದಾಯಿಸಿದ್ದಾರೆ. ಅಧಿಕಾರಿಗಳು ಹಾಗೂ ಕಾರ್ಮಿಕರು ಒಗ್ಗೂಡಿಕೊಂಡಿರುವ ವೇದಿಕೆ ಇದಾಗಿದ್ದು, ಈ ಬೇಡಿಕೆಗೆ ನೇರವಾಗಿ ಆಡಳಿತ ವರ್ಗ ಸಹಕಾರ ನೀಡಿದೆ. ಇದು ನಮ್ಮ ಬೇಡಿಕೆಯಲ್ಲ, ನಮ್ಮ ಹಕ್ಕು ಎಂಬುದು ವೇದಿಕೆಯ ಚಿಂತನೆಯಾಗಿದೆ.

ಹೀಗಿದೆ ಹೋರಾಟ: ಕಳೆದ ಒಂದು ವರ್ಷದಿಂದ ಸುಮಾರು 100ಕ್ಕೂ ಹೆಚ್ಚು ಶಾಸಕರು, ವಿಧಾನ ಪರಿಷತ್‌ ಸದಸ್ಯರಿಗೆ ಈ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಲಿಖೀತವಾಗಿ ಮನವಿ ಮಾಡಿದ್ದಾರೆ. ಎರಡನೇ ಭಾಗವಾಗಿ ಪತ್ರ ಚಳವಳಿ ಆರಂಭಿಸಿದ್ದು, ಘಟಕ, ವಿಭಾಗ ಕಚೇರಿಗಳ ಹಂತದಲ್ಲಿ ನೇರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆಯುವ ಚಳವಳಿ ಆರಂಭವಾಗಿದೆ. ಆಂತರಿಕವಾಗಿ ನಡೆಯುತ್ತಿರುವುದರಿಂದ ಬಹುತೇಕ ನೌಕರರು ಪತ್ರ ಚಳವಳಿ ಬೆಂಬಲಿಸಿದ್ದಾರೆ. 1.50 ಲಕ್ಷ ನೌಕರರು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಪಣ ತೊಟ್ಟಿದ್ದು, ಮುಂದಿನ ಹಂತದಲ್ಲಿ ನೌಕರರೆಲ್ಲರೂ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ನಿತ್ಯವೂ ಕೆಲಸ ಮಾಡುವುದಾಗಿ ನಿರ್ಧರಿಸಲಾಗಿದೆ. ಸರಕಾರ ಸಾರಿಗೆ ಸಂಸ್ಥೆಗಳನ್ನು ಕಡೆಗಣಿಸುತ್ತಿರುವುದರ ಪರಿಣಾಮವೇ ಈ ಅಭಿಯಾನ ಆರಂಭಗೊಂಡಿದೆ.

ಇತರೆ ಸಂಘಟನೆಗಳು ಸಿದ್ಧ: ಏಕೈಕ ಬೇಡಿಕೆಯಿಟ್ಟುಕೊಂಡ ಕಾರ್ಯಪ್ರವೃತ್ತವಾದ ವೇದಿಕೆಯ ಹೋರಾಟಕ್ಕೆ ಇದೀಗ ಹಲವು ಸಂಘ ಸಂಸ್ಥೆಗಳು, ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ. ಇದೇ ಮಾದರಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರ ಕನ್ನಡ ಕೃಷಿ ಪ್ರತಿಷ್ಠಾನ ಬೆಂಗಳೂರು ಭಾಗದಲ್ಲಿ ಬೃಹತ್‌ ಸಹಿ ಸಂಗ್ರಹ ಆಂದೋಲನಕ್ಕೆ ಮುಂದಾಗಿದೆ. ಕರವೇ ರಾಜ್ಯಾಧ್ಯಕ್ಷ ಕೆ.ನಾರಾಯಣಗೌಡ ಅವರ ಬೆಂಬಲವೂ ದೊರೆತಿದೆ. ಒಂದೇ ಬೇಡಿಕೆಗೆ ಶ್ರಮಿಸುತ್ತಿರುವ ಎಲ್ಲಾ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಬೃಹತ್‌ ಹೋರಾಟ ಆರಂಭಿಸುವ ಚಿಂತನೆ ಮುಖಂಡರಲ್ಲಿದೆ.

ಹೋರಾಟಕ್ಕೆ ಇಮ್ಮಡಿ: ಸಾರಿಗೆ ನೌಕರರನ್ನು ಸರಕಾರಿ ನೌಕಕರರೆಂದು ಪರಿಗಣಿಸಲು ಅಸಾಧ್ಯ ಎನ್ನುವ ಅಭಿಪ್ರಾಯಗಳಿದ್ದವು. ಆದರೆ ಪಕ್ಕದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನರೆಡ್ಡಿ ಅಧಿಕಾರ ವಹಿಸಿಕೊಂಡು ವಾರದಲ್ಲೇ ಅಲ್ಲಿನ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಅಧಿಕೃತ ಘೋಷಣೆ ಮಾಡಿರುವುದು ಹೋರಾಟ ಇಮ್ಮಡಿಗೊಳಿಸಿದೆ. ಆಂಧ್ರದಲ್ಲಾದ ಬದಲಾವಣೆಯನ್ನೇ ಉದಾಹರಣೆಯಾಗಿಟ್ಟುಕೊಂಡು ನೌಕರರನ್ನು ಹೊರಾಟಕ್ಕೆ ಅಣಿಗೊಳಿಸಲಾಗುತ್ತಿದೆ.

•ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.